- Monday 16 Dec 2019
ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ
Team Udayavani, Nov 4, 2017, 10:06 AM IST
ಭೋಪಾಲ್: ಐಎಎಸ್ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ 19ರ ಯುವತಿ ಮೇಲೆ ನಾಲ್ವರು ದುಷ್ಕರ್ಮಿಗಳು 3 ಗಂಟೆಗಳ ಕಾಲ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಮಧ್ಯಪ್ರದೇಶದ ಭೋಪಾಲ್ನಲ್ಲಿ ನಡೆದಿದೆ. ಯುವತಿಯನ್ನು ಮರಕ್ಕೆ ಕಟ್ಟಿಹಾಕಿ, ಅತ್ಯಾಚಾರ ನಡೆಸಿದ ಈ ತಂಡ ಮಧ್ಯೆ ಟೀ ಮತ್ತು ಗುಟ್ಕಾ ತಿನ್ನಲು ವಿರಾಮ ಕೂಡ ಪಡೆದಿತ್ತು ಎಂಬ ಅಂಶ ಬೆಳಕಿಗೆ ಬಂದಿದೆ.
ಈ ಪ್ರಕರಣದ ಇನ್ನೂ ಅತ್ಯಂತ ಹೇಯ ಭಾಗವೆಂದರೆ, ಸ್ವತಃ ಅತ್ಯಾಚಾರ ಸಂತ್ರಸ್ತೆಯೇ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದರೂ ಪೊಲೀಸರು, “ಇದು ಸಿನಿಮಾ ಕಥೆಯಂತಿದೆ’ ಎಂದು ಹೇಳಿ ದೂರು ದಾಖಲಿಸಲು ನಿರಾಕರಿಸಿದ್ದಾರೆ. ಕಡೆಗೆ ಸಂತ್ರಸ್ತೆ ಮತ್ತು ಆಕೆಯ ಹೆತ್ತವರು ಇಬ್ಬರು ಆರೋಪಿಗಳನ್ನು ಅಟ್ಟಾಡಿಸಿಕೊಂಡು ಹೋಗಿ ಹಿಡಿದು, ಪೊಲೀಸರಿಗೆ ಒಪ್ಪಿಸಿದ ಬಳಿಕವೇ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆ, ಸರಕಾರವು ದೂರು ದಾಖಲಿಸಿ ಕೊಳ್ಳಲು ನಿರಾಕರಿಸಿದ ಸಬ್ ಇನ್ಸ್ಪೆಕ್ಟರನ್ನು ವರ್ಗಾವಣೆ ಮಾಡಿದ್ದು, ನಾಲ್ವರು ಪೊಲೀಸರನ್ನು ಅಮಾನತುಗೊಳಿಸಿದೆ. ಯುವತಿಯು ಆರ್ಪಿಎಫ್ ಅಧಿಕಾರಿಯ ಪುತ್ರಿಯಾಗಿದ್ದು, ಐಎಎಸ್ ಪರೀಕ್ಷೆಗೆ ತರಬೇತಿಗಾಗಿ ಪ್ರತಿದಿನ ಹಬೀಬ್ಗಂಜ್ ರೈಲು ನಿಲ್ದಾಣದಿಂದ ಪ್ರಯಾಣಿಸುತ್ತಿದ್ದಳು. ನಿಲ್ದಾಣದಿಂದಲೇ ಎಳೆದೊಯ್ದ ದುಷ್ಕರ್ಮಿಗಳು, ಈ ಕೃತ್ಯ ಎಸಗಿದ್ದಾರೆ.
ಈ ವಿಭಾಗದಿಂದ ಇನ್ನಷ್ಟು
-
ಹೊಸದಿಲ್ಲಿ: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಈಶಾನ್ಯ ರಾಜ್ಯದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯ ಕಿಚ್ಚು ರಾಷ್ಟ್ರ ರಾಜಧಾನಿ ಹೊಸದಿಲ್ಲಿಗೂ ಹಬ್ಬಿದೆ....
-
ರಾಂಚಿ: ಜಾರ್ಖಂಡ್ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಜಾರಿಯಲ್ಲಿದ್ದು ನಾಲ್ಕನೇ ಹಂತದ ಮತದಾನ ಸೋಮವಾರ ನಡೆಯುತ್ತಿದೆ. ಮತದಾನ ನಡೆಯುವ ಕ್ಷೇತ್ರಗಳಲ್ಲಿ ಬಿಗಿ...
-
ಹೊಸದಿಲ್ಲಿ: ಉನ್ನಾವ್ನಲ್ಲಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸದಿಲ್ಲಿಯ ಸ್ಥಳೀಯ ಕೋರ್ಟ್ ಸೋಮವಾರ (ಡಿ.16) ತೀರ್ಪು ಪ್ರಕಟಿಸಲಿದೆ. ಬಿಜೆಪಿಯ...
-
ನಾಗ್ಪುರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ 'ಸಾವರ್ಕರ್ ವಿವಾದ' ಇನ್ನೂ ತಣ್ಣಗಾಗಿಲ್ಲ. 'ಕ್ಷಮೆ ಕೇಳಲು ನಾನು ರಾಹುಲ್ ಸಾವರ್ಕರ್ ಅಲ್ಲ' ಎಂಬ ರಾಹುಲ್...
-
ಹೊಸದಿಲ್ಲಿ: ಧಾರ್ಮಿಕ ಅಲ್ಪಸಂಖ್ಯಾಕರ ಮೇಲೆ ನಿರಂತರ ದೌರ್ಜನ್ಯ ಎಸಗುತ್ತಿರುವ ಪಾಕಿ ಸ್ಥಾನಕ್ಕೆ ವಿಶ್ವಸಂಸ್ಥೆಯ ಆಯೋಗವೊಂದು ಛೀಮಾರಿ ಹಾಕಿದೆ. ಈ ಬೆಳವಣಿಗೆಯಿಂದಾಗಿ...
ಹೊಸ ಸೇರ್ಪಡೆ
-
ಹೊಸದಿಲ್ಲಿ: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಈಶಾನ್ಯ ರಾಜ್ಯದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯ ಕಿಚ್ಚು ರಾಷ್ಟ್ರ ರಾಜಧಾನಿ ಹೊಸದಿಲ್ಲಿಗೂ ಹಬ್ಬಿದೆ....
-
ರಾಂಚಿ: ಜಾರ್ಖಂಡ್ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಜಾರಿಯಲ್ಲಿದ್ದು ನಾಲ್ಕನೇ ಹಂತದ ಮತದಾನ ಸೋಮವಾರ ನಡೆಯುತ್ತಿದೆ. ಮತದಾನ ನಡೆಯುವ ಕ್ಷೇತ್ರಗಳಲ್ಲಿ ಬಿಗಿ...
-
ಕೋಲ್ಕತಾ: ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (ಬಿಇಎಂಎಲ್)ನಲ್ಲಿ ಕೇಂದ್ರ ಸರಕಾರ ತಾನು ಹೊಂದಿರುವ ಶೇ.28ರಷ್ಟು ಷೇರುಗಳನ್ನು ಮಾರುವ ಸಾಧ್ಯತೆ ಇದೆ. ಉಳಿದಿರುವ...
-
ಹೊಸದಿಲ್ಲಿ: ಉನ್ನಾವ್ನಲ್ಲಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸದಿಲ್ಲಿಯ ಸ್ಥಳೀಯ ಕೋರ್ಟ್ ಸೋಮವಾರ (ಡಿ.16) ತೀರ್ಪು ಪ್ರಕಟಿಸಲಿದೆ. ಬಿಜೆಪಿಯ...
-
"ನನ್ನ 38 ವರ್ಷಗಳ ಸಿನಿಮಾ ಜರ್ನಿ ಸಾರ್ಥಕವೆನಿಸಿದೆ. ಸಿನಿಮಾರಂಗದಲ್ಲಿ ನೆಮ್ಮದಿ ಸಿಕ್ಕಾಗಿದೆ. ಇನ್ನು ಸಾಕು ಅಂದುಕೊಂಡಿದ್ದೆ. ಆದರೆ, ಕವಿರಾಜ್, ನೀವು ಸುಮ್ಮನೆ...