
ಗೃಹ ಸಚಿವ ಶಾ ಭದ್ರತೆಯಲ್ಲಿ ಭಾರೀ ಲೋಪ; ವ್ಯಕ್ತಿಯ ಬಂಧನ
Team Udayavani, Sep 8, 2022, 12:27 PM IST

ಮುಂಬಯಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭದ್ರತೆಯಲ್ಲಿ ಭಾರೀ ಲೋಪ ಎಸಗಿರುವುದು ಬೆಳಕಿಗೆ ಬಂದಿದೆ. ಮುಂಬೈಗೆ ಭೇಟಿ ನೀಡಿದ ಸಂದರ್ಭದಲ್ಲಿ 32 ವರ್ಷದ ಅಪರಿಚಿತ ವ್ಯಕ್ತಿಯೊಬ್ಬ ಗೃಹ ಸಚಿವರ ಸುತ್ತ ಗಂಟೆಗಟ್ಟಲೆ ಅಲೆದಾಡಿದ್ದಾನೆ. ವ್ಯಕ್ತಿ ತನ್ನನ್ನು ಆಂಧ್ರಪ್ರದೇಶದ ಸಂಸದರ ಪಿಎ ಎಂದು ಹೇಳಿಕೊಂಡಿದ್ದಾನೆ.
ಗೃಹ ಸಚಿವಾಲಯದ ಐಡಿ ಕಾರ್ಡ್ ಪಟ್ಟಿಯನ್ನು ಸಹ ಹೊಂದಿದ್ದು, ಅದನ್ನು ಧರಿಸಿ ಗೃಹ ಸಚಿವರ ಬೆಂಗಾವಲು ಪಡೆಯೊಂದಿಗೆ ತಿರುಗಾಡಿದ್ದಾನೆ.
ಮಾಹಿತಿಯ ಪ್ರಕಾರ, ಗೃಹ ಸಚಿವಾಲಯದ ಗುರುತಿನ ಚೀಟಿಯನ್ನು ಧರಿಸಿರುವ ವ್ಯಕ್ತಿಯು ತನ್ನ ನೈಜ ಗುರುತನ್ನು ಮರೆಮಾಡಿದ್ದು, ಅಪರಿಚಿತ ವ್ಯಕ್ತಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಮನೆಯ ಹೊರಗೆ ಬ್ಲೇಜರ್ ಧರಿಸಿ ನಡೆದುಕೊಂಡು ಹೋಗುತ್ತಿರುವುದು ಕಂಡುಬಂದಿದೆ. ಈ ವ್ಯಕ್ತಿಯ ಕುರಿತು ಅನುಮಾನ ಬಂದ ನಂತರ, ಗೃಹ ಸಚಿವಾಲಯದ ಅಧಿಕಾರಿಯೊಬ್ಬರು ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ವಿಚಾರಣೆ ನಂತರ ಮುಂಬೈ ಪೊಲೀಸರು ಶಂಕಿತ ವ್ಯಕ್ತಿಯನ್ನು ಬಂಧಿಸಿದ್ದು, ಆರೋಪಿಯ ಹೆಸರು ಹೇಮಂತ್ ಪವಾರ್ ಎಂದು ಹೇಳಲಾಗಿದೆ. ಆತ ಮಹಾರಾಷ್ಟ್ರದ ಧುಲೆ ನಿವಾಸಿಯಾಗಿದ್ದಾನೆ. ಆರೋಪಿ ಪವಾರ್ ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತೆರಿಗೆ ವಂಚನೆ ಪ್ರಕರಣ: 69.65 ಕೋ.ರೂ. ಆಸ್ತಿ ಜಪ್ತಿ

ಗೋ ಫಸ್ಟ್ ವಿಮಾನಕ್ಕೆ 10 ಲಕ್ಷ ರೂ. ದಂಡ ವಿಧಿಸಿದ ಡಿಜಿಸಿಎ

ನನ್ನನ್ನು ಒತ್ತೆಯಲ್ಲಿ ಇರಿಸಲಾಗಿದೆ: ಫ್ರೆಂಚ್ ನಟಿ ಮೇರಿಯನ್ನೆ ಆರೋಪ

ಸಂಸ್ಕೃತವೇಕೆ ದೇಶದ ಅಧಿಕೃತ ಭಾಷೆಯಾಗಬಾರದು?: ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್ಎ ಬೋಬ್ಡೆ

ಟಿಪ್ಪು ಸುಲ್ತಾನ್ ಉದ್ಯಾನದ ಹೆಸರು ಬದಲಾವಣೆಗೆ ಮಹಾರಾಷ್ಟ್ರ ಸರ್ಕಾರ ನಿರ್ಧಾರ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
