ಕೇಂದ್ರ ಸಂಪುಟ ಪುನರ್ ರಚನೆ : ಶೋಭಾ ಕರಂದ್ಲಾಜೆಗೆ ಅವಕಾಶ, ಸದಾನಂದ ಗೌಡ ಔಟ್
Team Udayavani, Jul 7, 2021, 2:01 PM IST
ನವದೆಹಲಿ : ಎಲ್ಲರ ಗಮನ ಸೆಳೆದಿರುವ, ಬಹು ನಿರೀಕ್ಷಿತ ಕೇಂದ್ರ ಸಚಿವ ಸಂಪುಟದ ಪುನರ್ ರಚನೆ ಇಂದು(ಬುಧವಾರ) ಸಂಜೆ 6ಕ್ಕೆ ನಡೆಯಲಿದ್ದು, ಸಂಪುಟಕ್ಕೆ ಹೊಸದಾಗಿ ಸೇರುವ ನಿರೀಕ್ಷೆಯಲ್ಲಿರುವ ನಾಯಕರು ಮೋದಿ ಭೇಟಿಯಾಗಲು ಕಾಯುತ್ತಿದ್ದಾರೆ. ಇದರ ನಡುವೆ ಕೇಂದ್ರ ಸಚಿವ ಸದಾನಂದ ಗೌಡ ತನ್ನ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ.
ಜ್ಯೋತಿರಾದಿತ್ಯ ಸಿಂಧಿಯಾ, ನಾರಾಯಣ ರಾಣೆ ಸೇರಿದಂತೆ ಸಂಪುಟ ಸೇರುವ 24 ಮಂದಿ ಇಂದು ಮುಂಜಾನೆಯಿಂದಲೇ ಪ್ರಧಾನಿ ಭೇಟಿಗೆ ಕಾದು ಕುಳಿತಿದ್ದು, ಸಂಜೆ ಸಂಪುಟ ಪುನರ್ ರಚನೆ ಕಾರ್ಯ ನಡೆಯಲಿದೆ. ಇನ್ನು ಚಿಕ್ಕಮಕಗಳೂರು ಮತ್ತು ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಸಂಪುಟದಲ್ಲಿ ಸ್ಥಾನ ಸಿಗುವ ಸಾಧ್ಯತೆ ದಟ್ಟವಾಗಿದ್ದು, ಕರಂದ್ಲಾಜೆ ಕೂಡ ಮೋದಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಇನ್ನು ಹಣಕಾಸು ಖಾತೆ ರಾಜ್ಯ ಸಚಿವರಾಗಿರುವ ಅನುರಾಗ್ ಠಾಕೂರ್ ಜೊತೆ ಮೂವರಿಗೆ ಸಂಪುಟದಲ್ಲಿ ಬಡ್ತಿ ನೀಡಲಾಗುತ್ತದೆ. ಹಾಗೂ ಮೀನಾಕ್ಷಿ ಲೇಖಿ, ಅನುಪ್ರಿಯಾ ಪಟೇಲ್ , ಶೋಭಾ ಕರಂದ್ಲಾಜೆ, ಸೇರಿದಂತೆ ಐವರು ಮಹಿಳೆಯರಿಗೆ ಸಂಪುಟದಲ್ಲಿ ಸ್ಥಾನ ಸಿಗುತ್ತದೆ ಎಂದು ಹೇಳಲಾಗುತ್ತಿದೆ. ಅಲ್ಲದೆ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಸಂಪುಟದಿಂದ ಅವರನ್ನು ಕೈಬಿಡಲಾಗಿದೆ.
ಈಗಾಗಲೇ, ಕೇಂದ್ರ ಸಚಿವ ಸಂತೋಷ್ ಗಂಗ್ವಾರ್ ರಾಜೀನಾಮೆ ನೀಡಿದ್ದು, ಇನ್ನೂಮೂರ್ನಾಲ್ಕು ಸಚಿವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುವ ಸಆಧ್ಯತೆ ಇದೆ. ರಾಜೀನಾಮೆ ನೀಡುವ ಸಾಧ್ಯತೆ ಇದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ