ಪ.ಬಂಗಾಳ ಹಿಂಸಾಚಾರ : ನಾಳೆ ದೇಶಾದ್ಯಂತ ಬಿಜೆಪಿ ಧರಣಿ
Team Udayavani, May 4, 2021, 10:46 AM IST
ಕೊಲ್ಕತ್ತಾ : ಚುನಾವಣಾ ಫಲಿತಾಂಶದ ದಿನ(ಭಾನುವಾರ) ಪಶ್ಚಿಮ ಬಂಗಾಳದಲ್ಲಿ ನಡೆದ ಹಿಂಸಾಚಾರವನ್ನು ಖಂಡಿಸಿ ದೇಶದಾದ್ಯಂತ ಮೇ 5 ರಂದು ಧರಣಿ ಮಾಡುವುದಾಗಿ ಬಿಜೆಪಿ ತಿಳಿಸಿದೆ. ಪಕ್ಷದ ಎಲ್ಲಾ ಸಾಂಸ್ಥಿಕ ಮಂಡಳಿಗಳಲ್ಲಿ ಕೋವಿಡ್ ನಿಯವನ್ನು ಪಾಲಿಸಿ ಈ ಪ್ರತಿಭಟನೆ ನಡೆಯಲಿದೆ ಎಂದು ತಿಳಿಸಲಾಗಿದೆ.
ಈ ನಡುವೆ ತಮ್ಮ ಪಕ್ಷದ ಕಾರ್ಯಕರ್ತರ ಕುಟುಂಬಗಳನ್ನು ಭೇಟಿ ಮಾಡಲು ಬಿಜೆಪಿಯ ರಾಷ್ಟ್ರೀಯ ಮುಖ್ಯಸ್ಥ ಜೆ.ಪಿ.ನಡ್ಡಾ ಅವರು ಇಂದು ಮತ್ತು ನಾಳೆ ( ಮೇ 4 ಮತ್ತು 5) ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ.
ಭಾನುವಾರ ಹೊರಬಿದ್ದ ಚುನಾವಣಾ ಫಲಿತಾಂಶದಲ್ಲಿ ತೃಣ ಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷ ಗೆಲುವನ್ನು ಸಾಧಿಸಿದೆ ಎಂದ ತಕ್ಷಣ ಟಿಎಂಸಿ ಕಾರ್ಯಕರ್ತರು ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಿಂಸಾಚಾರ ಮಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ಇನ್ನು ಪಶ್ಚಿಮ ಬಂಗಾಳದಲ್ಲಿ ನಡೆದಿರುವ ಹಿಂಸಾಚಾರ ಕುರಿತಂತೆ ಕೇಂದ್ರ ಗೃಹ ಸಚಿವಾಲಯ ಪಶ್ಚಿಮ ಬಂಗಾಳ ಸರ್ಕಾರದಿಂದ ವರದಿ ಕೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ