UP; ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಮೇಲೆ ಗುಂಡಿನ ದಾಳಿ
Team Udayavani, Jun 28, 2023, 9:40 PM IST
ಸಹರಾನ್ಪುರ: ಆಜಾದ್ ಸಮಾಜ ಪಕ್ಷದ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರು ಬುಧವಾರ ಉತ್ತರ ಪ್ರದೇಶದ ಸಹರಾನ್ಪುರದಲ್ಲಿ ತಮ್ಮ ಕಾರಿನೊಳಗೆ ತೆರಳುತ್ತಿದ್ದಾಗ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.
ಪೊಲೀಸರ ಪ್ರಕಾರ, ಬುಲೆಟ್ ಅವರ ಹೊಟ್ಟೆಯೊಳಗೆ ತೂರಿಕೊಂಡಿದ್ದು ಮತ್ತು ಅವರನ್ನು ದೇವ್ಬಂದ್ನ ಆಸ್ಪತ್ರೆಗೆ ಸಾಗಿಸಲಾಗಿದ್ದು ನಂತರ ಹೆಚ್ಚಿನ ಚಿಕಿತ್ಸೆಗಾಗಿ ಸಹರಾನ್ಪುರ ಸಿವಿಲ್ ಆಸ್ಪತ್ರೆಗೆ ವರ್ಗಾಯಿಸಲಾಗಿದ್ದು, ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ.
“ಸಂಜೆ 5 ಗಂಟೆ ಸುಮಾರಿಗೆ, ದೇವಬಂದ್ನಲ್ಲಿ ಕೆಲವು ದುಷ್ಕರ್ಮಿಗಳು ಆಜಾದ್ ಅವರ ವಾಹನದ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಪೊಲೀಸರಿಗೆ ಮಾಹಿತಿ ಸಿಕ್ಕಿತು. ತಕ್ಷಣ ಸ್ಥಳಕ್ಕೆ ಬಂದು ನೋಡಿದಾಗ ಗುಂಡು ಅವರ ಹೊಟ್ಟೆಗೆ ತಗುಲಿತ್ತು. ಅವರು ಈಗ ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ ಎಂದು ಸಹರಾನ್ಪುರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಪಿನ್ ತಾಡಾ ತಿಳಿಸಿದ್ದಾರೆ.