ಕಳ್ಳನ ಫಜೀತಿ…ರೆಡ್ ಹ್ಯಾಂಡ್ ಸಿಕ್ಕಿಬಿದ್ದು ರೈಲು ಕಿಟಕಿಗೆ ಜೋತು 10 ಕಿ.ಮೀ ಸಾಗಿದ..!
ಖಗಾರಿಯಾ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರು ಆತನನ್ನು ರೈಲ್ವೆ ಪೊಲೀಸರಿಗೆ ಒಪ್ಪಿಸಿದ್ದಾರೆ.
Team Udayavani, Sep 16, 2022, 1:00 PM IST
ಪಾಟ್ನಾ: ರೈಲಿನೊಳಗೆ ಪ್ರಯಾಣಿಕರ ಮೊಬೈಲ್ ಕಳ್ಳತನ ಮಾಡಿ ಪರಾರಿಯಾಗಲು ಯತ್ನಿಸಿದ್ದ ಕಳ್ಳನೊಬ್ಬ ಆಕಸ್ಮಿಕವಾಗಿ ಪ್ರಯಾಣಿಕರ ಕೈಗೆ ಸಿಕ್ಕಿಬಿದ್ದಿದ್ದು, ಸುಮಾರು ಹತ್ತು ಕಿಲೋ ಮೀಟರ್ ನಷ್ಟು ದೂರ ರೈಲು ಕಿಟಕಿ ಹಿಡಿದು ಜೋತಾಡುತ್ತ ಸಾಗಿದ ಘಟನೆ ಬಿಹಾರದಲ್ಲಿ ನಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ:ಠೇವಣಿದಾರರ ಹಿತಾಸಕ್ತಿ ಕಾಯಿದೆ ಮಂಡನೆ: ವಿಶೇಷ ನ್ಯಾಯಾಲಯ ಸ್ಥಾಪನೆಗೆ ನಿರ್ಧಾರ
ಬಿಹಾರದ ಬೇಗುಸರಾಯ್ ನಿಂದ ಖಗಾರಿಯಾಗೆ ರೈಲು ಸಂಚರಿಸುತ್ತಿದ್ದ ವೇಳೆಯಲ್ಲಿ ಕಳ್ಳ ಕಿಟಕಿಯೊಳಗೆ ಕೈಹಾಕಿ ಪ್ರಯಾಣಿಕರ ಮೊಬೈಲ್ ಕಳ್ಳತನ ಮಾಡಲು ಯತ್ನಿಸಿದ ಸಂದರ್ಭದಲ್ಲಿ ಪ್ರಯಾಣಿಕ ಆತನ ಎರಡು ಕೈಗಳನ್ನು ಹಿಡಿದುಕೊಂಡು ಬಿಟ್ಟಿದ್ದ.
ರೈಲು ಚಲಿಸುತ್ತಿದ್ದು, ಪ್ರಯಾಣಿಕರು ಕಳ್ಳನ ಕೈಯನ್ನು ಹಿಡಿದುಕೊಂಡ ಪರಿಣಾಮ ಆತ ಗಟ್ಟಿಯಾಗಿ ಕೂಗಿಕೊಳ್ಳುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ರೈಲಿನ ಹೊರಗೆ ಕಳ್ಳ ನೇತಾಡುತ್ತಿದ್ದು, ಹೀಗೆ ಸುಮಾರು 10 ಕಿಲೋ ಮೀಟರ್ ದೂರದವರೆಗೆ ರೈಲಿನ ಹೊರಭಾಗದಲ್ಲಿ ನೇತಾಡುತ್ತಾ ಹೋಗಿದ್ದ ಎಂದು ವರದಿ ತಿಳಿಸಿದೆ.
#WATCH | Khagaria, Bihar: Passengers caught hold of a man, kept him hanging outside from a window of a moving train as he allegedly tried to snatch mobile phones from them (15.09) pic.twitter.com/PY71wN2BmD
— ANI (@ANI) September 15, 2022
ಬಳಿಕ ಖಗಾರಿಯಾ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರು ಆತನನ್ನು ರೈಲ್ವೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಈತ ಬೇಗುಸರಾಯ್ ನ ಸಾಹೇಬ್ ಪುರ್ ಕಮಲ್ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾಗಿದ್ದು, ಪಂಕಜ್ ಕುಮಾರ್ ಎಂದು ಗುರುತಿಸಲಾಗಿದೆ.
ಮೊಬೈಲ್ ಕಳ್ಳತನ ಮಾಡಲು ಬಂದು ಕಿಟಕಿಯಲ್ಲೇ ಸಿಕ್ಕಿಬಿದ್ದು, ನೇತಾಡುತ್ತಾ ಸಾಗುತ್ತಿದ್ದ ದೃಶ್ಯವನ್ನು ಪ್ರಯಾಣಿಕರು ಸೆರೆಹಿಡಿದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ