ಜಲ್ಲಿಕಟ್ಟು : ಶಾಶ್ವತ ಪರಿಹಾರಕ್ಕೆ ಶೀಘ್ರವೇ ಮಸೂದೆ: ತ.ನಾ.ರಾಜ್ಯಪಾಲ
Team Udayavani, Jan 23, 2017, 11:49 AM IST
ಚೆನ್ನೈ: ಜಲ್ಲಿಕಟ್ಟು ನಿಷೇದ ತೆರವಿನ ಅಧ್ಯಾದೇಶಕ್ಕೆ ಬದಲಿಯಾಗಿ ರಾಜ್ಯ ಸರಕಾರ ಶಾಶ್ವತ ಪರಿಹಾರದ ರೂಪದಲ್ಲಿ ಬೇಗನೆ ತಮಿಳು ನಾಡು ವಿಧಾನಸಭೆಯಲ್ಲಿ ಮಸೂದೆಯನ್ನು ಮಂಡಿಸಲಿದೆ ಎಂದು ಜಂಟಿ ಸದನವನ್ನು ಉದ್ದೇಶಿಸಿ ಮಾಡಿದ ಭಾಷಣದಲ್ಲಿ ರಾಜ್ಯಪಾಲ ವಿದ್ಯಾಸಾಗರ ರಾವ್ ಹೇಳಿದ್ದಾರೆ.
ಜಲ್ಲಿಕಟ್ಟು ಕುರಿತಾಗಿ ನಡೆದಿರುವ ಸಾಮೂಹಿಕ ಚಳವಳಿ ಹಾಗೂ ಜನರು ಒಗ್ಗಟ್ಟಾಗಿ ತೋರಿರುವ ಭಾವೋದ್ವೇಗದ ಫಲವಾಗಿ ಈ ಸಾಂಪ್ರದಾಯಿಕ ಹಾಗೂ ಪಾರಂಪರಿಕ ಕ್ರೀಡೆಯ ಮೇಲಿನ ನಿಷೇಧ ತೆರವುಗೊಳ್ಳಲು ಸಾಧ್ಯವಾಗಿದೆ ಎಂದವರು ಹೇಳಿದರು.
ಚೆನ್ನೈನ ಮರೀನಾ ಬೀಚ್ನಲ್ಲಿ ಕಳೆದ ಒಂದು ವಾರದಿಂದ ಸಹಸ್ರಾರು ವಿದ್ಯಾರ್ಥಿಗಳು ಹಾಗೂ ಯುವಕರು ಒಗ್ಗೂಡಿ ನಡೆಸುತ್ತಿದ್ದ ಶಾಂತಿಯುತ ಪ್ರತಿಭಟನೆಯು ಜಲ್ಲಿಕಟ್ಟು ನಿಷೇಧವನ್ನು ಅಧ್ಯಾದೇಶದ ಮೂಲಕ ತೆರವುಗೊಳಿಸುವಲ್ಲಿ ಸಫಲವಾಗಿರುವ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಪ್ರತಿಭಟನಕಾರರನ್ನು ಬಲವಂತದಿಂದ ಎತ್ತಂಗಡಿ ಮಾಡುವ ಕಾರ್ಯಾಚರಣೆಯನ್ನು ಪೊಲೀಸರು ನಡೆಸಿದ್ದರು. ಇದನ್ನು ಸದನದಲ್ಲಿ ಪ್ರತಿಭಟಿಸಿದ ಡಿಎಂಕೆ ಇಂದು ವಾಕ್ ಔಟ್ ನಡೆಸಿತು.
ಡಿಎಂಕೆ ನಾಯಕಿ ಕನಿಮೋಳಿ ಅವರು ಮಾಧ್ಯಮದೊಂದಿಗೆ ಮಾತನಾಡುತ್ತಾ, ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಬಲವಂತದ ಪೊಲೀಸ್ ಕ್ರಮ ತೆಗೆದುಕೊಂಡ ತಮಿಳು ನಾಡು ಸರಕಾರದ ಕ್ರಮ ದಮನಕಾರಿಯಾಗಿದೆ ಎಂದು ಹೇಳಿದರು.
ಪೊಲೀರು ಕೈಗೊಂಡಿದ್ದ ಲಾಠೀ ಚಾರ್ಚ್ ಕಾರ್ಯಾಚರಣೆಯನ್ನು ವಿಫಲಗೊಳಿಸುವ ಸಲುವಾಗಿ ಪ್ರತಿಭಟನಕಾರರು ಚೆನ್ನೈ ಮರಿನಾ ಬೀಚ್ನಲ್ಲಿ ಮಾನವ ಸರಪಣಿಯನ್ನು ರಚಿಸಿ ತಮ್ಮೊಳಗಿನ ಒಗ್ಗಟ್ಟನ್ನು ತೋರ್ಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು