ಮತಾಂತರ ನಿಷೇಧಕ್ಕೆ ಮಸೂದೆ
Team Udayavani, Aug 11, 2019, 6:00 AM IST
ಹೊಸದಿಲ್ಲಿ: ತ್ರಿವಳಿ ತಲಾಖ್ ಹಾಗೂ ಜಮ್ಮು-ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು ಮಸೂದೆಗಳಿಗೆ ಅನುಮೋದನೆ ಪಡೆಯುವಲ್ಲಿ ಯಶಸ್ವಿಯಾಗಿರುವ ಕೇಂದ್ರ ಸರಕಾರವು ಈಗ ಮತಾಂತರ ತಡೆಯಲು ಮಸೂದೆ ಮಂಡಿಸುವ ಸಾಧ್ಯತೆಯಿದೆ. ಮುಂದಿನ ಅಧಿವೇಶನದಲ್ಲಿ ಈ ಮಸೂದೆ ಮಂಡಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಈ ಕುರಿತು ಈಗಾಗಲೇ ಚರ್ಚೆ ನಡೆಯುತ್ತಿದ್ದು, ಪೂರ್ವತಯಾರಿ ಆರಂಭ ವಾಗಿದೆ. ಮಸೂದೆಯಲ್ಲಿ ಎಲ್ಲ ರೀತಿಯ ಮತಾಂತರವನ್ನೂ ನಿಷೇಧಿಸಲು ಸರಕಾರ ನಿರ್ಧರಿಸುವ ಸಾಧ್ಯತೆಯಿದೆ.
ಬಜೆಟ್ ಅಧಿವೇಶನದಲ್ಲಿ ಸರಕಾರ ರಾಜ್ಯಸಭೆಯಲ್ಲೂ ತ್ರಿವಳಿ ತಲಾಖ್, ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ಸಹಿತ ಹಲವು ಮಸೂದೆಗಳಿಗೆ ಅನುಮೋದನೆ ಪಡೆಯಲು ಸಾಧ್ಯವಾಗಿದ್ದರಿಂದ ದಾಖಲೆಯ ಮಸೂದೆಗಳು ಪಾಸಾಗಿದ್ದವು. ಈ ಹಿನ್ನೆಲೆಯಲ್ಲಿ ಸರಕಾರ ತನ್ನ ಪ್ರಣಾಳಿಕೆಯಲ್ಲಿದ್ದ ಎಲ್ಲ ಮಸೂದೆ ಗಳು ಹಾಗೂ ನೀತಿಗಳನ್ನು ಜಾರಿ ಗೊಳಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಡಲಿದೆ.
ಸದ್ಯ ದೇಶದಲ್ಲಿ ಯಾವುದೇ ಧರ್ಮದಿಂದ ಇನ್ನೊಂದು ಧರ್ಮಕ್ಕೆ ಮತಾಂತರವನ್ನು ನಿಷೇಧಿ ಸುವ ಕಾನೂನು ಚಾಲ್ತಿಯಲ್ಲಿಲ್ಲ. ಬಲವಂತದ ಮತಾಂತರವನ್ನಷ್ಟೇ ನಿಷೇಧಿಸಲಾಗಿದೆ. ಸರಕಾರ ಇನ್ನೂ ಒಂದು ಹೆಜ್ಜೆ ಮುಂದಿಟ್ಟು ಎಲ್ಲ ರೂಪದ ಮತಾಂತರವನ್ನೂ ಕಾನೂನು ಮೂಲಕ ನಿಷೇಧಿ ಸುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ