BJPಗೆ ರಾಮ ಮಂದಿರದ ಪೇಟೆಂಟ್ ಇಲ್ಲ; ಎಲ್ಲರೂ ಒಗ್ಗೂಡಬೇಕು: ಉಮಾ
Team Udayavani, Nov 26, 2018, 11:17 AM IST
ಹೊಸದಿಲ್ಲಿ : ”ಭಾರತೀಯ ಜನತಾ ಪಕ್ಷಕ್ಕೆ ರಾಮ ಮಂದಿರದ ಮೇಲೇನೂ ಪೇಟೆಂಟ್ ಇಲ್ಲ; ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಎಲ್ಲ ಪಕ್ಷಗಳು ಒಗ್ಗೂಡಿ ಮುಂದೆ ಬರಬಹುದು” ಎಂದು ಹಿರಿಯ ಬಿಜೆಪಿ ನಾಯಕಿ, ಕೇಂದ್ರ ಸಚಿವ ಉಮಾ ಭಾರತಿ ಹೇಳಿದ್ದಾರೆ.
”ಭಗವಾನ್ ರಾಮ ಎಲ್ಲರಿಗೂ ಸೇರಿದ್ದಾನೆ. ಹಾಗಾಗಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕ್ಕೆ ಎಲ್ಲ ಪಕ್ಷಗಳೂ ಕೈಜೋಡಿಸಬಹುದು. ಆದುದರಿಂದ ರಾಮ ಮಂದಿರ ನಿರ್ಮಾಣ ವಿಷಯದಲ್ಲಿ ಎಸ್ಪಿ, ಬಿಎಸ್ಪಿ, ಅಕಾಲಿ ದಳ, ಓವೈಸಿ, ಆಜಂ ಖಾನ್ ಮುಂತಾಗಿ ಎಲ್ಲರೂ ಮುಂದೆ ಬರಬೇಕು ಎಂದು ಸಚಿವೆ ಉಮಾ ಭಾರತಿ ನಿನ್ನೆ ಭಾನುವಾರ ಇಲ್ಲಿ ಹೇಳಿದರು.
ರಾಮ ಮಂದಿರ ನಿರ್ಮಾಣವನ್ನು ಆಗ್ರಹಿಸಿ ಶಿವಸೇನೆಯ ಮುಖ್ಯಸ್ಥ ಉದ್ಧವ ಠಾಕ್ರೆ ಅಯೋಧ್ಯೆಗೆ ಭೇಟಿ ನೀಡಿರುವುದನ್ನು ಪ್ರಶಂಸಿಸಿದ ಉಮಾ ಭಾರತಿ, ‘ಮಂದಿರ ನಿರ್ಮಾಣ ವಿಷಯದಲ್ಲಿ ಉದ್ಧವ್ ಅವರ ಯೋಗದಾನವನ್ನು, ಪ್ರಯತ್ನವನ್ನು ನಾನು ಮೆಚ್ಚುತ್ತೇನೆ’ ಎಂದು ಹೇಳಿದರು.
‘ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗದಿದ್ದರೆ ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್ಡಿಎ ಸರಕಾರ ಬಹುಕಾಲ ಬಾಳದು’ ಎಂದು ಶಿವಸೇನೆಯ ಉದ್ಧವ ಠಾಕ್ರೆ ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್