ಕೊನೆಗೂ ಭೂಪೇಶ್ ಬಗಲಿಗೆ ಛತ್ತೀಸ್ಗಢ ಮುಖ್ಯಮಂತ್ರಿ ಹುದ್ದೆ
Team Udayavani, Dec 16, 2018, 2:15 PM IST
ರಾಯ್ಪುರ: 5 ದಿನಗಳ ರಹಸ್ಯಕ್ಕೆ ಕಾಂಗ್ರೆಸ್ ನಾಯಕರು ಕೊನೆಗೂ ಅಂತ್ಯ ಹಾಡಿದ್ದು ಛತ್ತೀಸ್ಘಡದ ನೂತನ ಮುಖ್ಯಮಂತ್ರಿಯನ್ನಾಗಿ ಭೂಪೇಶ್ ಬಘೇಲ್ ಅವರನ್ನು ಆಯ್ಕೆ ಮಾಡಲಾಗಿದೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಸಿದ ಬಳಿಕ ಸರ್ವಾನುಮತದಿಂದ ಬಘೇಲ್ ಅವರನ್ನು ಸಿಎಂ ಆಗಿ ಆಯ್ಕೆ ಮಾಡಲಾಗಿದೆ.
ರಾಹುಲ್ ಗಾಂಧಿ ಅವರು ಕಾಂಗ್ರೆಸ್ ನಾಯಕರೊಂದಿಗೆ ಹಲವು ಸುತ್ತುಗಳ ಸಭೆ ಬಳಿಕ ಬಘೇಲ್ ಅವರನ್ನು ಆಯ್ಕೆ ಮಾಡಿದ್ದಾರೆ. ಮಲ್ಲಿಕಾರ್ಜುನ ಖರ್ಗೆ, ಪಿ.ಎಲ್.ಪೂನಿಯಾ ಅವರು ರಾಹುಲ್ ನಡೆಸಿದ ಸಭೆಯಲ್ಲಿ ಪಾಲ್ಗೊಂಡು ಸಲಹೆ ನೀಡಿದ್ದರು.
ಮುಖ್ಯಮಂತ್ರಿ ಹುದ್ದೆಗೆ ಬಘೇಲ್ ಅವರಿಗೆ ಟಿ.ಎಸ್.ಸಿಂಗ್ ದೇವ್, ಚರಣ ದಾಸ್ ಮಹಾಂತ್, ತಾಮ್ರಧ್ವಜ ಸಾಹೂ ಅವರು ಸ್ಪರ್ಧಿಗಳಾಗಿದ್ದರು.
57 ರ ಹರೆಯದ ಬಘೇಲ್ ಯುವ ಕಾಂಗ್ರೆಸ್ ಕಾರ್ಯಕರ್ತರಾಗಿ ರಾಜಕೀಯ ಆರಂಭಿಸಿದ್ದರು. ಛತ್ತೀಸ್ಗಢ ವಿಭಜನೆಗೂ ಮುನ್ನ ಮಧ್ಯಪ್ರದೇಶದಲ್ಲಿ ಶಾಸಕರಾಗಿದ್ದ ಬಘೇಲ್ ಅವರು ದಿಗ್ವಿಜಯ್ ಸಿಂಗ್ ಅವರ ಸಂಪುಟದಲ್ಲಿ ಸಚಿವರಾಗಿದ್ದರು.
2004 ಮತ್ತು 2009 ರಲ್ಲಿ ಎರಡು ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಥಿಸಿ ಸೋಲನ್ನೂ ಅನುಭವಿಸಿದ್ದರು.
ಈ ಬಾರಿ ಚುನಾವಣೆಯಲ್ಲಿ ಪಾಟನ್ ಕ್ಷೇತ್ರದಲ್ಲಿ ಭರ್ಜರಿ ಗೆಲುವು ತನ್ನದಾಗಿಸಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ