ಭವಾನಿಪುರ ಉ.ಚುನಾವಣೆ: ಮಮತಾ ವಿರುದ್ಧ ಸ್ಪರ್ಧೆಗಿಳಿದ ಬಿಜೆಪಿ ವಕೀಲೆ ಪ್ರಿಯಾಂಕಾ
Team Udayavani, Sep 10, 2021, 12:55 PM IST
ಕೊಲ್ಕತ್ತಾ : ಸಪ್ಟೆಂಬರ್ 30 ರಂದು ನಡೆಯಲಿರುವ ಪಶ್ಚಿಮ ಬಂಗಾಳದ ಭವಾನಿ ಪುರ್ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಬಿಜೆಪಿಯಿಂದ ವಕೀಲೆ ಪ್ರಿಯಾಂಕಾ ಟಿಬ್ರೆವಾಲ್ ಅವರು ಕಣಕ್ಕಿಳಿಯಲಿದ್ದಾರೆ.
ಇಂದು(ಸೆ.10) ಭವಾನಿಪುರ ಕ್ಷೇತ್ರದಿಂದ ಪ್ರಿಯಾಂಕಾ ಟಿಬ್ರೆವಾಲ್ ಅವರ ಸ್ಪರ್ಧೆಯನ್ನು ಅಧಿಕೃತ ವಾಗಿ ಬಿಜೆಪಿ ಪ್ರಕಟಿಸಿದೆ.
ಬಾಬುಲ್ ಸುಪ್ರಿಯೋ ಅವರ ಕಾನೂನು ಸಲಹೆಗಾರರಾಗಿದ್ದ ನ್ಯಾಯವಾದಿ ಪ್ರಿಯಾಂಕಾ ಟಿಬ್ರೆವಾಲ್, ಸಿಎಂ ಮಮತಾ ಬ್ಯಾನರ್ಜಿ ಅವರ ವಿರುದ್ಧ ಸ್ಥಾನಕ್ಕೆ ಸವಾಲು ಹಾಕುವ ಬಿಜೆಪಿಯ ಅಭ್ಯರ್ಥಿಯಾಗಿದ್ದಾರೆ. ಇವರು ಈ ಹಿಂದೆ ಕೋಲ್ಕತಾ ಮುನ್ಸಿಪಲ್ ಕೌನ್ಸಿಲ್ ಚುನಾವಣೆಯಲ್ಲಿ 2015 ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು, ಆದರೇ, ತೃಣಮೂಲ ಕಾಂಗ್ರೆಸ್ ನ ಸ್ವಪನ್ ಸಮ್ಮದರ್ ವಿರುದ್ಧ ಸೋತಿದ್ದರು. ಆದರೇ, ಬಿಜೆಪಿ ಈಗ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ದೀದಿ ವಿರುದ್ಧ ಉಪ ಚುನಾವಣೆಯಲ್ಲಿ ಕಣಕ್ಕಿಳಸುತ್ತಿದೆ.
ಜುಲೈ 7, 1981 ರಂದು ಕೋಲ್ಕತ್ತಾದಲ್ಲಿ ಜನಿಸಿದ ಪ್ರಿಯಾಂಕ ತನ್ನ ಶಾಲಾ ಶಿಕ್ಷಣವನ್ನು ವೆಲ್ಯಾಂಡ್ ಗೌಲ್ಡ್ ಸ್ಮಿತ್ ಶಾಲೆಯಲ್ಲಿ ಪಡೆದರು. ಮತ್ತು ದೆಹಲಿ ವಿಶ್ವವಿದ್ಯಾಲಯದಿಂದ ಪದವಿ ಪಡೆದರು. ಅದರ ನಂತರ, ಅವರು 2007 ರಲ್ಲಿ ಕೋಲ್ಕತ್ತಾ ವಿಶ್ವವಿದ್ಯಾಲಯದ ಅಡಿಯಲ್ಲಿರುವ ಹಜ್ರಾ ಕಾನೂನು ಕಾಲೇಜಿನಿಂದ ಕಾನೂನು ಪದವಿಯನ್ನು ಪಡೆದಿದ್ದಾರೆ.
ವೃತ್ತಿಯಲ್ಲಿ ವಕಿಲೆಯಾಗಿರುವ ಪ್ರಿಯಾಂಕ, 2014 ರಲ್ಲಿ ಪಶ್ಚಿಮ ಬಂಗಾಳದ ಬಿಜೆಪಿಗೆ ಸೇರ್ಪಡೆಗೊಳ್ಳುತ್ತಾರೆ. ಪಕ್ಷದಲ್ಲಿ ಹಲವು ಜವಾಬ್ದಾರಿಯನ್ನು ನಿಭಾಯಿಸಿ ಸೈ ಎನ್ನಿಸಿಕೊಂಡ ಪ್ರಿಯಾಂಕಾ ಗೆ ಬಿಜೆಪಿ, ಯುವ ಮೋರ್ಚಾ ದ ಅಧ್ಯಕ್ಷ ಗಿರಿಯನ್ನು ಸ್ಥಾನ ಮಾಡುತ್ತದೆ. 2021, ಅವರು ಎಂಟಲ್ಲಿಯಿಂದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದರು. ಆದರೆ ಟಿಎಂಸಿಯ ಸ್ವರ್ಣ ಕಮಲ್ ಸಾಹಾ ವಿರುದ್ಧ 58,257 ಮತಗಳ ಅಂತರದಿಂದ ಸೋತಿದ್ದರು.
ಇನ್ನು ಸಪ್ಟೆಂಬರ್ 30 ರಂದು ಉಪ ಚುನಾವಣೆ ನಡೆಯಲಿದ್ದು, ಅಕ್ಟೋಬರ್ 3 ರಂದು ಮತ ಎಣಿಕೆ ನಡೆಯಲಿದೆ ಎಂದು ಚುನಾವಣೆ ಆಯೋಗ ಇತ್ತೀಚೆಗೆ ತಿಳಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ