ಒಬಿಸಿಗೆ  ಬಿಜೆಪಿ ಮೀಸಲಿನಾಮಿಶ; ಕೆಟಗರಿ ವಿಭಜಿಸಲು ಆಯೋಗ


Team Udayavani, Aug 24, 2017, 6:00 AM IST

PTI8_23_.jpg

ನವದೆಹಲಿ: 2019ರ ಲೋಕಸಭೆ ಚುನಾವಣೆ ಮೇಲೆ ಕಣ್ಣು ಇಟ್ಟಿರುವ ಬಿಜೆಪಿ, ಒಬಿಸಿಯಲ್ಲೇ ಉಪ-ಕೆಟಗರಿ ರೂಪಿಸಲು ಆಯೋಗದ ರಚನೆ ಮತ್ತು ಕೆನೆಪದರ ಮಿತಿಯನ್ನು ಏರಿಸುವ ಬಗ್ಗೆ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಒಬಿಸಿ ಕೆಟಗರಿಯಲ್ಲಿ ಸಬ್‌-ಕೆಟಗರಿ ಗುರುತಿಸಲು ಆಯೋಗವೊಂದನ್ನು ರಚಿಸಲು ತೀರ್ಮಾನಿಸಲಾಗಿದೆ. ಈ ಮೂಲಕ ಒಬಿಸಿ ಪಂಗಡದಲ್ಲೇ ಇರುವ ಅತ್ಯಂತ ನಿರ್ಲಕ್ಷಿತ ಮತ್ತು ತಳ ಸಮುದಾಯದ ಮೇಲೂ ಬಿಜೆಪಿ ಕಣ್ಣು ಹಾಕಿದೆ.

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಕೆಟಗರಿಯಲ್ಲೇ ಉಪ ಕೆಟಗರಿ ಮಾಡುವ ಕುರಿತಂತೆ ಭರವಸೆ ನೀಡಿದ್ದ ಬಿಜೆಪಿ, ಇದರಲ್ಲಿ ಯಶಸ್ವಿಯೂ ಆಗಿತ್ತು. ಇದೀಗ ಇದೇ ನಿಯಮವನ್ನು ಕೇಂದ್ರ ಸರ್ಕಾರದ ಉದ್ಯೋಗದಲ್ಲೂ ಜಾರಿಗೆ ತರಲು ಮುಂದಾಗಿದೆ.

ಈಗಾಗಲೇ ಕರ್ನಾಟಕವೂ ಸೇರಿದಂತೆ ದೇಶದ ಒಂಬತ್ತು ರಾಜ್ಯಗಳು ಸ್ಥಳೀಯ ಸರ್ಕಾರಿ ಉದ್ಯೋಗಗಳಲ್ಲಿ ಸಬ್‌-ಕೆಟಗರಿ ಮೀಸಲಾತಿ ನೀಡುತ್ತಿವೆ. ಇದೇ ನೀತಿಯನ್ನು ಕೇಂದ್ರದ ಅಡಿಯಲ್ಲಿ ಬರುವ ಉದ್ಯೋಗಗಳಲ್ಲೂ ಜಾರಿಗೆ ತರುವ ಬಗ್ಗೆ ಸರ್ಕಾರ ವರ್ಷದಿಂದಲೂ ಪ್ರಯತ್ನಿಸುತ್ತಿದ್ದು, ಇದೀಗ ಮೂರ್ತ ಸ್ವರೂಪ ಸಿಕ್ಕಿದೆ. ಇದರಿಂದಾಗಿ ಸಬ್‌-ಕೆಟಗರಿಗಳಿಗೆ ಮೀಸಲಾತಿ ನೀಡುವ ಸಂಬಂಧ ಸಾಧ್ಯಾಸಾಧ್ಯತೆಗಳನ್ನು ಪರಿಶೀಲಿಸಲು ಸಮಿತಿ ರಚನೆ ಮಾಡಲು ನಿರ್ಧರಿಸಲಾಗಿದೆ. ಆಯೋಗದ ಅಧ್ಯಕ್ಷರ ನೇಮಕವಾದ ದಿನದಿಂದ 12 ದಿನಗಳಲ್ಲಿ ವರದಿ ನೀಡಬೇಕಿದೆ.

ಕೆನೆಪದರ ಮಿತಿ ಏರಿಕೆ
ಈ ಮಧ್ಯೆ, ಒಬಿಸಿಯೊಳಗೆ ಕೆನೆಪದರ ಮೀಸಲಾತಿ ಮಿತಿಯನ್ನು 6 ಲಕ್ಷ ರೂ.ಗಳಿಂದ 8 ಲಕ್ಷ ರೂ.ಗಳಿಗೆ ಏರಿಕೆ ಮಾಡಲು ಕೇಂದ್ರ ಸಂಪುಟ ನಿರ್ಧರಿಸಿದೆ. ಇದುವರೆಗೆ ವಾರ್ಷಿಕ 6 ಲಕ್ಷ ರೂ.ಗಳವರೆಗೆ ಆದಾಯವಿದ್ದವರಿಗೆ ಮಾತ್ರ ಮೀಸಲಾತಿ ಸೌಲಭ್ಯ ಸಿಗುತ್ತಿತ್ತು. ಈ ಮಿತಿಯನ್ನು 8 ಲಕ್ಷಗಳಿಗೆ ಏರಿಕೆ ಮಾಡಲಾಗಿದ್ದು, ಒಬಿಸಿಯಲ್ಲಿರುವ ಬಹುತೇಕ ಮಂದಿಗೆ ಅನುಕೂಲವಾಗಲಿದೆ. ಈ ಬಗ್ಗೆಯೂ ಕಳೆದ ವರ್ಷವೇ ಕೇಂದ್ರ ಸರ್ಕಾರ ಪ್ರಸ್ತಾಪವಿಟ್ಟಿತ್ತಾದರೂ, ಈ ನಿರ್ಧಾರ ಈಗ ಜಾರಿಗೆ ಬಂದಿದೆ.

ಸಬ್‌-ಕೆಟಗರಿ ಮೀಸಲಾತಿಯ ಲಾಭ-ನಷ್ಟ
ಕೆಟಗರಿಯಲ್ಲೇ ಉಪ-ಕೆಟಗರಿ ಮಾಡಿ ಮೀಸಲಾತಿ ನೀಡುವು ಇರುವೆ ಗೂಡಿಗೆ ಕೈಹಾಕಿದಷ್ಟು ಕಷ್ಟಕರವಾದ ಕೆಲಸ. ಒಬಿಸಿಯಲ್ಲಿ ನೂರಾರು ಜಾತಿಗಳು ಬರಲಿದ್ದು, ಇವುಗಳನ್ನು ಯಾವ ಕೆಟಗರಿಗೆ ಸೇರಿಸಬೇಕು ಎಂಬುದೇ ಮೊದಲ ಗೊಂದಲ. ಅಲ್ಲದೆ ಸದ್ಯ ಇರುವಂತೆ ಹೆಚ್ಚು ಹಿಂದುಳಿದವರು, ಹಿಂದುಳಿದವರು ಮತ್ತು ತೀರಾ ಹಿಂದುಳಿದವರು ಎಂದು ವಿಭಾಗಿಸಲಾಗಿದೆ. ಇದುವರೆಗೆ ಹೆಚ್ಚಿನ ಮೀಸಲಾತಿ ಸೌಲಭ್ಯ ಸಿಕ್ಕಿರುವುದು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಪ್ರಬಲರಾಗಿರುವ ಹೆಚ್ಚು ಹಿಂದುಳಿದವರಿಗೇ. ಇವರನ್ನು ಬಿಟ್ಟರೆ ಹಿಂದುಳಿದವರಿಗೆ ಕೊಂಚ ಮಟ್ಟಿಗೆ ಸಿಕ್ಕಿದೆ. ಆದರೆ ತೀರಾ ಹಿಂದುಳಿದವರಿಗೆ 30 ವರ್ಷಗಳಿಂದಲೂ ನಷ್ಟವಾಗುತ್ತಲೇ ಇದೆ. ಇದನ್ನು ಸರಿದೂಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಉಪ ಕೆಟಗರಿ ಮಾಡಿ ಮೀಸಲಾತಿ ನೀಡಲು ಮುಂದಾಗಿದೆ ಎನ್ನಲಾಗಿದೆ.

ಉತ್ತರ ಪ್ರದೇಶದಲ್ಲಿ ಯಶಸ್ವಿಯಾದ ತಂತ್ರ
ಉತ್ತರ ಪ್ರದೇಶದಲ್ಲಿ ಇದೇ ತಂತ್ರವನ್ನು ಇರಿಸಿಕೊಂಡೇ ಬಿಜೆಪಿ ಚುನಾವಣೆಗೆ ಇಳಿದಿತ್ತು. 1990ರಲ್ಲಿ ವಿ.ಪಿ. ಸಿಂಗ್‌ ನೇತೃತ್ವದ ಸರ್ಕಾರ ಮಂಡಲ್‌ ಆಯೋಗದ ಮೂಲಕ ಒಬಿಸಿ ವರ್ಗಕ್ಕೆ ಶೇ.27ರಷ್ಟು ಮೀಸಲಾತಿ ನೀಡುವ ಅವಕಾಶ ಕಲ್ಪಿಸಿತ್ತು. ಆಗಿನಿಂದಲೂ ಕೇಂದ್ರ ಸರ್ಕಾರಿ ಉದ್ಯೋಗಳಲ್ಲಿ ಒಬಿಸಿಯಲ್ಲಿನ ಹೆಚ್ಚು ಹಿಂದುಳಿದ ವರ್ಗದವರೇ ಇದರ ಅನುಕೂಲ ಪಡೆದುಕೊಂಡು ಬಂದಿದ್ದಾರೆ. ಅಲ್ಲದೆ ಉತ್ತರ ಪ್ರದೇಶದಲ್ಲಿ ಈ ಮೀಸಲಾತಿಯ ಸದುಪಯೋಗ ಪಡೆದವರು ಯಾದವರು. ಈ ಅಂಶವನ್ನೇ ಮುಂದಿಟ್ಟುಕೊಂಡಿದ್ದ ಬಿಜೆಪಿ ಯಾದವೇತರರ ಮತಗಳನ್ನು ಸೆಳೆಯುವಲ್ಲಿ ಯಶಸ್ವಿಯಾಗಿತ್ತು. ಇದೇ ತಂತ್ರವನ್ನು 2019ಕ್ಕೂ ಅನ್ವಯಿಸುವ ಇರಾದೆ ಬಿಜೆಪಿಗೆ ಇದೆ ಎಂದು ಹೇಳಲಾಗಿದೆ.

ಮೀಸಲಾತಿಯ ಮರುಪರಿಶೀಲನೆ ಅಲ್ಲ
ಒಬಿಸಿ ವರ್ಗದಲ್ಲಿನ ಉಪ-ಕೆಟಗರಿ ಮೀಸಲಾತಿ ನೀಡುವ ಸಂಬಂಧ ಆಯೋಗ ರಚಿತವಾಗಿರುವ ಹಿಂದೆ ಮೀಸಲಾತಿ ವ್ಯವಸ್ಥೆಯನ್ನು ಮರುಪರಿಶೀಲನೆ ಮಾಡುವ ಉದ್ದೇಶವಿಲ್ಲ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. ಇದು ಕೇವಲ ಮೀಸಲಾತಿ ಸಿಗದವರಿಗೆ ಮಾತ್ರ ಅನುಕೂಲವಾಗಲಿ ಎಂಬ ಕಾರಣದಿಂದ ಮಾಡಲಾಗಿದೆ. ಇದನ್ನು ಬಿಟ್ಟು ಬೇರೆ ಯಾವ ಉದ್ದೇಶವಿಲ್ಲ ಎಂದು ಸುದ್ದಿಗಾರರಿಗೆ ಮಾಹಿತಿ ನೀಡಿದರು.

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.