‘ಜಲ್-ಜೀವನ್-ಹರಿಯಾಲಿ’: ದಾಖಲೆ ನಿರ್ಮಿಸಿದ 18,340 ಕಿ.ಮೀ. ಮಾನವ ಸರಪಳಿ!


Team Udayavani, Jan 19, 2020, 8:21 PM IST

Jal—Nitish-19-1

ಪಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮಹತ್ವಾಕಾಂಕ್ಷೆಯ ಅಭಿಯಾನದ ‘ಜಲ್-ಜೀವನ್-ಹರಿಯಾಲಿ’ (ಹಸಿರು ಜಲಜೀವನ) ಅಂಗವಾಗಿ ಇಂದು ಬಕ್ಸರ್ ನಿಂದ ಜಾರ್ಖಂಡ್ ರಾಜ್ಯದ ಗಡಿಭಾಗ ಭಗಲ್ಪುರದವರೆಗೆ ಗಂಗಾನದಿಯ ತೀರದುದ್ದಕ್ಕೂ ಸುಮಾರು 18,340 ಕಿಲೋ ಮೀಟರ್ ಉದ್ದಕ್ಕೆ ನಿರ್ಮಿಸಲಾದ ಬೃಹತ್ ಮಾನವ ಸರಪಳಿ ಹೊಸ ದಾಖಲೆಗೆ ಪಾತ್ರವಾಯಿತು.

ಸುಮಾರು 4.27 ಕೋಟಿ ಜನರು ಈ ಮಾನವ ಸರಪಳಿ ನಿರ್ಮಾಣದಲ್ಲಿ ಕೈಜೋಡಿಸಿದ್ದರು ಮತ್ತು ಇವರೆಲ್ಲರ ಸಹಕಾರದಿಂದ 18.34ಸಾವಿರ ಕಿಲೋ ಮೀಟರ್ ಉದ್ದದ ಈ ಮಾನವ ಸರಪಳಿ ನಿರ್ಮಾಣವಾಗುವ ಮೂಲಕ ಈ ಹಿಂದಿನ ದಾಖಲೆಯನ್ನು ಇದು ಅಳಿಸಿ ಹಾಕಿದೆ ಎಂಬ ಮಾಹಿತಿಯನ್ನು ಬಿಹಾರ ಸರಕಾರದ ಮುಖ್ಯಕಾರ್ಯದರ್ಶಿ ದೀಪಕ್ ಕುಮಾರ್ ಅವರು ನೀಡಿದ್ದಾರೆ.

2017ರಲ್ಲಿ ನಡೆಸಲಾಗಿದ್ದ ಮಾನವ ಸರಪಳಿ 11,285 ಕಿಲೋ ಮೀಟರ್ ಉದ್ದ ನಿರ್ಮಾಣಗೊಂಡಿತ್ತು. ಇನ್ನಿ 2018ರಲ್ಲಿ ವರದಕ್ಷಿಣೆ ಹಾಗೂ ಬಾಲ್ಯವಿವಾಹ ಪದ್ದತಿಗಳನ್ನು ವಿರೋಧಿಸಿ ನಿರ್ಮಾಣಗೊಂಡಿದ್ದ ಮಾನವ ಸರಪಳಿ13,660 ಕಿಲೋಮೀಟರ್ ಉದ್ದಕ್ಕೆ ನಿರ್ಮಾಣಗೊಂಡಿತ್ತು. ಈ ಬಾರಿ ಇದಕ್ಕಿಂತ 20% ಅಧಿಕ ಉದ್ದದ ಅಂದರೆ 16,200 ಕಿಲೋ ಮೀಟರ್ ಉದ್ದದ ಮಾನವ ಸರಪಳಿಯನ್ನು ನಿರ್ಮಿಸುವ ಗುರಿಯನ್ನು ಹಾಕಿಕೊಳ್ಳಲಾಗಿತ್ತು.

ರಾಜ್ಯದ ಪ್ರಮುಖ ಪಟ್ಟಣಗಳಲ್ಲಿ 45 ಲಕ್ಷ ಜನರು ಇದರಲ್ಲಿ ಭಾಗವಹಿಸಿದರೆ ವಾರ್ಡ್ ಮಟ್ಟಗಳಲ್ಲಿ ಒಂದು ಕೊಟಿ 13 ಲಕ್ಷದ 44 ಸಾವಿರ ಜನರು ಒಟ್ಟಾಗುವ ಮೂಲಕ ಈ ಬೃಹತ್ ಮಾನವ ಸರಪಳಿ ನಿರ್ಮಾಣಗೊಂಡಿತು. ಇನ್ನು 57 ಲಕ್ಷ ವಿದ್ಯಾರ್ಥಿಗಳು ಹಾಗೂ 76 ಸಾವಿರ ಬೋಧಕ ಸಿಬ್ಬಂದಿಯೂ ಸಹ ಈ ಬೃಹತ್ ಮಾನವ ಸರಪಳಿಯ ಭಾಗವಾಗಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಈ ಅಭಿಯಾನಕ್ಕೆ ಸುಮಾರು 15-16 ಕೋಟಿ ರೂಪಾಯಿಗಳನ್ನು ಖರ್ಚುಮಾಡಲಾಗಿದ್ದು ಇಷ್ಟು ಉದ್ದದ ಮಾನವ ಸರಪಳಿಯ ಚಿತ್ರಣವನ್ನು ಸೆರೆಹಿಡಿಯಲು ನಾಲ್ಕು ಹೆಲಿಕಾಫ್ಟರ್ ಗಳು, ಮೂರು ವಿಮಾನಗಳು ಹಾಗೂ 100 ಡ್ರೋಣ್ ಗಳನ್ನು ಬಳಸಿಕೊಳ್ಳಲಾಗಿತ್ತು.

ಮಾನವ ಸರಪಳಿ ರಚನೆಯ ಸಂದರ್ಭದಲ್ಲಿ ಇಬ್ಬರು ಸಾವಿಗೀಡಾಗಿರುವ ಘಟನೆಯೂ ನಡೆದಿದ್ದು, ಮೃತರ ರಕ್ತ ಸಂಬಂಧಿಗಳಿಗೆ ರಾಜ್ಯ ಸರಕಾರ ತಲಾ 04 ಲಕ್ಷ ರೂಪಾಯಿಗಳ ಪರಿಹಾರವನ್ನು ಘೋಷಿಸಿದೆ.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.