ಜಮ್ಮು : ಮತ ಹಾಕುವ ಮುನ್ನ ಮತಗಟ್ಟೆಯಲ್ಲೇ ಮೃತಪಟ್ಟ ಬಿಜೆಪಿ ಅಭ್ಯರ್ಥಿ
Team Udayavani, Oct 10, 2018, 11:42 AM IST
ಬನಿಹಾಲ್/ಜಮ್ಮು : ಎರಡನೇ ಹಂತದ ಮುನಿಸಿಪಲ್ ಚುನಾವಣೆಗಳು ಜಮ್ಮು ಕಾಶ್ಮೀರ ದಲ್ಲಿ ಇಂದು ಜಾರಿಯಲ್ಲಿರುವ ನಡುವೆಯೆ ರಾಮಬನ ಜಿಲ್ಲೆಯ ಬಿಜೆಪಿ ಅಭ್ಯರ್ಥಿ, 62ರ ಹರೆಯದ ಆಜಾದ್ ಸಿಂಗ್ ರಾಜು ಎಂಬವರು ಮತದಾನಕ್ಕೆ ಹೋಗುತ್ತಿದ್ದಂತೆಯೇ ಹೃದಯಾಘಾತಕ್ಕೆ ಗುರಿಯಾಗಿ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ.
ನೀರಾವರಿ ಮತ್ತು ನೆರೆ ನಿಯಂತ್ರಣ ಇಲಾಖೆಯ ಮಾಜಿ ನೌಕರ ರಾಜು ಅವರು ಮತದಾನ ಮಾಡುವ ಮುನ್ನವೇ ಮತಗಟ್ಟೆಯಲ್ಲಿ ಹೃದಯಾಘಾತಕ್ಕೆ ಗುರಿಯಾದರು. ಒಡನೆಯೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಒಯ್ಯಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.
ರಾಜು ಅವರು ರಾಮಬನ ಜಿಲ್ಲೆಯ ಏಳು ಮುನಿಸಿಪಾಲಿಟಿಗಳ ಚುನಾವಣೆಗಾಗಿ ಕಣದಲ್ಲಿದ್ದ 24 ಅಭ್ಯರ್ಥಿಗಳ ಪೈಕಿ ಒಬ್ಬರಾಗಿದ್ದಾರೆ.
ಜಮ್ಮು ಕಾಶ್ಮೀರಲ್ಲಿ ಇಂದು ಬುಧವಾರ 263 ಮುನಿಸಿಪಲ್ ವಾರ್ಡುಗಳಿಗೆ ಎರಡನೇ ಹಂತದ ಮತದಾನ ನಡೆಯುತ್ತಿದೆ. ಈ ಪೈಕಿ ಜಮ್ಮು ಪ್ರಾಂತ್ಯದ ಕಿಷ್ತ್ವಾರ್, ದೋಡಾ, ರಾಮಬನ, ರಿಯಾಸಿ, ಉಧಾಂಪುರ ಮತ್ತು ಕಠುವಾ ಸೇರಿದಂತೆ ಒಟ್ಟು ಆರು ಜಿಲ್ಲೆಯಗಳ 214 ಮುನಿಸಿಪಲ್ ವಾರ್ಡುಗಳೂ ಸೇರಿವೆ.
ಮತದಾನ ಇಂದು ಬೆಳಗ್ಗೆ 6 ಗಂಟೆಗೆ ಆರಂಭವಾಗಿದ್ದು ಸಂಜೆ 4 ಗಂಟೆಗೆ ಮುಗಿಯಲಿದೆ.
ಮೊದಲ ಎರಡು ತಾಸುಗಳಲ್ಲಿ ಇಂದು ಕಠುವಾ ಜಿಲ್ಲೆಯಲ್ಲಿ ಅತ್ಯಧಿಕ ಶೇ.17.2ರ ಮತದಾನವಾಗಿದ್ದು 54,622 ಮತದಾರರ ಮತ ಚಲಾಯಿಸಿದ್ದಾರೆ.
ಉಳಿದಂತೆ ರಿಯಾಸಿ ಶೇ.16.6, ಕಿಷ್ತ್ವಾರ್ ಶೇ.15.3, ದೋಡಾ ಶೇ.12.6, ರಾಮಬನ ಶೇ.12.4, ಉಧಾಂಪುರ ಜಿಲ್ಲೆಯಲ್ಲಿ ಶೇ.10.3 ಮತದಾನ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ