ಬಿಹಾರ ಆರ್ ಜೆಡಿ ಮಾಜಿ ರಾಜ್ಯ ಕಾರ್ಯದರ್ಶಿಯನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು
Team Udayavani, Oct 4, 2020, 3:20 PM IST
ಬಿಹಾರ: ರಾಷ್ಟ್ರೀಯ ಜನತಾ ದಳ (RJD) ಪಕ್ಷದ ಮಾಜಿ ರಾಜ್ಯ ಕಾರ್ಯದರ್ಶಿಯನ್ನು ಫೂರ್ನಿಯಾ ಜಿಲ್ಲೆಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಇಂದು ಮುಂಜಾನೆ ಆರ್ ಜೆಡಿಯ ಮಾಜಿ ಕಾರ್ಯದರ್ಶಿಯಾಗಿರುವ ಶಕ್ತಿಮಲ್ಲಿಕ್ ತಮ್ಮ ನಿವಾಸದಲ್ಲಿರುವ ವೇಳೆಗೆ ಮೂವರು ಅಪರಿಚಿತರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಈಗಾಗಲೇ ಪ್ರಕರಣ ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಡಿಎಸ್ ಪಿ ಆನಂದ್ ಪಾಂಡೆ ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಶಕ್ತಿ ಮಲ್ಲಿಕ್ ಪತ್ನಿ ಖುಶ್ಬೂ ದೇವಿ, “ಇಂದು ಮುಂಜಾನೆ ತನ್ನ ಪತಿ ಮಕ್ಕಳಿಗೆ ಮನೆಯ ಅಂಗಳದಲ್ಲಿ ತಿಂಡಿ ತಿನ್ನಿಸುತ್ತಿದ್ದರು. ಈ ವೇಳೆ ಏಕಾಏಕಿ ನುಗ್ಗಿದ ಮೂವರು ಮಾಸ್ಕ್ ಧರಿಸಿದ ಆಗಂತುಕರು ಗುಂಡು ಹಾರಿಸಿದ್ದಾರೆ. ಬಳಿಕ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಗುಂಡು ತಗುಲಿದ ಪರಿಣಾಮ ಶಕ್ತಿ ಮಲ್ಲಿಕ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ” ಎಂದು ತಿಳಿಸಿದ್ದಾರೆ,
ಮುಂಬರುವ ಬಿಹಾರ ಚುನಾವಣೆಯಲ್ಲಿ ಶಕ್ತಿ ಮಲ್ಲಿಕ್ ಅವರ ಅನೇಕ ರಾಜಕೀಯ ವಿರೋಧಿಗಳು ಸ್ಪರ್ಧಿಸುತ್ತಿದ್ದಾರೆ ಎಂದು ಖುಶ್ಬೂ ದೇವಿ ಇದೆ ವೇಳೆ ತಿಳಿಸಿದ್ದಾರೆ.
ಇದನ್ನೂ ಓದಿ: CBI ತನಿಖೆಗೆ ವಿರೋಧ ವ್ಯಕ್ತಪಡಿಸಿದ ಹತ್ರಾಸ್ ಸಂತ್ರಸ್ತೆಯ ಕುಟುಂಬ: ಸ್ಥಳಕ್ಕೆ SIT ಭೇಟಿ !
ಇತ್ತೀಚಿಗಷ್ಟೇ ತೇಜಶ್ವಿ ಯಾದವ್ ಅವರು ಜಾತಿ ನಿಂದನೆ ಮಾಡಿದ್ದಾರೆ ಮತ್ತು ಚುನಾವಣಾ ಟಿಕೆಟ್ ಗಾಗಿ 50 ಲಕ್ಷ ಕೇಳಿದ್ದಾರೆ ಎಂದು ಶಕ್ತಿ ಮಲಿಕ್ ಆರೋಪಿಸಿದ್ದರು. ತೇಜಶ್ವಿ ಯಾದವ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡುತ್ತಿರುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
5 ದಿನಗಳ ಹಿಂದೆಯೂ ಬಿಜೆಪಿ ಜಯಂತ್ ಮಂಡಲ್ ಉಪಾಧ್ಯಕ್ಷರಾಗಿರುವ ರಾಜೇಶ್ ಕುಮಾರ್ ಝಾ ಅವರನ್ನೂ ಕೂಡ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಎರಡೂ ಘಟನೆಗಳು ಕೂಡ ಬಿಹಾರ ಚುನಾವನೆ ಸನಿಹದಲ್ಲಿರುವಾಗಲೇ ನಡೆದಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಇದನ್ನೂ ಓದಿ: ಬಿಹಾರ ಚುನಾವಣೆ: ಸೀಟು ಹಂಚಿಕೆಯಲ್ಲಿ 50-50 ಸೂತ್ರ ಅನುಸರಿಸಿದ ಜೆಡಿಯು-ಬಿಜೆಪಿ: ವರದಿ
Bihar: A former state secretary of Rashtriya Janata Dal (RJD) was shot dead in Purnia district, earlier today.
“Three men shot dead Shakti Malik at his residence this morning. A case has been registered and further investigation is underway,” says DSP Anand Pandey pic.twitter.com/n9F7bizDPe
— ANI (@ANI) October 4, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ