ಅನಾರೋಗ್ಯ ಪೀಡಿತ ಪ್ರಾಣಿ ಪರೀಕ್ಷೆಗೆಂದು ಕರೆಸಿ ಪಶುವೈದ್ಯರನ್ನೇ ಅಪಹರಿಸಿ ಮದುವೆ ಮಾಡಿಸಿದರು
Team Udayavani, Jun 15, 2022, 4:34 PM IST
ಹೊಸದಿಲ್ಲಿ: ಅನಾರೋಗ್ಯದಿಂದಿರುವ ಪ್ರಾಣಿಯೊಂದರ ಪರೀಕ್ಷೆ ನಡೆಸಲು ಕರೆಸಲಾಗಿದ್ದ ಪಶುವೈದ್ಯರೊಬ್ಬರನ್ನು ಮೂವರ ತಂಡವೊಂದು ಅಪಹರಿಸಿ ನಂತರ ಅವರಿಗೆ ಬಲವಂತದಿಂದ ಮದುವೆ ಮಾಡಿಸಿದ ಘಟನೆ ಬಿಹಾರದ ಬೇಗುಸರಾಯ್ ಎಂಬಲ್ಲಿ ನಡೆದಿದೆ.
ಮಧ್ಯಾಹ್ನ 12 ಗಂಟೆಗೆ “ಪಶುವೈದ್ಯರಿಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ಪ್ರಾಣಿಯೊಂದು ಅನಾರೋಗ್ಯದಿಂದ ಬಳಲುತ್ತಿರುವುದಾಗಿ ತಿಳಿಸಿದ್ದಾನೆ ಈ ವೇಳೆ ಪಶು ವೈದ್ಯರು ಪ್ರಾಣಿಗೆ ಶುಶ್ರೂಷೆ ನೀಡುವ ಸಲುವಾಗಿ ಕರೆ ಮಾಡಿದ ಸ್ಥಳಕ್ಕೆ ಬಂದಿದ್ದಾರೆ ಈ ಸಂದರ್ಭ ಅಲ್ಲಿಗೆ ಬಂದ ಮೂವರ ತಂಡ ಪಶುವೈದ್ಯರನ್ನು ಅಪಹರಿಸಿ ಬಲವಂತವಾಗಿ ಯುವತಿಯೊಂದಿಗೆ ಮದುವೆ ಮಾಡಿಸಿದ್ದಾರೆ ಎನ್ನಲಾಗಿದೆ.
ಈ ವಿಚಾರ ಪಶುವೈದ್ಯರ ಮನೆಯಲ್ಲಿ ತಿಳಿಯುತ್ತಿದ್ದಂತೆ ಹುಡುಗನ ತಂದೆ ಹತ್ತಿರದ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣದ ಕುರಿತು ತನಿಖೆ ನಡೆಸಿ ತಪ್ಪತಸ್ಥರಿಗೆ ಶಿಕ್ಷೆ ನೀಡುವ ಭರವಸೆಯನ್ನು ನೀಡಿದ್ದಾರೆ.
ಇದನ್ನೂ ಓದಿ : ಗಾಢಾಂಧಕಾರದಲ್ಲಿ ಮುಳುಗಿದ ಇಸ್ಲಾಮಾಬಾದ್… ಶ್ರೀಲಂಕಾದಂತೆ ಪಾಕ್ ಕೂಡಾ ದಿವಾಳಿ!
ವರನ ಅಪಹರಣ ಅಥವಾ ಪಕಡ್ವಾ ವಿವಾಹ್ ಪದ್ಧತಿ ಬಿಹಾರ, ಜಾರ್ಖಂಡ್, ಉತ್ತರ ಪ್ರದೇಶದಲ್ಲಿ ಸಾಮಾನ್ಯವಾಗಿದ್ದು ಅವಿವಾಹಿತ ಯುವಕರನ್ನು ಅಪಹರಿಸಿ ನಂತರ ಅವರನ್ನು ಬಂದೂಕು ತೋರಿಸಿ ಬೆದರಿಸಿ ವಿವಾಹವಾಗುವಂತೆ ಬಲವಂತಪಡಿಸಲಾಗುತ್ತದೆ.
ಇಂತಹ ಘಟನೆಗಳಲ್ಲಿ ಆರ್ಥಿಕವಾಗಿ ಸದೃಢರಾಗಿರುವ ಯುವಕರನ್ನು ವಧುಗಳ ಕುಟುಂಬ ಅಪಹರಿಸಿ ಬೆದರಿಸಿ ವಿವಾಹಕ್ಕೆ ಒಪ್ಪಿಸಲಾಗುತ್ತದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
MUST WATCH
ಹೊಸ ಸೇರ್ಪಡೆ
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ