ಪಿಂಚಣಿ ಖಾತೆಗೆ 52 ಕೋಟಿ ರೂ.ಜಮಾ | ಸರ್ಕಾರಕ್ಕೆ ವಿಶೇಷ ಮನವಿ ಮಾಡಿದ ರೈತ
Team Udayavani, Sep 18, 2021, 3:32 PM IST
ಪಟನಾ: ತಾಂತ್ರಿಕ ದೋಷದಿಂದ ಬಿಹಾರದ ಮುಜಫ್ಫರ್ಪುರ ಜಿಲ್ಲೆ ಸಿಂಗಾರಿ ಗ್ರಾಮದ ರೈತ ರಾಮ್ ಬಹದ್ದೂರ್ ಶಾ ಅವರ ಬ್ಯಾಂಕ್ ಖಾತೆಗೆ 52 ಕೋಟಿ ರೂ. ಜಮೆಯಾಗಿದ್ದು, ಇದರಲ್ಲಿ ಸ್ವಲ್ಪ ಹಣ ನನಗೆ ನೀಡಿ ಎಂದು ಸರ್ಕಾರಕ್ಕೆ ಆತ ಮನವಿ ಮಾಡಿದ್ದಾನೆ.
ತಮ್ಮ ಪಿಂಚಣಿ ಖಾತೆಗೆ ಇಷ್ಟೊಂದು ಹಣ ಜಮಾ ಆಗಿರುವುದು ನೋಡಿ ಖುದ್ದು ಶಾ ಅಚ್ಚರಿಕೊಂಡಿದ್ದಾರೆ. ಕಾತ್ರಾ ಗ್ರಾಮದಲ್ಲಿ ಶಾ ಅವರ ಬ್ಯಾಂಕ್ ಖಾತೆ ಇದೆ. ಹಿರಿಯ ನಾಗರಿಕರಿಗೆ ನೀಡುವ ಪಿಂಚಣಿ ಜಮೆಯಾಗಿರುವ ಕುರಿತು ಮಾಹಿತಿ ಪಡೆಯಲು ಇವರು ಬ್ಯಾಂಕ್ಗೆ ತೆರಳಿದ್ದು, ಈ ವೇಳೆ ಖಾತೆಯಲ್ಲಿ 52 ಕೋಟಿ ರೂ. ಇದೆ ಎಂದು ಬ್ಯಾಂಕ್ ಅಧಿಕಾರಿ ತಿಳಿಸಿದ್ದನ್ನು ಕೇಳಿ ರೈತನಿಗೆ ಒಂದು ಕ್ಷಣ ಆಘಾತವಾಗಿದೆ.
ನಾವು ಗ್ರಾಮಗಳಲ್ಲಿ ವಾಸಿಸುವ ಬಡ ರೈತರಾಗಿದ್ದೇವೆ. ಹಣ ಹೇಗೆ ಬಂದಿದೆ ಎಂಬುದರ ಬಗ್ಗೆ ಗೊತ್ತಿಲ್ಲ. ಸರಕಾರ ನಮಗೆ ಹಣಕಾಸು ನೆರವು ನೀಡಿದರೆ ಸುಗಮವಾಗಿ ಜೀವನ ಸಾಗಿಸಬಹುದಾಗಿದೆ,” ಎಂದು ರಾಮ್ ಬಹದ್ದೂರ್ ಶಾ ತಿಳಿಸಿದ್ದಾರೆ.
ನಾನು ಕೃಷಿ ಮಾಡಿಕೊಂಡು ಇದುವರೆಗೆ ಕಷ್ಟದಲ್ಲಿಯೇ ಜೀವನ ನಡೆಸಿದ್ದೇನೆ. ಸದ್ಯ ನನ್ನ ಖಾತೆಗೆ ಬಂದ ಹಣದಲ್ಲಿ ಸ್ವಲ್ಪವನ್ನಾದರೂ ನನಗೆ ನೀಡಿ. ಅದರಿಂದ ಮುಂದಿನ ಜೀವನವನ್ನು ಸುಖ-ನೆಮ್ಮದಿಯಿಂದ ಕಳೆಯುತ್ತೇನೆ ಎಂದು ರೈತ ಶಾ ಸರ್ಕಾರಕ್ಕೆ ಮನವಿ ಮಾಡಿದ್ದಾನೆ.
ಇನ್ನು ಕಳೆದ ಎರಡು ದಿನಗಳ ಹಿಂದೆಯಷ್ಟೇ ಬಿಹಾರದ ಕಟಿಹಾರ್ ಜಿಲ್ಲೆಯ ಪಸ್ತಿಯಾ ಎಂಬ ಗ್ರಾಮದಲ್ಲಿ ನಡೆದಿತ್ತು ಇಂತಹದೇ ಘಟನೆ ನಡೆದಿತ್ತು. ಆ ಊರಿನ ಇಬ್ಬರು ಶಾಲಾ ಮಕ್ಕಳ ಖಾತೆಗೆ 900 ಕೋಟಿ ರೂಪಾಯಿಗೂ ಅಧಿಕ ಹಣ ಜಮೆಯಾಗಿತ್ತು. ಇದೀಗ ಮತ್ತೆ ರೈತನ ಖಾತೆಗೆ ಹಣ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ