ಛತ್ತೀಸ್‌ಗಡಕ್ಕೆ ಬಘೇಲ್‌ ಸಾರಥ್ಯ


Team Udayavani, Dec 17, 2018, 6:00 AM IST

bhupesh-baghel.jpg

ರಾಯು³ರ/ಹೊಸದಿಲ್ಲಿ: ಸತತ 5 ದಿನಗಳ ಸಸ್ಪೆನ್ಸ್‌ಗೆ ಕೊನೆಗೂ ತೆರೆಬಿದ್ದಿದ್ದು, ಛತ್ತೀಸ್‌ಗಡದ ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್‌ ಹಿರಿಯ ನಾಯಕ ಭೂಪೇಶ್‌ ಬಘೇಲ್‌ ನೇಮಕಗೊಂಡಿದ್ದಾರೆ. 

ನಾಲ್ವರು ಸಿಎಂ ಆಕಾಂಕ್ಷಿಗಳೊಂದಿಗೆ ನಡೆದ ಹಲವು ಸುತ್ತಿನ ಮಾತುಕತೆಗಳ ಬಳಿಕ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಭೂಪೇಶ್‌ ಹೆಗಲಿಗೆ ಛತ್ತೀಸ್‌ಗಡದ ಹೊಣೆಯನ್ನು ವಹಿಸಿದ್ದಾರೆ.

ರಾಯು³ರದಲ್ಲಿ ಭಾನುವಾರ ನಡೆದ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಬಳಿಕ ಪಕ್ಷದ ನಾಯಕ ಮಲ್ಲಿ ಕಾರ್ಜುನ ಖರ್ಗೆ ಅವರು ಈ ಘೋಷಣೆ ಮಾಡಿದ್ದಾರೆ. ಸೋಮವಾರ ಸಂಜೆ 5 ಗಂಟೆಗೆ ಬಘೇಲ್‌ ಅವರು ಮುಖ್ಯಮಂತ್ರಿ ಯಾಗಿ ಪ್ರಮಾಣ ಸ್ವೀಕರಿಸಲಿದ್ದಾರೆ. ಅವರೊಂದಿಗೆ ಬೇರೆ ಯಾವ ಸಚಿವರೂ ಪ್ರಮಾಣ ವಚನ ಸ್ವೀಕ ರಿಸುವುದಿಲ್ಲ ಎಂದು ಖರ್ಗೆ ತಿಳಿಸಿದ್ದಾರೆ.

ಟಿ.ಎಸ್‌.ಸಿಂಗ್‌ ದೇವ್‌, ಚರಣ ದಾಸ್‌ ಮಹಾಂತ್‌, ತಾಮ್ರಧ್ವಜ ಸಾಹೂ ಹಾಗೂ ಬಘೇಲ್‌ ನಡುವೆ ಸಿಎಂ ಹುದ್ದೆಗೆ ತೀವ್ರ ಪೈಪೋಟಿ ಇದ್ದ ಕಾರಣ, ನೇಮಕ ವಿಳಂಬ ವಾಯಿತು. ನಾಲ್ವರು ನಾಯಕರೂ ಪಕ್ಷ ಕ್ಕಾಗಿ ಸಮಾನ ಕೊಡುಗೆ ನೀಡಿದ್ದಾರೆ. ಹೀಗಾಗಿ ಆಯ್ಕೆ ಕಷ್ಟವಾಯಿತು ಎಂದು ಖರ್ಗೆ ಹೇಳಿದ್ದಾರೆ. ಸಿಎಂ ಘೋಷಣೆ ಹೊರ ಬೀಳುತ್ತಿದ್ದಂತೆ, ಛತ್ತೀಸ್‌ಗಡದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ವಿಜಯೋತ್ಸವ ನಡೆಸಿದ್ದಾರೆ.

ಬಳಿಕ ಮಾತನಾಡಿದ ನಿಯೋಜಿತ ಸಿಎಂ ಬಘೇಲಾ, “ಮೊದಲ ಸಂಪುಟ ಸಭೆಯಲ್ಲೇ ರೈತರ ಸಾಲ ಮನ್ನಾ ಮಾಡುವುದು ಮತ್ತು 5 ವರ್ಷಗಳ ಹಿಂದೆ ಬಸ್ತಾರ್‌ನಲ್ಲಿ ಕಾಂಗ್ರೆಸ್‌ನ ಸಂಪೂರ್ಣ ರಾಜ್ಯ ನಾಯಕರ ಸಾವಿಗೆ ಕಾರಣವಾದ ನಕ್ಸಲ್‌ ದಾಳಿಯ ತನಿಖೆ ನಡೆವುದು ಪ್ರಮುಖ ಆದ್ಯತೆ’ ಎಂದಿದ್ದಾರೆ. 

ಪ್ರಮಾಣ ಸ್ವೀಕಾರದಲ್ಲಿ ನಾಯ್ಡು ಭಾಗಿ?: ಸೋಮವಾರ ಮಧ್ಯಪ್ರದೇಶ ಸಿಎಂ ಆಗಿ ಕಮಲ್‌ ನಾಥ್‌, ರಾಜಸ್ಥಾನ ಸಿಎಂ ಆಗಿ ಗೆಹೊÉàಟ್‌ ಪ್ರಮಾಣವಚನ ಸ್ವೀಕರಿಸ ಲಿದ್ದು, ಈ ಕಾರ್ಯಕ್ರಮದಲ್ಲಿ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಅವರು ಭಾಗಿಯಾಗುವ ನಿರೀಕ್ಷೆಯಿದೆ. ನಾಯ್ಡು ಅವರಿಗೆ ಇಬ್ಬರು ನಾಯಕರೂ ಆಹ್ವಾನ ನೀಡಿದ್ದಾರೆ.

ದೆಹಲಿಯಲ್ಲಿ ಕಾಂಗ್ರೆಸ್‌-ಆಪ್‌ ಮೈತ್ರಿ?: ಮುಂದಿನ ಲೋಕಸಭೆ ಚುನಾವಣೆ ವೇಳೆ ದೆಹಲಿಯಲ್ಲಿನ 7 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಹಾಗೂ ಆಮ್‌ ಆದ್ಮಿ ಪಕ್ಷ ಮೈತ್ರಿ ಮಾಡಿಕೊಳ್ಳ ಲಿದೆಯೇ? ಎರಡೂ ಪಕ್ಷಗಳ ನಡುವೆ ಹಿಂಬಾಗಿಲ ಮಾತುಕತೆ ನಡೆಯುತ್ತಿದ್ದು, ಇದು ಸಫ‌ಲವಾದರೆ ಮೈತ್ರಿ ಖಚಿತ ಎಂದು ಮೂಲಗಳು ತಿಳಿಸಿವೆ. 

ಕಾಂಗ್ರೆಸ್‌ ಗೆಲುವಿನ ರೂವಾರಿ ಬಘೇಲ್‌
ಛತ್ತೀಸ್‌ಗಡದಲ್ಲಿ 5 ವರ್ಷಗಳ ಹಿಂದೆ ಕಾಂಗ್ರೆಸ್‌ನ ಪ್ರಮುಖ ನಾಯಕ ರೆಲ್ಲರೂ ನಕ್ಸಲರ ಭೀಕರ ದಾಳಿಗೆ ಬಲಿಯಾಗಿ, ಪಕ್ಷಕ್ಕೆ ನಾಯಕರೇ ಇಲ್ಲ ಎಂಬಂಥ ಸ್ಥಿತಿ ನಿರ್ಮಾಣವಾಗಿತ್ತು. ಇಂಥ ಕ್ಲಿಷ್ಟಕರ ಸ್ಥಿತಿಯಲ್ಲೂ ಕಾಂಗ್ರೆಸ್‌ ಅನ್ನು ಫೀನಿಕ್ಸ್‌ ನಂತೆ ಎದ್ದುಬರಲು ಸಹಾಯ ಮಾಡಿದವರಲ್ಲಿ ಭೂಪೇಶ್‌ ಬಘೇಲ್‌ ಪ್ರಮುಖರು. ಒಬಿಸಿ ಕುರ್ಮಿ ಸಮುದಾಯಕ್ಕೆ ಸೇರಿರುವ ಬಘೇಲ್‌(57), ಉತ್ತಮ ನಾಯಕತ್ವ ಗುಣ ಹೊಂದಿರುವ ಮುತ್ಸದ್ದಿ. 2014 ರ ಅಕ್ಟೋಬರ್‌ನಲ್ಲಿ ಕಾಂಗ್ರೆಸ್‌ನ ಅಧ್ಯಕ್ಷ ಸ್ಥಾನಕ್ಕೇರಿದ ಅವರು, 15 ವರ್ಷಗಳ ಬಿಜೆಪಿ ಆಡಳಿತ ವನ್ನು ಕೊನೆಗಾಣಿಸು ವಲ್ಲಿ ಯಶಸ್ವಿಯಾದವರು. “ಬೀದಿ ಹೋರಾಟಗಾರ'(ಸ್ಟ್ರೀಟ್‌ ಫೈಟರ್‌) ಎಂದೇ ಖ್ಯಾತರಾಗಿರುವ ಬಘೇಲ್‌, ಸ್ವತಃ ಕಾಂಗ್ರೆಸ್‌ ಕೂಡ ಊಹಿಸದ ರೀತಿಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಅವರ ಈ ಪರಿಶ್ರಮಕ್ಕೆ ಪ್ರತಿಯಾಗಿ ಬಘೇಲ್‌ರನ್ನು ಸಿಎಂ ಎಂದು ಕಾಂಗ್ರೆಸ್‌ ಘೋಷಿಸಿದೆ.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.