Kerala; ರಾಜಕೀಯ ಹುತಾತ್ಮರು..:ವಿವಾದಕ್ಕೆ ಗುರಿಯಾದ ಆರ್ಚ್‌ಬಿಷಪ್ ಹೇಳಿಕೆ

ಜೋಸೆಫ್ ಪಂಪ್ಲಾನಿ ಬೆಂಬಲಕ್ಕೆ ನಿಂತ ಬಿಜೆಪಿ

Team Udayavani, May 21, 2023, 8:34 PM IST

1-saasd

ಕಣ್ಣೂರು: ‘ರಾಜಕೀಯ ಹುತಾತ್ಮರು ಎಂದರೆ ಅನಗತ್ಯ ಜಗಳದಲ್ಲಿ ಸಿಲುಕಿ ಸತ್ತವರು’ ಎಂದು ಹೇಳುವ ಮೂಲಕ ಕೇರಳದ ಕ್ಯಾಥೋಲಿಕ್ ಆರ್ಚ್‌ಬಿಷಪ್ ಒಬ್ಬರು ವಿವಾದಕ್ಕೆ ಸಿಲುಕಿದ್ದಾರೆ. ಅವರ ಹೇಳಿಕೆ ವಿರುದ್ಧ ರಾಜಕೀಯ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ.

ಶನಿವಾರ ನಡೆದ ಕೇರಳ ಕ್ಯಾಥೋಲಿಕ್ ಯೂತ್ ಮೂವ್‌ಮೆಂಟ್ (ಕೆಸಿವೈಎಂ) ಕಾರ್ಯಕ್ರಮದಲ್ಲಿ ತಲಸ್ಸೆರಿ ಆರ್ಚ್‌ಬಿಷಪ್ ಮಾರ್ ಜೋಸೆಫ್ ಪಂಪ್ಲಾನಿ ಅವರು ಯೇಸುವಿನ 12 ಅಪೊಸ್ತಲರ ಹುತಾತ್ಮತೆಯು ರಾಜಕೀಯ ಹುತಾತ್ಮರಿಗಿಂತ ಭಿನ್ನವಾಗಿದೆ ಎಂದು ಹೇಳಿದರು.

“ಅಪೊಸ್ತಲರ ಹುತಾತ್ಮತೆಯು ರಾಜಕೀಯ ಹುತಾತ್ಮರಂತೆಯೇ ಅಲ್ಲ. ರಾಜಕೀಯ ಹುತಾತ್ಮರಲ್ಲಿ ಕೆಲವರು ಯಾರೊಂದಿಗಾದರೂ ಅನಗತ್ಯ ಜಗಳವಾಡಿ ಗುಂಡು ಹಾರಿಸಿದವರು ಅಥವಾ ಕೆಲವರು ಕೆಲವು ಪ್ರತಿಭಟನೆಗಳ ನಂತರ ಪೊಲೀಸರಿಂದ ತಪ್ಪಿಸಿಕೊಳ್ಳುವಾಗ ಸೇತುವೆಯಿಂದ ಬಿದ್ದವರು. ಆದರೆ 12 ಹುತಾತ್ಮರಾದ ಅಪೊಸ್ತಲರು ಯೇಸುವಿನ ಸತ್ಯಕ್ಕಾಗಿ ಮತ್ತು ಪ್ರಪಂಚದ ಯೋಗಕ್ಷೇಮಕ್ಕಾಗಿ ತಮ್ಮ ಜೀವನವನ್ನು ತ್ಯಾಗ ಮಾಡಿದವರು, ” ಎಂದು ಹೇಳಿದ್ದರು.

ಏತನ್ಮಧ್ಯೆ, ಬಿಜೆಪಿಯು ಬಿಷಪ್ ಬೆಂಬಲಕ್ಕೆ ನಿಂತಿದ್ದು ಹಿರಿಯ ಧರ್ಮಗುರುಗಳ ಮೇಲಿನ ದಾಳಿ ಪ್ರಜಾಪ್ರಭುತ್ವ ವಿರೋಧಿ ಎಂದು ಹೇಳಿದೆ. “ಇತರರೊಂದಿಗೆ ಅನಗತ್ಯ ಜಗಳವಾಡುವವರನ್ನು ಹುತಾತ್ಮರನ್ನಾಗಿಸುವುದು ಸಿಪಿಐ(ಎಂ)… ಬಿಷಪ್ ಅವರು ಸಿಪಿಐ(ಎಂ) ಮುಖವನ್ನು ಬಹಿರಂಗಪಡಿಸಿದ್ದಾರೆ. ಎಡಪಕ್ಷಗಳು ಪ್ರಬಲವಾಗಿರುವ ಸ್ಥಳಗಳಲ್ಲಿ ಮಾತ್ರ ರಾಜಕೀಯ ಹಿಂಸಾಚಾರ ನಡೆಯುತ್ತದೆ. ಹುತಾತ್ಮರ ಸಾವನ್ನು ಆಚರಿಸುವವರು ಅವರೇ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕೆ ಸುರೇಂದ್ರನ್ ಪ್ರತಿಪಾದಿಸಿದ್ದಾರೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.