
Wheelie: ವ್ಹೀಲಿಂಗ್ ಮಾಡುವಾಗ ಸ್ಕಿಡ್ ಆದ ಬೈಕ್… ತಮಿಳುನಾಡಿನ ಯೂಟ್ಯೂಬರ್ ಗೆ ಗಂಭೀರ ಗಾಯ
Team Udayavani, Sep 18, 2023, 11:00 AM IST

ತಮಿಳುನಾಡು: ತನ್ನ ಹೈ-ಸ್ಪೀಡ್ ಮೋಟಾರ್ಸೈಕಲ್ ರೈಡಿಂಗ್ ಹಾಗೂ ಸಾಹಸಗಳಿಗೆ ಹೆಸರುವಾಸಿಯಾಗಿರುವ ತಮಿಳುನಾಡಿನ ಜನಪ್ರಿಯ ಯೂಟ್ಯೂಬರ್ ಟಿಟಿಎಫ್ ವಾಸನ್ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದಾರೆ.
ಚೆನ್ನೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಾಲುಶೆಟ್ಟಿ ಛತ್ರಂ ಬಳಿ ಬೈಕ್ ನಲ್ಲಿ ತೆರಳುತ್ತಿದ್ದ ಅವರು ಬೈಕ್ ವ್ಹೀಲಿಂಗ್ ಮಾಡಲು ಯತ್ನಿಸಿ ಅಪಘಾತ ಸಂಭವಿಸಿದೆ.
ವಾಸನ್ ಅವರು ಪ್ರಖ್ಯಾತ ಯೂಟ್ಯೂಬರ್ ಆಗಿದ್ದು ಇವರಿಗೆ ಲಕ್ಷಾಂತರ ಮಂದಿ ಫ್ಯಾನ್ ಫಾಲೋವರ್ಸ್ ಗಳಿದ್ದಾರೆ, ಟ್ರಾವೆಲ್ ಬ್ಲಾಗ್ ನಿಂದಲೇ ಹೆಸರುವಾಸಿಯಾಗಿರುವ ಅವರು ಹೈ ಸ್ಪೀಡ್ ಬೈಕ್ ರೈಡಿಂಗ್ ಜೊತೆಗೆ ವ್ಹೀಲಿಂಗ್ ನಲ್ಲಿ ಹೆಸರುವಾಸಿಯಾಗಿದ್ದರು ಅದರಂತೆ ಭಾನುವಾರ ಚೆನ್ನೈ-ಬೆಂಗಳೂರು ಮಾರ್ಗದಲ್ಲಿ ಚಲಿಸುತ್ತಿದ್ದ ವೇಳೆ ವ್ಹೀಲಿಂಗ್ ಮಾಡಲು ಹೋದ ವೇಳೆ ಬೈಕ್ ನ ಮುಂಭಾಗ ಮೇಲಕ್ಕೆ ಎಬ್ಬಿಸಿದಾಗ ಹಿಂಬದಿಯ ಚಕ್ರ ಸ್ಕಿಡ್ ಆಗಿ ನಿಯಂತ್ರಣ ಕಳೆದುಕೊಂಡಿದೆ ಪರಿಣಾಮ ವೇಗವಾಗಿದ್ದ ಬೈಕ್ ರಸ್ತೆ ಬದಿಯಲ್ಲಿದ್ದ ಹೊಂಡಕ್ಕೆ ಬಿದ್ದು ಮೀಟರ್ ಗಳಷ್ಟು ದೂರ ಎಸೆಯಲ್ಪಟ್ಟಿದೆ.
ಕಾಂಚೀಪುರಂನ ಖಾಸಗಿ ಆಸ್ಪತ್ರೆಯಲ್ಲಿ ವಾಸನ್ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ. ಅಪಘಾತದಲ್ಲಿ ಅವರ ಕೈ ಮುರಿದಿದೆ. ಇದಲ್ಲದೇ ದೇಹದ ವಿವಿಧೆಡೆ ಗಾಯಗಳಾಗಿವೆ. ಅವರು ಅಪಘಾತಕ್ಕೀಡಾಗಿದ್ದಾರೆ ಎಂದು ಹೇಳುವ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ. ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ: Yogi: ಯಮರಾಜ ನಿಮಗಾಗಿ ಕಾಯುತ್ತಿದ್ದಾನೆ: ಮಹಿಳೆಯರಿಗೆ ಕಿರುಕುಳ ನೀಡುವವರಿಗೆ ಯೋಗಿ ಎಚ್ಚರಿಕೆ
So many questions.. IN BOTH VIDEO #TTFVasan violated the traffic rules, which makes other guys to copy him. Why still no proper action taken against him. Dear youth don’t get influenced by this kind of stupid.
— A k (@JustMyTweetssss) September 18, 2023
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Today ಆರ್ಟ್ ಆಫ್ ಲಿವಿಂಗ್ “ಸಂಸ್ಕೃತಿ ಉತ್ಸವ”; ಸಮಾರಂಭಕ್ಕೆ ವಿಶ್ವದ ದೊಡ್ಡಣ್ಣನ ಆತಿಥ್ಯ

Road ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್ ಗಡ್ಕರಿ

Cable TV service ಎಂಎಸ್ಒಗಳಿಗೆ 10 ವರ್ಷ ಲೈಸನ್ಸ್: ಕೇಂದ್ರ ಸರಕಾರ

US aims ಭಾರತೀಯರಿಗೆ 10 ಲಕ್ಷಕ್ಕೂ ಅಧಿಕ ಅಮೆರಿಕದ ವಲಸೆರಹಿತ ವೀಸಾ ವಿತರಣೆ

Newspapers ಬಳಸಿ ಆಹಾರ ಪ್ಯಾಕ್ ಮಾಡದಿರಿ: ಎಫ್ಎಸ್ಎಸ್ಎಐ ಮನವಿ
MUST WATCH
ಹೊಸ ಸೇರ್ಪಡೆ

Congress ಜಗದೀಶ್ ಶೆಟ್ಟರ್ಗೆ ಆಪರೇಷನ್ ಹಸ್ತದ ಹೊಣೆ

Today World Heart Day ; ನಮ್ಮ ಹೃದಯ ನಾವೇ ಕಾಳಜಿ ವಹಿಸೋಣ

Asian Games ಇಂದಿನಿಂದ ಆ್ಯತ್ಲೆಟಿಕ್ಸ್ ಸ್ಪರ್ಧೆ; ಭಾರತಕ್ಕೆ ಗರಿಷ್ಠ ಪದಕಗಳ ನಿರೀಕ್ಷೆ

Today ಆರ್ಟ್ ಆಫ್ ಲಿವಿಂಗ್ “ಸಂಸ್ಕೃತಿ ಉತ್ಸವ”; ಸಮಾರಂಭಕ್ಕೆ ವಿಶ್ವದ ದೊಡ್ಡಣ್ಣನ ಆತಿಥ್ಯ

Tomorrow ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ದಿಲ್ಲಿಗೆ ?