ಠಾಕ್ರೆ ಬಣಕ್ಕೆ ಮತ್ತೆ “ಶಿಂಧೆ ಶಾಕ್’: ಶಿವಸೇನೆಯ 12 ಸಂಸದರು ಶಿಂಧೆ ಬಣಕ್ಕೆ ಶಿಫ್ಟ್?
ತೆರೆಮರೆಯ ಕಸರತ್ತಿಗೆ ದೆಹಲಿಯಲ್ಲಿ ಅಂತಿಮ ಸ್ಪರ್ಶ? ಮತ್ತೆ ಕುತೂಹಲ ಮೂಡಿಸಿದ ಮಹಾರಾಷ್ಟ್ರ ರಾಜಕೀಯ
Team Udayavani, Jul 19, 2022, 7:05 AM IST
ಮುಂಬೈ: ಶಿವಸೇನೆಯಿಂದ ಹೊರಬಂದು ಮುಖ್ಯಮಂತ್ರಿಯಾಗಿರುವ ಶಿಂಧೆ ಹಾಗೂ ಅವರ ಬಣ, ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರಿಗೆ ಮತ್ತೊಂದು ಆಘಾತ ನೀಡಿದೆ.
ಠಾಕ್ರೆಯ ಬಣದಲ್ಲಿರುವ 12 ಸಂಸದರು ಇನ್ನು ಕೆಲವೇ ದಿನಗಳಲ್ಲಿ ಬಿಜೆಪಿ ಸೇರಲು ಸಜ್ಜಾಗಿದ್ದಾರೆ. ಮೂಲಗಳ ಪ್ರಕಾರ, ಈ ಎಲ್ಲಾ ಸಂಸದರು ಸೋಮವಾರದಂದೇ ದೆಹಲಿಗೆ ಹೊರಡಲು ಸಿದ್ಧತೆ ನಡೆಸಿದ್ದಾಗಿ ಮೂಲಗಳು ತಿಳಿಸಿವೆ.
ಇದಕ್ಕೆ ಪುಷ್ಠಿ ನೀಡುವಂತೆ, ಮುಖ್ಯಮಂತ್ರಿ ಶಿಂಧೆ ಕೂಡ ಸೋಮವಾರ ರಾತ್ರಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಮುಖ್ಯಮಂತ್ರಿಯಾದ ನಂತರ ಇದು ಶಿಂಧೆಯವರ ಎರಡನೇ ದೆಹಲಿ ಭೇಟಿ.
ಮುಖ್ಯಮಂತ್ರಿಯಾದ ಹೊಸತರದಲ್ಲಿ ಅವರು ಹಾಗೂ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.
ಸಂಪರ್ಕದಲ್ಲಿರುವ ಸಂಸದರ್ಯಾರು?
ಶಿವಸೇನೆಯಲ್ಲಿ ಸದ್ಯಕ್ಕೆ 18 ಸಂಸದರಿದ್ದಾರೆ. ಇವರಲ್ಲಿ ಶಿಂಧೆ ಬಣದೊಂದಿಗೆ ಸಂಪರ್ಕದಲ್ಲಿರುವವರೆಂದರೆ, ಧೈರ್ಯಶೀಲ್ ಸಂಭಾಜಿರಾವ್ ಮಾನೆ, ಸದಾಶಿವ ಲೋಖಂಡೆ, ಹೇಮಂತ್ ಗೋಡ್ಸೆ, ಹೇಮಂತ್ ಪಾಟೀಲ್, ರಾಜೇಂದ್ರ ಗವಿತ್, ಸಂಜಯ್ ಮಾಂಡಲಿಕ್, ಶ್ರೀಕಾಂತ್ ಶಿಂಧೆ, ಶ್ರೀರಂಗ್ ಬಾರ್ನೆ, ರಾಹುಲ್ ಶೆವಾಲೆ, ಪ್ರತಾಪರಾವ್, ಗಣಪತ್ರಾವ್ ಜಾಧವ್, ಕೃಪಾಲ್ ತುಮನೆ, ಭಾವನಾ.
ಪಕ್ಷದಿಂದ ಉಚ್ಚಾಟನೆ
ಶಿಂಧೆ ಬಣದ ಪರವಾಗಿ ಕೆಲಸ ಮಾಡಿದ ಆರೋಪದಡಿ ಠಾಕ್ರೆಯವರು, ಮಹಾರಾಷ್ಟ್ರದ ಮಾಜಿ ಪ್ರವಾಸೋದ್ಯಮ ಸಚಿವ ವಿಜಯ್ ಶಿವತಾರೆ, ಹಿಂಗೋಲಿ ಜಿಲ್ಲೆಯ ಶಿವಸೇನೆ ಅಧ್ಯಕ್ಷ ಶಾಸಕ ಸಂತೋಷ್ ಬಂಗಾರ್, ಥಾಣೆಯ ಶಿವಸೇನೆಯ ಜಿಲ್ಲಾ ಪ್ರಮುಖ್ ಆದ ನರೇಶ್ ಮ್ಹಾಸ್ಕೆ ಅವರನ್ನು ಪಕ್ಷದಿಂದ ಹೊರಹಾಕಲಾಗಿದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ