Bihar train mishap: ಹಳಿತಪ್ಪಿದ ರೈಲು; 4 ಮಂದಿ ಮೃತ್ಯು, 70 ಮಂದಿಗೆ ಗಾಯ
Team Udayavani, Oct 12, 2023, 10:08 AM IST
ಪಾಟ್ನಾ: ರೈಲು ಹಳಿತಪ್ಪಿ ನಾಲ್ವರು ಗಾಯಗೊಂಡು, 70 ಮಂದಿ ಗಾಯಗೊಂಡಿರುವ ಘಟನೆ ಬಿಹಾರದ ಬಕ್ಸರ್ ನಲ್ಲಿ ಬುಧವಾರ(ಅ.11 ರಂದು) ರಾತ್ರಿ ನಡೆದಿದೆ.
ದೆಹಲಿ-ಕಾಮಾಖ್ಯ ಈಶಾನ್ಯ ಎಕ್ಸ್ಪ್ರೆಸ್ ರೈಲು ಹಳಿತಪ್ಪಿದ ಪರಿಣಾಮ ಈ ಘಟನೆ ಸಂಭವಿಸಿದೆ. ರೈಲು ದೆಹಲಿಯ ಆನಂದ್ ವಿಹಾರ್ ಟರ್ಮಿನಲ್ ನತ್ತ ತಲುಪುತ್ತಿತ್ತು. ಈ ವೇಳೆ ರಘುನಾಥಪುರ ನಿಲ್ದಾಣದ ರೈಲಿನ 6 ಬೋಗಿಗಳು ಹಳಿತಪ್ಪಿದೆ. ಇದರಿಂದ ರೈಲು ಉರುಳಿ ಬಿದ್ದಿದೆ. ಈ ಕಾರಣದಿಂದ 4 ಮಂದಿ ಪ್ರಯಾಣಿಕರು ಮೃತಪಟ್ಟಿದ್ದಾರೆ. ಸುಮಾರು 70 ಮಂದಿ ಅಪಘಾತದಲ್ಲಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಘಟನೆಯಲ್ಲಿ ಮೊದಲು ಎರಡು ಎಸಿ III ಶ್ರೇಣಿಯ ಬೋಗಿಗಳು ಉರುಳಿಬಿದ್ದಿದೆ. ಈ ಬೋಗಿಗಳ ಜತೆ ಮತ್ತೆ ನಾಲ್ಕು ಬೋಗಿಗಳು ಹಳಿತಪ್ಪಿದೆ.
ಅಪಘಾತ ಸಂಭವಿಸುತ್ತಿದ್ದಂತೆ, ಸ್ಥಳೀಯರು ಪ್ರಯಾಣಿಕರನ್ನು ರಕ್ಷಿಸಲು ಮತ್ತು ಹಳಿತಪ್ಪಿದ ಬೋಗಿಗಳಿಂದ ಗಾಯಾಳುಗಳನ್ನು ಹೊರತೆಗೆದಿದ್ದಾರೆ.ಇನ್ನು ಅಪಘಾತದ ಬಗ್ಗೆ ಮಾಹಿತಿ ಪಡೆದು ಸ್ಥಳಕ್ಕಾಗಮಿಸಿದ ಪೊಲೀಸ್ ಅಧಿಕಾರಿಗಳು ರೈಲಿನಿಂದ ಪ್ರಯಾಣಿಕರನ್ನು ರಕ್ಷಿಸಲು ಕಾರ್ಯಾಚರಣೆ ನಡೆಸಿದ್ದಾರೆ.
ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಘಟನೆಗೆ ಸಂತಾಪ ಸೂಚಿಸಿದ್ದು, ಹಳಿತಪ್ಪಿದಕ್ಕೆ ಮೂಲ ಕಾರಣವನ್ನು ತನಿಖೆ ಮಾಡಲಾಗುವುದೆಂದು ಟ್ವಿಟರ್ ನಲ್ಲಿ(ಎಕ್ಸ್) ನಲ್ಲಿ ಟ್ವೀಟ್ ಮಾಡಿದ್ದಾರೆ.
ಘಟನೆಯಲ್ಲಿ ಮೃತಪಟ್ಟ ಸಂಬಂಧಿಕರಿಗೆ ರೈಲ್ವೇಸ್ 10 ಲಕ್ಷ ರೂ. ಪರಿಹಾರವನ್ನು ನೀಡುವುದಾಗಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್ ಭಾಗವತ್
MUST WATCH
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ