ಬಿಜೆಪಿಯ ಮುಖ್ಯಮಂತ್ರಿ ಪ್ರಯೋಗ ಸೂತ್ರ
Team Udayavani, Jul 27, 2021, 7:20 AM IST
ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಆಯ್ಕೆಯಲ್ಲಿ ವರಿಷ್ಠರು ಯುವಕರಿಗೆ ಆದ್ಯತೆ ನೀಡಬಹುದೇ? ಇತರ ರಾಜ್ಯಗಳಲ್ಲಿ ನಡೆಸಲಾಗಿರುವ ಪ್ರಯೋಗ ಗಂಧದ ಗುಡಿಯಲ್ಲಿ ನಡೆದೀತೆ? ಬಿಜೆಪಿಯ ಮುಖ್ಯಮಂತ್ರಿ ಪ್ರಯೋಗದತ್ತ ಒಂದು ನೋಟ.
ಉತ್ತರ ಪ್ರದೇಶ :
2017ರ ಚುನಾವಣೆ ಬಳಿಕ ಸಿಎಂ ಸ್ಥಾನಕ್ಕೆ ಡಾ|ಮಹೇಶ್ ಶರ್ಮಾ, ಸಂತೋಷ್ ಗಂಗ್ವಾರ್, ಕೇಶವ ಮೌರ್ಯ,ಮನೋಜ್ ಸಿನ್ಹಾ ನಡುವೆ ಸ್ಪರ್ಧೆಯಿತ್ತು. ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಎಚ್ಚರಿಕೆಯ ಹೆಜ್ಜೆ ಇರಿಸಿ, ಅಚ್ಚರಿಯ ಆಯ್ಕೆ ಪ್ರಕಟಿಸಿದ್ದರು. ಗೋರಖ್ಪುರದ ಸಂಸದ ಯೋಗಿ ಆದಿತ್ಯನಾಥ್ ಅವರನ್ನು ಸಿಎಂ ಹುದ್ದೆಗೆ ಆಯ್ಕೆ ಮಾಡಿದ್ದರು. ಇತ್ತೀಚೆಗೆ ಹಲವು ಬೆಳವಣಿಗೆಗಳು ನಡೆದಿದ್ದರೂ, ನಾಯಕತ್ವ ಬದಲಾವಣೆ ಮಾಡುವ ಅಗತ್ಯ ಬಂದಿಲ್ಲ.
ಗೋವಾ :
2017ರಲ್ಲಿ ಬಿಜೆಪಿ ಅಧಿಕಾರ ಉಳಿಸಿ ಕೊಂಡ ನಂತರ ಅಲ್ಲಿ ಸಿಎಂ ಆಗಿದ್ದು ಮನೋಹರ ಪರ್ರಿಕರ್. ಅವರ ನಿಧನದ ಬಳಿಕ ಸಾಂಕ್ವೇಲಿಮ್ ಶಾಸಕ ಡಾ|ಪ್ರಮೋದ್ ಸಾವಂತ್ರನ್ನು ಸಿಎಂ ಆಗಿ ಆಯ್ಕೆ ಮಾಡ ಲಾ ಯಿತು. ಜು.17ರಂದು ಪಣಜಿಯಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಸಿಎಂ ಸಾವಂತ್ ಆಡಳಿತ ಮೆಚ್ಚಿದ್ದರು. ಜತೆಗೆ ಅವರೇ ಮುಂದಿನ ಚುನಾವಣೆಯಲ್ಲಿ ಸಿಎಂ ಅಭ್ಯರ್ಥಿ ಎಂದು ಹೇಳಿದ್ದನ್ನು ಸ್ಮರಿಸಬಹುದು.
ತ್ರಿಪುರಾ ವಿಧಾನಸಭೆ :
ಈಶಾನ್ಯ ರಾಜ್ಯದಲ್ಲಿ 20 ವರ್ಷಗಳಿಂದ ಅಧಿಕಾರದಲ್ಲಿದ್ದ ಸಿಪಿಎಂ ಆಡಳಿತವನ್ನು 2018ರಲ್ಲಿ ಕೊನೆಗೊಳಿಸಿದ್ದ ಬಿಜೆಪಿ ಬಿಪ್ಲಬ್ ಕುಮಾರ್ ದೇಬ್ ಅವರನ್ನು ಸಿಎಂ ಮಾಡಿತ್ತು. 2016ರಲ್ಲೇ ಅವರನ್ನು ರಾಜ್ಯ ಬಿಜೆಪಿ ಅಧ್ಯಕ್ಷರನ್ನಾಗಿಸಲಾಗಿತ್ತು. ಅವರ ನೇತೃತ್ವದಲ್ಲಿಯೇ ವಿಧಾನಸಭೆ ಚುನಾವಣೆ ಎದುರಿಸಿ, ಜಯಗಳಿಸಲಾಗಿತ್ತು. ಎರಡು ಬಾರಿ ಅವರು ತಮ್ಮ ನಿರ್ಧಾರಗಳಿಂದ ವಿವಾದಕ್ಕೆ ಒಳಗಾಗಿದ್ದರೂ, ಪಕ್ಷದ ಶಾಸಕರಿಂದಲೇ ಭಿನ್ನಮತ ಎದುರಿಸಲಿಲ್ಲ.
ಉತ್ತರಾಖಂಡ :
2 ಸಾವಿರನೇ ಇಸ್ವಿಯಲ್ಲಿ ಅಸ್ತಿತ್ವಕ್ಕೆ ಬಂದ ಈ ರಾಜ್ಯದಲ್ಲಿ 2017ರಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿತ್ತು. ಹಾಲಿ ಅವಧಿಯಲ್ಲಿ 3ನೇ ಮುಖ್ಯಮಂತ್ರಿ ಯನ್ನು ರಾಜ್ಯ ಕಾಣುತ್ತಿದೆ. ಮೊದಲ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ಮಾ.10ರಂದು ರಾಜೀನಾಮೆ ನೀಡಿದ್ದರು. ಅವರ ಅನಂತರ ತೀರಥ್ ಸಿಂಗ್ ರಾವತ್ ಅಧಿಕಾರ ವಹಿಸಿಕೊಂಡರು. ಈಗ ಪುಷ್ಕರ್ ಸಿಂಗ್ ಧಾಮಿ ಅಚ್ಚರಿಯ ರೀತಿಯಲ್ಲಿ ಮುಖ್ಯಮಂತ್ರಿಯಾಗಿದ್ದಾರೆ.
ಮಹಾರಾಷ್ಟ್ರ :
2014ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಶಿವಸೇನೆ ಮೈತ್ರಿಕೂಟದ ಸಿಎಂ ಅಭ್ಯರ್ಥಿಯಾಗಿ ದೇವೇಂದ್ರ ಫಡ್ನವೀಸ್ರನ್ನು ಆಯ್ಕೆ ಮಾಡಲಾಗಿತ್ತು. “ಮೈತ್ರಿ ಚತುರ’ ಹೆಗ್ಗಳಿಕೆಗೆಯ ಇವರು ಬಿಜೆಪಿ ವರಿಷ್ಠರು ಆಯ್ಕೆ ಮಾಡಿದ ಮುಖ್ಯಮಂತ್ರಿ ಅಭ್ಯರ್ಥಿಗಳ ಪೈಕಿ ಯಶ ಸ್ವಿ ಸಿಎಂ ಎನಿಸಿದ್ದಾರೆ. ಮರಾಠ ಸಮುದಾಯದವರೇ ಹೆಚ್ಚಾಗಿರುವ ರಾಜ್ಯದಲ್ಲಿ ಬ್ರಾಹ್ಮಣ ಸಮುದಾಯದ ಫಡ್ನವೀಸ್ ಮೊದಲ ಹಂತದಲ್ಲೇ ಸಫ ಲ ರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
MUST WATCH
ಹೊಸ ಸೇರ್ಪಡೆ
ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!
Pan India: ಯಶ್ ʼಟಾಕ್ಸಿಕ್ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್