ಬಿಹಾರದಲ್ಲಿ ಭೀಕರ ಅಪಘಾತ ; ಮಕ್ಕಳು ಸೇರಿ 15 ಮಂದಿ ದಾರುಣ ಅಂತ್ಯ
Team Udayavani, Nov 20, 2022, 10:42 PM IST
ಪಾಟ್ನಾ: ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ನಿಯಂತ್ರಣ ತಪ್ಪಿದ ಟ್ರಕ್ ಅನೇಕ ಜನರನ್ನು ನುಜ್ಜುಗುಜ್ಜುಗೊಳಿಸಿದ್ದು, ಸಿಕ್ಕಿರುವ ಮಾಹಿತಿ ಪ್ರಕಾರ ಭೀಕರ ಅಪಘಾತದಲ್ಲಿ ಹಲವು ಮಕ್ಕಳು ಸೇರಿದಂತೆ ಸುಮಾರು 15 ಮಂದಿ ಸಾವನ್ನಪ್ಪಿದ್ದಾರೆ.
ಅಪಘಾತದಲ್ಲಿ ಹಲವರು ಗಾಯಗೊಂಡಿದ್ದು, ಅಪಘಾತದ ನಂತರ ಸ್ಥಳದಲ್ಲಿ ಭಯಭೀತರಾಗಿರುವ ದೃಶ್ಯಗಳು ಕಂಡುಬಂದಿವೆ.
ಮಹಾನರ್-ಹಾಜಿಪುರ ಮುಖ್ಯ ರಸ್ತೆಯಲ್ಲಿರುವ ದೇಸರಿ ಪೊಲೀಸ್ ಠಾಣೆ ವ್ಯಾಪ್ತಿಯ ಸುಲ್ತಾನ್ಪುರ ಟೋಲಾ 28 ರಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಘಟನೆಯ ನಂತರ ಹೆಚ್ಚಿನ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಸ್ಥಳದಲ್ಲಿ ಪರಿಹಾರ-ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ.
ಮಹನಾರ್ ಮೊಹದ್ದಿಪುರ ರಾಜ್ಯ ಹೆದ್ದಾರಿ ಬಳಿಯ ಬ್ರಹ್ಮಸ್ಥಾನದ ಬಳಿಯಿರುವ ಭೂಯಾನ್ ಬಾಬಾ ಬಳಿ ಕೆಲವರು ಪೂಜೆ ಮಾಡುತ್ತಿದ್ದಾಗ ನಿಯಂತ್ರಣಕ್ಕೆ ಸಿಗದ ಟ್ರಕ್ ಅವರ ಮೇಲೆ ಹರಿದಿದೆ ಎಂದು ಹೇಳಲಾಗುತ್ತಿದೆ. ಘಟನೆ ನಡೆದ ತಕ್ಷಣ ಸ್ಥಳಕ್ಕಾಗಮಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಹಾರ ಕಾರ್ಯ ಆರಂಭಿಸಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗೆ ಕಳುಹಿಸಲಾಗಿದೆ. ಅಪಘಾತದಲ್ಲಿ ಹಲವು ಮಕ್ಕಳು ಕೂಡ ಸಾವನ್ನಪ್ಪಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು