OCCRP ಭಾರತೀಯ ಕಂಪನಿಗಳ ಮುಳುಗಿಸಲು ಸಂಚು ?

ವಿದೇಶಿ ಕೋಟ್ಯಧಿಪತಿಗಳ ಕೈಯಲ್ಲಿದೆ ತನಿಖಾ ಪತ್ರಿಕೋದ್ಯಮದ ಹೆಸರಿನ ಜಾಲ...

Team Udayavani, Aug 26, 2023, 6:30 AM IST

OCCRP ಭಾರತೀಯ ಕಂಪನಿಗಳ ಮುಳುಗಿಸಲು ಸಂಚು ?

ನವದೆಹಲಿ: ಭಾರತದ ಖ್ಯಾತ ಉದ್ಯಮಸಂಸ್ಥೆಗಳಲ್ಲೊಂದಾಗಿದ್ದ ಅದಾನಿ ಗ್ರೂಪ್ಸ್‌ ವಿರುದ್ಧ ಹಿಂಡನ್‌ಬರ್ಗ್‌ ಎನ್ನುವ ವಿದೇಶಿ ಸಂಸ್ಥೆ ಮಾಡಿದ್ದ ಆರೋಪವು ದೇಶದಲ್ಲಿ ಸಂಚಲನವನ್ನೇ ಸೃಷ್ಟಿಸಿತ್ತು. ಸಂಸ್ಥೆಗೆ ಹಲವು ಬಗೆಯ ನಷ್ಟಕ್ಕೂ ಕಾರಣವಾಗಿತ್ತು. ಈ ವಿಚಾರ ಮಾಸುವ ಮುನ್ನವೇ ಇದೀಗ ಭಾರತೀಯ ಸಂಸ್ಥೆಗಳನ್ನೇ ಗುರಿಯಾಗಿಸಿ, ಅವುಗಳ ವರ್ಚಸ್ಸನ್ನು ಕುಗ್ಗಿಸಲು ಅಂತಾರಾಷ್ಟ್ರೀಯ ಮಟ್ಟದ ಜಾಲವೊಂದು ಸೃಷ್ಟಿಯಾಗಿದೆ ಎಂದು ಮೂಲಗಳು ಹೇಳಿವೆ.

ಭಾರತದ ಖ್ಯಾತ ಉದ್ಯಮಗಳು, ಕಂಪನಿಗಳನ್ನು ಗುರಿಯಾಗಿಸಿ, ಸತ್ಯಶೋಧದ ಹೆಸರಿನಲ್ಲಿ ಅವುಗಳ ಬಗ್ಗೆ ವರದಿ ತಯಾರಿಸಲೆಂದೇ ಸಂಘಟಿತ ಅಪರಾಧ ಮತ್ತು ಭ್ರಷ್ಟಾಚಾರ ವರದಿ ಯೋಜನೆ (ಒಸಿಸಿಆರ್‌ಪಿ) ಎನ್ನುವ ಸಂಸ್ಥೆಯನ್ನು ಸೃಷ್ಟಿಸಲಾಗಿದೆ.

ಅಮೆರಿಕ ಮೂಲದ ಖ್ಯಾತ ಉದ್ಯಮಿ ಜಾರ್ಜ್‌ ಸೊರೊಸ್‌ ಹಾಗೂ ನ್ಯೂಯಾರ್ಕ್‌ ಮೂಲದ ಸಂಸ್ಥೆ ರಾಕ್‌ಫೆಲ್ಲರ್‌ ಬ್ರದರ್ಸ್‌ ಫ‌ಂಡ್‌ ಈ ಸಂಸ್ಥೆಗಳಿಗೆ ಹೂಡಿಕೆ ಮಾಡಿದ್ದು, ಇವುಗಳ ಮೂಲ ಉದ್ದೇಶವೇ ಭಾರತೀಯ ಮೂಲದ ಉದ್ಯಮಗಳ ವಿರುದ್ಧದ ವರದಿ ತಯಾರಿಸುವುದಾಗಿದೆ ಎಂದು ಪಿಟಿಐ ವರದಿಯೊಂದರಲ್ಲಿ ತಿಳಿಸಿದೆ.

ಒಸಿಸಿಆರ್‌ಪಿ ತನ್ನ ವೆಬ್‌ಸೈಟ್‌ನಲ್ಲಿ ಇದೊಂದು ಜಾಗತಿಕ ತನಿಖಾ ಪತ್ರಕರ್ತರನ್ನು ಒಳಗೊಂಡಿರುವ, ಉದ್ಯಮಗಳ ಭ್ರಷ್ಟಾಚಾರಗಳನ್ನು ಸಮಾಜದ ಮುಂದೆ ತೆರೆದಿಡುವ ಸಂಸ್ಥೆ ಎಂದು ಹೇಳಿಕೊಂಡಿದೆ. ಆದರೆ, ವಿದೇಶಿ ಉದ್ಯಮಿಗಳ ಹೂಡಿಕೆ ಹೊಂದಿರುವ ಈ ಸಂಸ್ಥೆ ಗುರಿಯಾಗಿಸುತ್ತಿರುವುದು ಮಾತ್ರ ಭಾರತೀಯ ಸಂಸ್ಥೆಗಳನ್ನು. ಸಾಲು- ಸಾಲು ಲೇಖನಗಳು, ವರದಿಗಳು ಪ್ರಕಟವಾಗಿರುವುದೂ ಕೂಡ ಭಾರತೀಯ ಸಂಸ್ಥೆಗಳ ಬಗ್ಗೆಯೇ ಎಂಬುದು ಗಮನಾರ್ಹ.

ಅಲ್ಲದೇ, ಅದಾನಿ ಗ್ರೂಪ್ಸ್‌ ಬಗ್ಗೆ ಹಿಂಡನ್‌ಬರ್ಗ್‌ ಆರೋಪಗಳನ್ನು ಪರಿಗಣಿಸಿ, ಖುದ್ದು ಪ್ರಧಾನಿ ಮೋದಿ ಅವರೇ ಇದಕ್ಕೆ ಉತ್ತರ ನೀಡಬೇಕೆಂದು ಹೊಣೆಯಾಗಿಸಲು ಹೊರಟಿದಿದ್ದು ಇದೇ ಸಂಸ್ಥೆಯ ಹೂಡಿಕೆದಾರ ಜಾರ್ಜ್‌ ಸೊರೊಸ್‌. ಜಾಗತಿಕ ಮಾರುಕಟ್ಟೆಯಲ್ಲಿ ಭಾರತೀಯ ಸಂಸ್ಥೆಗಳ ಪೈಪೋಟಿ ಹೆಚ್ಚುತ್ತಿರುವ ನಡುವೆಯೇ, ಇಂಥದ್ದೊಂದು ಜಾಲ ಸೃಷ್ಟಿಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಟಾಪ್ ನ್ಯೂಸ್

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

1-wewewqe

Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Lok Sabha Election: ಬೃಜ್‌ ಭೂಷಣ್‌ ಸಿಂಗ್‌ ಬದಲಿಗೆ ಪುತ್ರನಿಗೆ ಟಿಕೆಟ್‌ ನೀಡಿದ ಬಿಜೆಪಿ

Lok Sabha Election: ಬೃಜ್‌ ಭೂಷಣ್‌ ಸಿಂಗ್‌ ಬದಲಿಗೆ ಪುತ್ರನಿಗೆ ಟಿಕೆಟ್‌ ನೀಡಿದ ಬಿಜೆಪಿ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

1-wewewqe

Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.