ಪೆಗಾಸಸ್ ಹಗರಣದ ಕುರಿತು ತನಿಖೆ ನಡೆಯಲೇಬೇಕೆಂದ ಬಿಹಾರ್ ಸಿಎಂ ನಿತೀಶ್ ಕುಮಾರ್
Team Udayavani, Aug 2, 2021, 5:55 PM IST
ಪಾಟ್ನಾ: ರಾಷ್ಟ್ರ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಪೆಗಾಸಸ್ ಹಗರಣದ ಕುರಿತು ತನಿಖೆ ನಡೆಸುವಂತೆ ನಡೆಯುತ್ತಿರುವ ವಿರೋಧ ಪಕ್ಷಗಳ ಹೋರಾಟಕ್ಕೆ ಇದೀಗ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬೆಂಬಲ ಸೂಚಿಸಿದ್ದಾರೆ.
ಇಂದು ‘ಪೆಗಾಸಸ್ ಸ್ನೂಪಿಂಗ್ ಹಗರಣ’ದ ಕುರಿತು ಮಾತನಾಡಿರುವ ಅವರು, ‘ಜನರನ್ನು ತೊಂದರೆಗೊಳಿಸಲು ಹಾಗೂ ಕಿರುಕುಳ ನೀಡಲು ಇಂತಹ ಕೆಲಸಗಳನ್ನು ಮಾಡಬಾರದು. ಇಡೀ ವಿಷಯವನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಬೇಕು” ಎಂದು ಒತ್ತಾಯಿಸಿದ್ದಾರೆ.
ಪೆಗಾಸಸ್ ಪ್ರಕರಣವನ್ನು ತನಿಖೆ ಮಾಡಬೇಕೇ ಎಂದು ಕೇಳಿದಾಗ, “ಖಂಡಿತವಾಗಿಯೂ ಇದು ತನಿಖೆ ಆಗಬೇಕು” ಎಂದು ಹೇಳಿರುವ ನಿತೀಶ್ ಕುಮಾರ್, ತುಂಬಾ ದಿನದಿಂದ ದೂರವಾಣಿ ಕದ್ದಾಲಿಕೆ ಬಗ್ಗೆ ಚರ್ಚೆ ನಡೆಯುತ್ತಿದೆ. ಸಂಸತ್ತಿನಲ್ಲಿ ಈ ವಿಷಯ ಪ್ರಸ್ತಾಪವಾಗುತ್ತಿದೆ ಹಾಗೂ ಮಾಧ್ಯಮಗಳಲ್ಲಿ ವರದಿಯಾಗುತ್ತಿವೆ.ಹಾಗಾಗಿ ಖಂಡಿತವಾಗಿಯೂ ಇದನ್ನು ಚರ್ಚಿಸಬೇಕು ಹಾಗೂ ಅದರತ್ತ ಗಮನ ನೀಡಬೇಕು. ಎಲ್ಲವನ್ನೂ ಬಹಿರಂಗಪಡಿಸಬೇಕು”ಎಂದು ಅವರು ಆಗ್ರಹಿಸಿದ್ದಾರೆ.
ಇನ್ನು ಪೆಗಾಸಸ್ ತಂತ್ರಾಂಶ ಮೂಲಕ ಬೇಹುಗಾರಿಕೆ ನಡೆಸಲಾಗಿದೆ ಎನ್ನುವ ಆರೋಪ ಕೇಂದ್ರ ಸರ್ಕಾರ ವಿರುದ್ಧ ಕೇಳಿ ಬಂದಿದೆ. ಕಾಂಗ್ರೆಸ್ ಸೇರಿದಂತೆ ಹಲವು ವಿರೋಧ ಪಕ್ಷಗಳು ಈ ಕುರಿತು ಕೇಂದ್ರದ ವಿರುದ್ಧ ಹೋರಾಟ ನಡೆಸಿವೆ. ಪೆಗಾಸಸ್ ಕುರಿತು ತನಿಖೆ ನಡೆಯಬೇಕೆಂದು ಒತ್ತಾಯಿಸುತ್ತಿವೆ. ಇದೀಗ ಬಿಜೆಪಿ ಜೊತೆ ಕೈ ಜೋಡಿಸಿ ಬಿಹಾರದಲ್ಲಿ ಸರ್ಕಾರ ರಚಿಸಿರುವ ನಿತೀಶ್ ಕುಮಾರ್ ಅವರೂ ತನಿಖೆ ನಡೆಯಬೇಕೆಂದು ಆಗ್ರಹಿಸಿರುವುದು ಗಮನ ಸೆಳೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ