‘ಕೆಲಸ ಮಾಡುವವರ ಮೇಲೆ ಜನರ ನಿರೀಕ್ಷೆ’: ಮಹಾಸಮರಕ್ಕೆ BJP ಸ್ಲೋಗನ್ !


Team Udayavani, Feb 3, 2019, 10:16 AM IST

bjp-slogan-3-2.jpg

ನವದೆಹಲಿ: ಕೆಲವೇ ತಿಂಗಳಲ್ಲಿ ಎದುರಾಗಲಿರುವ ಲೋಕಸಭೆ ಮಹಾಚುನಾವಣೆಗೆ ಅಧಿಕಾರದಲ್ಲಿರುವ ಭಾರತೀಯ ಜನತಾ ಪಕ್ಷ ಭರ್ಜರಿ ತಯಾರಿ ನಡೆಸುತ್ತಿದೆ. ಇದರ ಮುಂದುವರೆದ ಭಾಗವಾಗಿ ಇದೀಗ ಪಕ್ಷದ ಘೋಷವಾಕ್ಯ ಸಿದ್ಧವಾಗಿದ್ದು ಅದನ್ನು ಆದಿತ್ಯವಾರದಂದು ಬಿಡುಗಡೆಗೊಳಿಸಲಾಗಿದೆ. ‘ಕಾಮ್ ಕರೇ ಜೋ, ಉಮೀದ್ ಉಸೀ ಸೆ ಹೋ’ (ಯಾರು ಕೆಲಸ ಮಾಡುತ್ತಾರೋ, ಅವರ ಮೇಲೆ ಜನರ ನಿರೀಕ್ಷೆ) ಎಂಬ ವಾಕ್ಯವನ್ನು ಬಳಸಿಕೊಂಡು ಬಿ.ಜೆ.ಪಿ. ಇದೀಗ ಮತದಾರರತ್ತ ಬರುತ್ತಿದೆ.

‘ಭಾರತ್ ಕಿ ಮನ್ ಕಿ ಬಾತ್, ಮೋದಿ ಕೆ ಸಾಥ್’ (ಮೋದಿಯವರೊಂದಿಗೆ ಭಾರತೀಯರ ಮನದಾಳದ ಮಾತು) ಎಂಬ ಒಂದು ತಿಂಗಳ ಅಭಿಯಾನದ ಪ್ರಾರಂಭದ ದಿನವೇ ಈ ಹೊಸ ಘೋಷವಾಕ್ಯವನ್ನು ಕಮಲ ಪಕ್ಷವು ಬಿಡುಗಡೆ ಮಾಡಿದೆ. ಈ ಅಭಿಯಾನದ ಮೂಲಕ ಬಿ.ಜೆ.ಪಿ.ಯು ದೇಶಾದ್ಯಂತ ಸುಮಾರು 10 ಕೋಟಿ ಜನರಿಂದ ತನ್ನ ಮುಂಬರುವ ಪ್ರಣಾಳಿಕೆ ರೂಪಿಸಲು ಸಲಹೆ ಸೂಚನೆಗಳನ್ನು ಪಡೆದುಕೊಳ್ಳಲಿದೆ. ಈ ಸಲಹೆ ಸೂಚನೆಗಳನ್ನು ಆಧರಿಸಿ ಬಿ.ಜೆ.ಪಿ.ಯು ಲೋಕ ಸಮರಕ್ಕಾಗಿ ತನ್ನ ಚುನಾವಣಾ ಪ್ರಣಾಳಿಕೆ ‘ಸಂಕಲ್ಪ್ ಪತ್ರ್’ ತಯಾರಿಸಲಿದೆ. 2014ರ ಚುನಾವಣೆಯಲ್ಲಿ ‘ಸಬ್ ಕೆ ಸಾಥ್ ಸಬ್ ಕಾ ವಿಕಾಸ್’ ಎಂಬ ಘೋಷವಾಕ್ಯದೊಂದಿಗೆ ಚುನಾವಣೆಯನ್ನು ಎದುರಿಸಿತ್ತು. ಮತ್ತು ಈ ಮೂಲಕ ಯುವ ಮತದಾರರ ಹೃದಯವನ್ನು ಗೆದ್ದು ನರೇಂದ್ರ ಮೋದಿ ಅವರು ಭರ್ಜರಿ ಬಹುಮತದೊಂದಿಗೆ ಭಾರತೀಯ ಜನತಾ ಪಕ್ಷವನ್ನು ಕೇಂದ್ರದಲ್ಲಿ ಅಧಿಕಾರಕ್ಕೆ ಏರಿಸುವಲ್ಲಿ ಯಶಸ್ವಿಯಾಗಿದ್ದರು.


‘ದೆಶದ ಜನರಿಂದ ಸಲಹೆಗಳನ್ನು ಪಡೆದುಕೊಂಡು ಪ್ರಣಾಳಿಕೆಯನ್ನು ರೂಪಿಸುವ ಈ ನಮ್ಮ ನೂತನ ಯೋಚನೆ ಪ್ರಜಾಪ್ರಭುತ್ವ ಗಟ್ಟಿಗೊಳ್ಳಲು ಇನ್ನಷ್ಟು ಸಹಕಾರಿಯಾಗುವುದು’ ಎಂಬ ಆಶಾವಾದವನ್ನು ಪಕ್ಷದ ಅಧ್ಯಕ್ಷ ಅಮಿತ್ ಶಾ ಅವರು ಈ ಸಂದರ್ಭದಲ್ಲಿ ವ್ಯಕ್ತಪಡಿಸಿದರು. ‘ದೇಶ ನಿರ್ಮಾಣದಲ್ಲಿ ಮತದಾರರ ಕನಸುಗಳೇನು ಮತ್ತು ಈ ನಿಟ್ಟಿನಲ್ಲಿ ಅವರು ಯಾವೆಲ್ಲ ರೀತಿಯ ಸಲಹೆಗಳನ್ನು ನೀಡುತ್ತಾರೆ ಎಂಬುದನ್ನು ನಮಗೆ ತಿಳಿಸಿದರೆ ಅದಕ್ಕೆ ಸೂಕ್ತವಾದ ಪ್ರಣಾಳಿಕೆಯನ್ನು ರೂಪಿಸಲು ಅನುಕೂಲವಾಗುತ್ತದೆ ಮತ್ತು ಆ ಮೂಲಕ ನಮಗೆ ನಮ್ಮ ಕನಸಿನ ಭಾರತವನ್ನು ನಿರ್ಮಾಣ ಮಾಡಲು ಸುಲಭವಾಗುತ್ತದೆ ಎಂದು ಶಾ ಇದೇ ಸಂದರ್ಭದಲ್ಲಿ ಹೇಳಿದರು. ಪಕ್ಷದ ಇಂದಿನ ಸಭೆ ನಡೆದ ಹೊಟೇಲ್ ನ ಪರಿಚಾರಕರೊಬ್ಬರಿಂದ ಪ್ರಥಮ ಸಲಹೆಯನ್ನು ಪಡೆಯುವ ಮೂಲಕ ಬಹು ನಿರೀಕ್ಷಿತ ಈ ಅಭಿಯಾನಕ್ಕೆ ಚಾಲನೆ ನೀಡಿದ್ದು ವಿಶೇಷವಾಗಿತ್ತು.

ಈ ಅಭಿಯಾನದ ಅಂಗವಾಗಿ ದೇಶಾದ್ಯಂತ ಇರುವ 4000 ವಿಧಾನಸಭಾ ಕ್ಷೇತ್ರಗಳಲ್ಲಿ ಜನರ ಅಭಿಪ್ರಾಯವನ್ನು ಸಂಗ್ರಹಿಸಲು 300 ವಿಶೇಷ ವಾಹನಗಳನ್ನು ಸಿದ್ಧಪಡಿಸಲಾಗಿದೆ ಮತ್ತು ಈ ವಾಹನಗಳಲ್ಲಿ 7700 ಸಲಹೆ ಸಂಗ್ರಹ ಪೆಟ್ಟಿಗೆಗಳನ್ನು ಇರಿಸಲಾಗಿದೆ. ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ‘ಸಂಕಲ್ಪ್ ಪತ್ರ್’ ಆಯೋಗದ ಮುಖ್ಯಸ್ಥರಾಗಿದ್ದಾರೆ.

ಟಾಪ್ ನ್ಯೂಸ್

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.