ಮದ್ಯ ಸೇವಿಸಿ ನಿದ್ದೆಗೆ ಶರಣಾದ ಸಹಾಯಕ ಸ್ಟೇಷನ್ ಮಾಸ್ಟರ್! ರೈಲು ಸಂಚಾರ ಅಸ್ತವ್ಯಸ್ತ
ಸಹಾಯಕ ಸ್ಟೇಷನ್ ಮಾಸ್ಟರ್ ಅನಿರುದ್ಧ ಅವರನ್ನು ಅಮಾನತುಗೊಳಿಸಿ, ತನಿಖೆಗೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.
Team Udayavani, Jul 17, 2021, 1:15 PM IST
ನವದೆಹಲಿ:ಕರ್ತವ್ಯ ನಿರ್ವಹಣೆಯಲ್ಲಿದ್ದ ರೈಲ್ವೆಯ ಸಹಾಯಕ ಸ್ಟೇಷನ್ ಮಾಸ್ಟರ್ (ASM) ಕುಡಿದು ನಿದ್ದೆಗೆ ಶರಣಾದ ಪರಿಣಾಮ ಬುಧವಾರ (ಜುಲೈ 14) ದೆಹಲಿ-ಹೌರಾ ಮಾರ್ಗದಲ್ಲಿ ಸುಮಾರು ಒಂದೂವರೆ ಗಂಟೆಗಳ ಕಾಲ ಉತ್ತರ ಸೆಂಟ್ರಲ್ ರೈಲ್ವೆ ಸೇವೆಯಲ್ಲಿ ವ್ಯತ್ಯಯ ಉಂಟಾಗಲು ಕಾರಣವಾದ ಘಟನೆ ನಡೆದಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಅವಕಾಶಕ್ಕಾಗಿ ಅಲೆದ ದಿನಗಳನ್ನು ನೆನೆದು ಕಣ್ಣೀರು ಸುರಿಸಿದ ನಟ ಸೃಜನ್
ರೈಲ್ವೆ ಸಹಾಯಕ ಸ್ಟೇಷನ್ ಮಾಸ್ಟರ್ ಕುಡಿತದ ಪರಿಣಾಮ ಫರಕ್ಕಾ ಮತ್ತು ಮಗಧ ಎಕ್ಸ್ ಪ್ರೆಸ್ ನಂತಹ ಪ್ರಮುಖ ರೈಲುಗಳು ಹಾಗೂ ಸರಕು ಸಾಗಾಟದ ರೈಲುಗಳ ಸಂಚಾರವನ್ನು ವಿವಿಧ ನಿಲ್ದಾಣಗಳಲ್ಲಿ ತಡೆಹಿಡಿಯಲಾಗಿತ್ತು ಎಂದು ವರದಿ
ಹೇಳಿದೆ.
ಮಾಧ್ಯಮ ವರದಿಯ ಪ್ರಕಾರ, ಅಸಿಸ್ಟೆಂಟ್ ಸ್ಟೇಷನ್ ಮಾಸ್ಟರ್ ಅನಿರುದ್ಧ ಕುಮಾರ್ ಹಿರಿಯ ಅಧಿಕಾರಿಗಳು ಯಾವುದೇ ಫೋನ್ ಕರೆಗಳನ್ನು ಸ್ವೀಕರಿಸಿಲ್ಲವಾಗಿತ್ತು. ಬಳಿಕ ರೈಲ್ವೆ ನಿಲ್ದಾಣದ ಕಚೇರಿಗೆ ಬಂದು ಪರಿಶೀಲಿಸಿದಾಗ ಅನಿರುದ್ಧ ಕುಡಿದು ನಿದ್ದೆಗೆ ಶರಣಾಗಿರುವುದು ಬಯಲಾಗಿತ್ತು ಎಂದು ವರದಿ ವಿವರಿಸಿದೆ.
ಸಹಾಯಕ ಸ್ಟೇಷನ್ ಮಾಸ್ಟರ್ ಕಚೇರಿಯಲ್ಲಿ ಕುಡಿದು ಮಲಗಿರುವುದು ಪತ್ತೆಯಾಗಿದೆ ಎಂದು ಸ್ಟೇಷನ್ ಮಾಸ್ಟರ್ ವಿಶ್ವಂಭರ್ ದಯಾಳ್ ತಿಳಿಸಿದ್ದಾರೆ. ಈ ಘಟನೆ ಹಿನ್ನೆಲೆಯಲ್ಲಿ ದೂರನ್ನು ದಾಖಲಿಸಿ ಆರೋಪಪಟ್ಟಿ ಸಲ್ಲಿಸಲಾಗಿದೆ. ಅಲ್ಲದೇ ಸಹಾಯಕ ಸ್ಟೇಷನ್ ಮಾಸ್ಟರ್ ಅನಿರುದ್ಧ ಅವರನ್ನು ಅಮಾನತುಗೊಳಿಸಿ, ತನಿಖೆಗೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!