Bihar ವಿಶ್ವಾಸಮತ ಪರೀಕ್ಷೆ ಮುನ್ನವೇ ಸ್ಪೀಕರ್ ಪದಚ್ಯುತಿ: 3 ವಿರೋಧ ಪಕ್ಷದ ಶಾಸಕರ ಬೆಂಬಲ
Team Udayavani, Feb 12, 2024, 2:36 PM IST
ಪಾಟ್ನಾ: ವಿಶ್ವಾಸ ಮತ ಯಾಚನೆ ನಡೆಯಬೇಕಿರುವ ಬಿಹಾರ ವಿಧಾನಸಭೆಯು ಇಂದು ಹಲವು ಡ್ರಾಮಾಗಳಿಗೆ ಸಾಕ್ಷಿಯಾಯಿತು. ರಾಷ್ಟ್ರೀಯ ಜನತಾ ದಳದ (ಆರ್ಜೆಡಿ) ಸ್ಪೀಕರ್ ಅವಧ್ ಬಿಹಾರಿ ಚೌಧರಿ ವಿರುದ್ಧ ಸೋಮವಾರ ಬಿಹಾರ ವಿಧಾನಸಭೆಯಲ್ಲಿ ಅವಿಶ್ವಾಸ ನಿರ್ಣಯ ಅಂಗೀಕರಿಸಲಾಯಿತು. ಬಳಿಕ ಅವರನ್ನು ಸ್ಪೀಕರ್ ಸ್ಥಾನದಿಂದ ತೆಗೆದುಹಾಕಲಾಯಿತು.
ಅವರ ಮೂವರು ಶಾಸಕರು ಪಕ್ಷವನ್ನು ತ್ಯಜಿಸಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಎನ್ಡಿಎಗೆ ಬೆಂಬಲ ನೀಡಿದ ಕಾರಣ ಲಾಲು ಪ್ರಸಾದ್ ಯಾದವ್ ಅವರ ಪಕ್ಷವು ಡಬಲ್ ಹೊಡೆತವನ್ನು ಅನುಭವಿಸಿದೆ.
ಅವಿಶ್ವಾಸ ನಿರ್ಣಯದ ಪರವಾಗಿ 125 ಸದಸ್ಯರು ಹಾಗೂ ವಿರುದ್ಧವಾಗಿ 112 ಸದಸ್ಯರು ಮತ ಚಲಾಯಿಸಿದರು.
ನೀಲಂ ದೇವಿ, ಚೇತನ್ ಆನಂದ್ ಮತ್ತು ಪ್ರಹ್ಲಾದ್ ಯಾದವ್ ಅವರು ಹೊಸದಾಗಿ ರಚನೆಯಾದ ಎನ್ಡಿಎ ಸರ್ಕಾರದ ಪರವಾಗಿ ಕುಳಿತಿರುವುದು ಕಂಡುಬಂತು.
ಎನ್ ಡಿಎ 127 ಶಾಸಕರ ಬೆಂಬಲವನ್ನು ಹೊಂದಿರುವುದರಿಂದ ವಿಶ್ವಾಸ ಮತ ಪರೀಕ್ಷೆಯಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಪಕ್ಷವು ಆರಂಭದಲ್ಲಿಯೇ ವಿಶ್ವಾಸ ಹೊಂದಿತ್ತು. ಎನ್ಡಿಎ ಮೈತ್ರಿಕೂಟದಲ್ಲಿ ನಿತೀಶ್ ಕುಮಾರ್ ಅವರ ಜೆಡಿಯು-ಬಿಜೆಪಿ ಸಂಯೋಜನೆಯು ಅಧಿಕಾರದಲ್ಲಿ ಉಳಿಯಲು 243 ಸದಸ್ಯ ಬಲದ ವಿಧಾನಸಭೆಯಲ್ಲಿ 122 ಬಹುಮತದ ಅಗತ್ಯವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?