ಬಾಲಕಿಯ ಮೇಲೆ ಗ್ಯಾಂಗ್ ರೇಪ್ ಎಸಗಿ ರೈಲಿನಿಂದ ಎಸೆದ ಕಾಮಾಂಧರು
Team Udayavani, Jun 19, 2017, 4:09 PM IST
ಪಟ್ನಾ : ಮನೆಯಲ್ಲಿ ಶೌಚಾಲಯ ಇಲ್ಲದ ಕಾರಣಕ್ಕೆ ಕಳೆದ ಶುಕ್ರವಾರ ನಸುಕಿನ ವೇಳೆ ಬಹಿರ್ದೆಶೆಗೆಂದು ಕತ್ತಲಲ್ಲಿ ಮನೆಯಿಂದ ಹೊರಗೆ ಹೋದ ಹತ್ತನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಆರು ಮಂದಿ ಕಾಮಾಂಧರು ಅಪಹರಿಸಿ, ವಂಶೀಪುರ ರೈಲು ನಿಲ್ದಾಣಕ್ಕೆ ಒಯ್ದು ಅಲ್ಲಿಂದ ಆಕೆಯನ್ನು ಲೋಕಲ್ ರೈಲಿಗೇರಿಸಿ ಬಳಿಕ ಆಕೆಯ ಮೇಲೆ ಗ್ಯಾಂಗ್ ರೇಪ್ ಎಸಗಿ, ಬಿಹಾರದ ಕಿಯೂಲ್ ಜಂಕ್ಷನ್ ಬಳಿ ಆಕೆಯನ್ನು ಎಸೆದ ಅತ್ಯಮಾನುಷ ಘಟನೆ ವರದಿಯಾಗಿದೆ.
ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರು ಮಂದಿಯ ಪೈಕಿ ಒಬ್ಟಾತನನ್ನು ಈ ತನಕ ಪೊಲೀಸರು ಬಂಧಿಸಿದ್ದಾರೆ. ಉಳಿದ ಆರೋಪಿಗಳನ್ನು ತ್ವರಿತವಾಗಿ ಬಂಧಿಸುವಂತೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.
ಪಟ್ನಾ ಮೆಡಿಕಲ್ ಕಾಲೇಜ್ ಆ್ಯಂಡ್ ಹಾಸ್ಪಿಟಲ್ (ಪಿಎಂಸಿಎಚ್)ನಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕಿಯ ಸ್ಥಿತಿ ಗಂಭೀರವಿದೆ; ಆದರೂ ಆಕೆಯಲ್ಲಿ ಚೇತರಿಕೆಯ ಲಕ್ಷಣ ಕಂಡು ಬಂದಿದೆ; ಭಾರೀ ಪ್ರಮಾಣದಲ್ಲಿ ರಕ್ತ ನಷ್ಟಕ್ಕೆ ಗುರಿಯಾಗಿರುವ ಆಕೆಗೆ ಈ ತನಕ ಮೂರು ಯೂನಿಟ್ ಬ್ಲಿಡ್ ನೀಡಲಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಬಾಲಕಿಯು ಬಿಹಾರದ ಲಾಖೀಸರಾಯ್ ಜಿಲ್ಲೆಯ ಲಾಖೋಚಾಕ್ ಗ್ರಾಮದವಳೆಂದು ಗೊತ್ತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ