ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಬಂಧನ
Team Udayavani, Dec 21, 2019, 3:59 PM IST
ನವದೆಹಲಿ: ಪೌರತ್ವ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ದೆಹಲಿಯ ಜಾಮಾ ಮಸೀದಿಯಲ್ಲಿ ನಡೆದಿದ್ದ ಭಾರೀ ಪ್ರತಿಭಟನೆಯ ಸಂದರ್ಭದಲ್ಲಿ ಪೊಲೀಸರ ಕೈಯಿಂದ ತಪ್ಪಿಸಿಕೊಂಡಿದ್ದ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರನ್ನು ಇಂದು ಬೆಳಿಗ್ಗೆ ದೆಹಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು ಮತ್ತು ಆ ಬಳಿಕ ಅಜಾದ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಪೊಲೀಸರ ಸೂಚನೆಯನ್ನೂ ಧಿಕ್ಕರಿಸಿ ಸಾವಿರಾರು ಪ್ರತಿಭಟನಕಾರರು ದೆಹಲಿಯ ಜಾಮಾ ಮಸೀದಿಯಿಂದ ಪ್ರತಿಭಟನೆ ಹೊರಟಿದ್ದರು. ಬಳಿಕ ಪೊಲೀಸರು ಪ್ರತಿಭಟನಕಾರರನ್ನು ದೆಹಲಿ ಗೇಟ್ ಬಳಿ ತಡೆಯಲಾಗಿತ್ತು. ಈ ಸಂದರ್ಭದಲ್ಲಿ ಪ್ರತಿಭಟನಕಾರರ ನಡುವೆ ಇದ್ದ ಚಂದ್ರಶೇಖರ್ ಆಜಾದ್ ಸಂವಿಧಾನದ ಪ್ರತಿಯನ್ನು ಹಿಡಿದುಕೊಂಡು ತನ್ನ ಬೆಂಬಲವನ್ನು ಸೂಚಿಸಿದ್ದರು.
ಶುಕ್ರವಾರದ ಪ್ರತಿಭಟನೆಯ ಸಂದರ್ಭದಲ್ಲಿ ಚಂದ್ರಶೇಖರ್ ಆಜಾದ್ ಅವರನ್ನು ಬಂಧಿಸುವ ಪೊಲೀಸರ ಪ್ರಯತ್ನಗಳು ವಿಫಲಗೊಂಡಿತ್ತು. ಹಳೇ ದೆಹಲಿಯಲ್ಲಿರುವ ಜಾಮಾ ಮಸೀದಿ ಪ್ರದೇಶದಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ ಹಾಗೂ ಎಲ್ಲಾ ಪ್ರವೇಶ ಹಾಗೂ ನಿರ್ಗಮನ ದ್ವಾರಗಳನ್ನು ಮುಚ್ಚಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್