Sri Lankaದಿಂದ 5.89 ಕೋಟಿ ರೂ.ಮೌಲ್ಯದ ಚಿನ್ನ ಕಳ್ಳಸಾಗಣೆ: ಮೂವರ ಬಂಧನ
Team Udayavani, Aug 26, 2023, 7:48 PM IST
ತಿರುಚಿರಾಪಳ್ಳಿ: ಇಲ್ಲಿ 5.89 ಕೋಟಿ ಮೌಲ್ಯದ ಸುಮಾರು 10 ಕೆಜಿ ಚಿನ್ನದ ಗಟ್ಟಿಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಈ ಸಂಬಂಧ ಮೂವರನ್ನು ಬಂಧಿಸಲಾಗಿದೆ ಎಂದು ಕಂದಾಯ ಗುಪ್ತಚರ ನಿರ್ದೇಶನಾಲಯ ಶನಿವಾರ ತಿಳಿಸಿದೆ.
ಡಿಆರ್ಐ ಅಧಿಕಾರಿಗಳು ಆ 23 ರಂದು ತಿರುಚಿರಾಪಳ್ಳಿಯಿಂದ ಚೆನ್ನೈಗೆ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ದಂಪತಿಯನ್ನು ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ತಡೆಹಿಡಿದು ಅವರ ಸರಂಜಾಮುಗಳಲ್ಲಿ ಬಚ್ಚಿಟ್ಟಿದ್ದ ಚಿನ್ನವನ್ನು ವಶಪಡಿಸಿಕೊಂಡರು.
ಪ್ರಾಥಮಿಕ ತನಿಖೆಯಲ್ಲಿ ದಂಪತಿಗಳು ಚೆನ್ನೈನಲ್ಲಿ ಡೆಲಿವರಿ ಮಾಡಲು 5,89,65,707 ರೂ. ಮೌಲ್ಯದ 9.7 ಕೆಜಿ ತೂಕದ ಚಿನ್ನವನ್ನು ಕೊಂಡೊಯ್ಯುತ್ತಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಶ್ರೀಲಂಕಾದಿಂದ ರಾಮನಾಡ್ ಜಿಲ್ಲೆಯ ತೊಂಡಿ ಕರಾವಳಿ ಪ್ರದೇಶದ ಮೂಲಕ ಚಿನ್ನವನ್ನು ಕಳ್ಳಸಾಗಣೆ ಮಾಡಲಾಗಿದ್ದು, ಚೆನ್ನೈನಲ್ಲಿರುವ ವ್ಯಕ್ತಿಗೆ ತಲುಪಿಸುವಂತೆ ದಂಪತಿಗೆ ಹಸ್ತಾಂತರಿಸಲಾಗಿದೆ ಎಂದು ವಿಚಾರಣೆಯಿಂದ ತಿಳಿದುಬಂದಿದೆ. ದಂಪತಿ ಸೇರಿದಂತೆ ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ