29 ಅಡಿ ಎತ್ತರದ ಮೊಬೈಲ್‌ ಟವರನ್ನೇ ಕದ್ದರು!


Team Udayavani, Jan 21, 2023, 7:30 AM IST

29 ಅಡಿ ಎತ್ತರದ ಮೊಬೈಲ್‌ ಟವರನ್ನೇ ಕದ್ದರು!

ಪಾಟ್ನಾ: ಪೂರ್ಣ ರೈಲ್ವೆ ಎಂಜಿನ್‌, ಕಬ್ಬಿಣದಿಂದಲೇ ಮಾಡಿದ ದೊಡ್ಡ ಸೇತುವೆಯನ್ನೇ ಕದ್ದಿದ್ದು ಈಗ ಹಳೆಯಸುದ್ದಿ. ಇದೀಗ ಬಿಹಾರದ ಸಬ್ಜಿಬಾಘನಲ್ಲಿ 29 ಅಡಿ ಎತ್ತರದ ಮೊಬೈಲ್‌ ಟವರನ್ನೇ ಕದ್ದಿದ್ದಾರೆ.

ಜಿಟಿಎಲ್‌ ಕಂಪನಿಗೆ ಸೇರಿದ ಈ ಟವರ್‌ ಕಳುವಾಗಿದೆ ಎಂದು ಗೊತ್ತಾಗಿದ್ದು ಇನ್ನೂ ವಿಚಿತ್ರ ರೀತಿಯಲ್ಲಿ. ಕಂಪನಿಯ ತಂತ್ರಜ್ಞರು ತಮ್ಮ ಕಂಪನಿಯ ಸಾಧನಗಳು ಎಲ್ಲೆಲ್ಲಿವೆ ಎಂದು ಸಮೀಕ್ಷೆ ಮಾಡುವಾಗ, ಇದೊಂದು ಕಾಣಿಸಲಿಲ್ಲ. ಶಹೀನ್‌ ಖಯೂಮ್‌ ಎಂಬಾತನ ನಾಲ್ಕು ಅಂತಸ್ತಿನ ಮನೆ ಮೇಲೆ ಇದನ್ನು ಸ್ಥಾಪಿಸಲಾಗಿತ್ತು. ಅವರನ್ನು ಕೇಳಿದರೆ, ದೂರಸಂಪರ್ಕ ಕಂಪನಿಯ ತಂತ್ರಜ್ಞರಂತೆ ಕೆಲವರು ಬಂದು ಟವರ್‌ನಲ್ಲಿ ಸಮಸ್ಯೆಯಿದೆ, ಹೊಸತನ್ನು ಹಾಕುತ್ತೇವೆ ಎಂದು ತೆಗೆದುಕೊಂಡು ಹೋದರು ಎಂದು ತಿಳಿಸಿದ್ದಾರೆ.

ಕೂಡಲೇ ಜಿಟಿಎಲ್‌ನ ನೈಜ ತಂತ್ರಜ್ಞರು ಪ್ರಕರಣ ದಾಖಲಿಸಿದ್ದಾರೆ. ವಿಷಯ ಕೇಳಿ ಸ್ವತಃ ಪೊಲೀಸರು ದಂಗಾಗಿದ್ದಾರೆ. ಇನ್ನು ಸಾರ್ವಜನಿಕರಿಗಂತೂ ಹೇಳತೀರದ ಆತಂಕ ಶುರುವಾಗಿದೆ. ಈ ಟವರ್‌ ಅನ್ನು 2006ರಲ್ಲಿ ಏರ್‌ಸೆಲ್‌ ಕಂಪನಿ ಹಾಕಿತ್ತು. 2016ರಲ್ಲಿ ಇದನ್ನು ಜಿಟಿಎಲ್‌ ಕೊಂಡಿತ್ತು. ಟವರ್‌ ಕಾರ್ಯಾಚರಣೆ ನಿಲ್ಲಿಸಿದ್ದರಿಂದ, ಮನೆ ಮಾಲಿಕನಿಗೆ ಕಳೆದ ಕೆಲವು ತಿಂಗಳುಗಳಿಂದ ಜಿಟಿಎಲ್‌ ಬಾಡಿಗೆ ಕೊಡುವುದನ್ನೂ ನಿಲ್ಲಿಸಿತ್ತು.

ಇದರಿಂದ ಮಾಲಿಕ ಟವರನ್ನು ತೆಗೆಯಿರಿ ಎಂದು ಜಿಟಿಎಲ್‌ಗೆ ತಿಳಿಸಿದ್ದರು.

 

ಟಾಪ್ ನ್ಯೂಸ್

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.