ಕೋವಿಡ್ ನಡುವೆ ಹಕ್ಕಿಜ್ವರ ಭೀತಿ: ಕೇರಳದಲ್ಲಿ ‘ರಾಜ್ಯ ವಿಪತ್ತು’ ಘೋಷಣೆ, ಹಲವೆಡೆ ಹೈ ಅಲರ್ಟ್


Team Udayavani, Jan 5, 2021, 6:27 PM IST

birdflue

ಕೇರಳ: ಕೋವಿಡ್ ಭೀತಿಯ ಬೆನ್ನಲ್ಲೇ ಹಲವು ರಾಜ್ಯಗಳಲ್ಲಿ ಹಕ್ಕಿ ಜ್ವರದ ತೀವ್ರತೆ ಹೆಚ್ಚಾಗಿದ್ದು ಕೇರಳದ ಪಿಣರಾಯಿ ವಿಜಯನ್ ಸರ್ಕಾರ ಇದನ್ನು ರಾಜ್ಯ ವಿಪತ್ತು ಎಂದು ಪರಿಗಣಿಸಿ ಹೈ ಅಲರ್ಟ್ ಘೋಷಿಸಿದೆ. ಈಗಾಗಲೇ ಕೇರಳದ ಕೊಟ್ಟಾಯಂ, ಅಲಪ್ಪುಲ ಜಿಲ್ಲೆಯಲ್ಲಿ ವೈರಸ್ ಪತ್ತೆಯಾಗಿದೆ.

ಕೇರಳದ ನೆಡುಮ್ಮುಡಿ, ಪಲ್ಲಿಪಾಡ್, ಕರುವೆಟ್ಟಾ, ಕುಟ್ಟನಾಡ್ ಪಂಚಾಯತ್ ಪ್ರದೇಶಗಳಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಕೊಟ್ಟಾಯಂನ ನೀಂದೂರ್‌ನಲ್ಲಿರುವ ಬಾತುಕೋಳಿ ಫಾರಂ ಒಂದರಲ್ಲಿ ಎಚ್‌5 ಎನ್‌8 ವೈರಸ್‌ ಸೋಂಕಿನಿಂದ ಸುಮಾರು 1,700ರಷ್ಟು ಬಾತುಕೋಳಿಗಳು ಸತ್ತಿವೆ. ಈ ಹಿನ್ನೆಲೆಯಲ್ಲಿ ಅಲ್ಲಿರುವ ಎಲ್ಲ ಬಾತುಕೋಳಿಗಳು, ಕೋಳಿಗಳು ಮತ್ತು ಇತರ ಸಾಕು ಹಕ್ಕಿಗಳನ್ನು ಕೊಲ್ಲಲು ಸ್ಥಳೀಯಾಡಳಿತ ನಿರ್ಧರಿಸಿದೆ.

ಕುಟ್ಟನಾಡ್ ಪ್ರದೇಶದ 34 ಸಾವಿರ ಸೇರಿದಂತೆ ಒಟ್ಟಾರೆ 40 ಸಾವಿರ ಹಕ್ಕಿಗಳನ್ನು ಪರಿಶೀಲನೆಗೆ ಒಳಪಡಿಲಾಗಿದೆ. ಅಲಪ್ಪುಳ ಜಿಲ್ಲಾಧಿಕಾರಿಯು ಕುಟ್ಟನಾಡ್ ಮತ್ತು ಕಾರ್ತಿಕಪ್ಪಳ್ಳಿ ತಾಲ್ಲೂಕುಗಳಲ್ಲಿ ಬಾತುಕೋಳಿಗಳು ಮತ್ತು ಕೋಳಿ ಸೇರಿದಂತೆ ದೇಶೀಯ ಪಕ್ಷಿಗಳ ಮಾಂಸ, ಮೊಟ್ಟೆ ಮತ್ತು ತ್ಯಾಜ್ಯಗಳ ಬಳಕೆ ಮತ್ತು ವ್ಯಾಪಾರವನ್ನು ನಿಷೇಧಿಸಿದ್ದಾರೆ.

ಏತನ್ಮಧ‍್ಯೆ ವೈರಸ್ ಹರಡುವುದನ್ನು ತಡೆಗಟ್ಟಲು ಈಗಾಗಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹಕ್ಕಿ ಜ್ವರ ಕಂಡುಬಂದಿರುವ ಪ್ರದೇಶಗಳ 10 ಕಿ. ಮೀ ವ್ಯಾಪ್ತಿಗೆ ಬರುತ್ತಿರುವ ವಲಸೆ ಹಕ್ಕಿಗಳನ್ನು ಕೂಡ ಪರಿಶೀಲನೆಗೆ ಒಳಪಡಿಸಲಾಗುತ್ತಿದೆ ಎಂದು ರಾಜ್ಯ ಅರಣ್ಯ ಇಲಾಖೆ ತಿಳಿಸಿದೆ.

ಇದನ್ನೂ ಓದಿ:  ಫಾರ್ಚೂನ್‌ ಅಡುಗೆ ಎಣ್ಣೆ ಜಾಹೀರಾತಿನಿಂದ ಗಂಗೂಲಿಯನ್ನು ಕೈಬಿಟ್ಟ ಅದಾನಿ ವಿಲ್ಮಾರ್‌ ಕಂಪನಿ

ಕೇರಳ ಹೊರತುಪಡಿಸಿದರೆ ರಾಜಸ್ತಾನ, ಮಧ್ಯಪ್ರದೇಶ, ಹಿಮಾಚಲ್ ಪ್ರದೇಶಗಳಲ್ಲಿ ಈ ವೈರಸ್ ಕಂಡುಬಂದಿದೆ. ಹಿಮಾಚಲ ಪ್ರದೇಶದ ಕಂಗ್ರಾ ಜಿಲ್ಲೆಯ ಪಾಂಗ್ ಅಣೆಕಟ್ಟು ಬಳಿ 1800 ಹಕ್ಕಿಗಳು ಸತ್ತುಬಿದ್ದಿದ್ದು, ಅವುಗಳ ಸಾವಿಗೆ ಹಕ್ಕಿ ಜ್ವರವೇ ಕಾರಣ ಎಂಬುದು ಪರೀಕ್ಷೆಗಳಿಂದ ದೃಢಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜಸ್ತಾನದಲ್ಲಿ ಸತ್ತುಬಿದ್ದಿರುವ 425 ಹಕ್ಕಿಗಳಲ್ಲಿ ವೈರಸ್ ಕಂಡುಬಂದಿವೆ. ಪಕ್ಷಿ ಜ್ವರವು influenza virus ನಿಂದ ಉಂಟಾಗುವುದು,  ಪಕ್ಷಿಗಳಲ್ಲಿ ಇದು ಹೆಚ್ಚು ಸಾಂಕ್ರಾಮಿಕ ಮತ್ತು ತೀವ್ರವಾದ ಉಸಿರಾಟದ ಕಾಯಿಲೆಯಾಗಿದೆ. ಸೋಂಕಿತ ಪಕ್ಷಿಗಳ ಮಲ, ಬಾಯಿ ಅಥವಾ ಕಣ್ಣಿನ ಸ್ರಾವದ ಮೂಲಕ ರೋಗ ಮಾನವರಿಗೆ ಹರಡಬಹುದು.

ಇದನ್ನೂ ಓದಿ:  ಭಾರತದಲ್ಲಿ ಸಂಚಲನ ಸೃಷ್ಟಿಸಲು ಬರುತ್ತಿದೆ Renault Kiger: ಬಿಡುಗಡೆ ದಿನಾಂಕ ಪ್ರಕಟ

ಟಾಪ್ ನ್ಯೂಸ್

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.