BJP ಯಿಂದ 4 ರಾಜ್ಯಗಳ ಚುನಾವಣೆಗೆ ಉಸ್ತುವಾರಿಗಳ ನೇಮಕ; ರಾಜಸ್ಥಾನಕ್ಕೆ ಜೋಶಿ
Team Udayavani, Jul 7, 2023, 5:52 PM IST
ಹೊಸದಿಲ್ಲಿ: ಈ ವರ್ಷ 4 ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಚುನಾವಣಾ ಉಸ್ತುವಾರಿಗಳನ್ನು ನೇಮಿಸಿದೆ. ರಾಜಸ್ಥಾನದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಚುನಾವಣಾ ಉಸ್ತುವಾರಿಯಾಗಿ ನೇಮಿಸಲಾಗಿದ್ದು, ನಿತಿನ್ ಪಟೇಲ್ ಮತ್ತು ಕುಲದೀಪ್ ಬಿಷ್ಣೋಯ್ ಅವರನ್ನು ಸಹ ಉಸ್ತುವಾರಿಯನ್ನಾಗಿ ಮಾಡಲಾಗಿದೆ.
ಮಧ್ಯಪ್ರದೇಶದಲ್ಲಿ ಭೂಪೇಂದ್ರ ಯಾದವ್ ಆಯ್ಕೆಯಾಗಿದ್ದಾರೆ.ಇದೆ. ಅಶ್ವನಿ ವೈಷ್ಣವ್ ಅವರನ್ನು ಸಹ ಉಸ್ತುವಾರಿಯನ್ನಾಗಿ ಮಾಡಲಾಗಿದೆ.
ಓಂಪ್ರಕಾಶ್ ಮಾಥೂರ್ ಅವರನ್ನು ಛತ್ತೀಸ್ಗಢದಲ್ಲಿ ಚುನಾವಣಾ ಉಸ್ತುವಾರಿಯನ್ನಾಗಿ ಮಾಡಲಾಗಿದೆ ಮತ್ತು ಮನ್ಸುಖ್ ಮಾಂಡವಿಯಾ ಸಹ-ಪ್ರಭಾರಿಯಾಗಿದ್ದಾರೆ. ತೆಲಂಗಾಣದಲ್ಲಿ ಪ್ರಕಾಶ್ ಜಾವಡೇಕರ್ ಚುನಾವಣಾ ಉಸ್ತುವಾರಿ ಮತ್ತು ಸುನೀಲ್ ಬನ್ಸಾಲ್ ಸಹ ಉಸ್ತುವಾರಿ ವಹಿಸಲಾಗಿದೆ.
ಬಿಜೆಪಿ ರಾಜಸ್ಥಾನದಲ್ಲಿ ಮತ್ತು ಛತ್ತೀಸ್ ಗಢದಲ್ಲಿ ಕಾಂಗ್ರೆಸ್ ನಿಂದ ಅಧಿಕಾರ ಕಸಿದು ಮತ್ತೆ ಅಧಿಕಾರಕ್ಕೇರಲು, ಮಧ್ಯಪ್ರದೇಶದಲ್ಲಿ ಅಧಿಕಾರ ಉಳಿಸಿಕೊಳ್ಳಲು ಈಗಾಗಲೇ ರಣತಂತ್ರಗಳನ್ನು ಹಣೆಯುತ್ತಿದೆ. ತೆಲಂಗಾಣದಲ್ಲಿ ಬಿಆರ್ ಎಸ್ ಮತ್ತು ಕಾಂಗ್ರೆಸ್ ಗೆ ಪ್ರಬಲ ಪೈಪೋಟಿ ನೀಡಲು ಮುಂದಾಗಿದೆ.