BJP; ಸಂಖ್ಯಾಬಲದ ಕೊರತೆ: ಗುಜರಾತ್ನಿಂದ ಕಣಕ್ಕಿಳಿಯಲಿರುವ ನಡ್ಡಾ
ಕಾಂಗ್ರೆಸ್ ತೊರೆದು ಬಂದ ಅಶೋಕ್ ಚವಾಣ್, ಮಿಲಿಂದ್ ಅವರೂ ರಾಜ್ಯಸಭಾ ಅಭ್ಯರ್ಥಿಗಳು
Team Udayavani, Feb 14, 2024, 5:27 PM IST
ಹೊಸದಿಲ್ಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಬುಧವಾರ ಗುಜರಾತ್ನಿಂದ ರಾಜ್ಯಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿಯನ್ನಾಗಿ ಹೆಸರಿಸಲಾಗಿದೆ. ನಡ್ಡಾ ಪ್ರಸ್ತುತ ಹಿಮಾಚಲ ಪ್ರದೇಶದಿಂದ ರಾಜ್ಯಸಭಾ ಸದಸ್ಯರಾಗಿದ್ದು, ಕಾಂಗ್ರೆಸ್ ಆಡಳಿತವಿರುವ ರಾಜ್ಯದಿಂದ ಏಕೈಕ ಸ್ಥಾನವನ್ನು ಗೆಲ್ಲುವ ಸಂಖ್ಯಾಬಲ ಬಿಜೆಪಿಗೆ ಇಲ್ಲದ ಕಾರಣ ಗುಜರಾತ್ ನತ್ತ ಮುಖ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ.
ಮಹಾರಾಷ್ಟ್ರದಿಂದ ಕಾಂಗ್ರೆಸ್ ತೊರೆದು ಬಂದ ಮಾಜಿ ಸಿಎಂ ಅಶೋಕ್ ಚವಾಣ್ ಅವರನ್ನು ಪಕ್ಷ ತೊರೆದು ಬಂದ ವಾರದ ಒಳಗೆ ಬಿಜೆಪಿ ರಾಜ್ಯಸಭಾ ಅಭ್ಯರ್ಥಿಯನ್ನಾಗಿಸಿದೆ.
ಇನ್ನೊಂದೆಡೆ ಸಿಎಂ ಏಕನಾಥ್ ಶಿಂಧೆ ಬಣದ ಶಿವಸೇನೆ ರಾಜ್ಯಸಭಾ ಚುನಾವಣೆಗೆ ತಮ್ಮ ಅಭ್ಯರ್ಥಿಯಾಗಿ ಮಿಲಿಂದ್ ದಿಯೋರಾ ಅವರನ್ನು ಬುಧವಾರ ನಾಮನಿರ್ದೇಶನ ಮಾಡಿದೆ.ಜ 14 ರಂದು ಅವರು ಕಾಂಗ್ರೆಸ್ ತೊರೆದು ಶಿವಸೇನೆಗೆ ಸೇರಿದ ಒಂದು ತಿಂಗಳ ನಂತರ ಅವರಿಗೆ ದೊಡ್ಡ ಅವಕಾಶ ನೀಡಲಾಗಿದೆ.
ಗುಜರಾತ್ ನಿಂದ ಗೋವಿಂದ್ ಧೋಲಾಕಿಯ, ಮಾಯಾಂಕ್ ಭಾಯಿ ನಾಯಕ್ , ಜಸ್ವಂತ್ ಸಲಾಂ ಸಿನ್ಹ ಪಾರ್ಮರ್ ಅಭ್ಯರ್ಥಿಯಾಗಿದ್ದಾರೆ. ಮಹಾರಾಷ್ಟ್ರದಿಂದ ಮೇಧಾ ಕುಲಕರ್ಣಿ, ಡಾ. ಅಜಿತ್ ಗೋಪ್ಚಡೆ ಅಭ್ಯರ್ಥಿಗಳಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
MUST WATCH
ಹೊಸ ಸೇರ್ಪಡೆ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ