ಶ್ರೀಕೃಷ್ಣ ಚುಡಾಯಿಸುವಾತ ಎಂದ ಭೂಷಣ್ ಮೇಲೆ ಕೇಸು
Team Udayavani, Apr 3, 2017, 12:35 PM IST
ಹೊಸದಿಲ್ಲಿ: ಶ್ರೀಕೃಷ್ಣ ಪುರಾಣ ಕಾಲದ ಸ್ತ್ರೀ ಚುಡಾಯಿಸುವಾತ. ಉ.ಪ್ರ. ಮುಖ್ಯಮಂತ್ರಿಗೆ ಸ್ತ್ರೀ ವಿರೋಧಿ ವಿಚಕ್ಷಣ ಪಡೆಗೆ ಕೃಷ್ಣನ ಹೆಸರಿಡುವ ಧೈರ್ಯ ಇದೆಯೇ? ಎಂದು ಪ್ರಶ್ನಿಸಿ ಹಿರಿಯ ನ್ಯಾಯವಾದಿ ಪ್ರಶಾಂತ್ ಭೂಷಣ್ ಮಾಡಿದ ಟ್ವೀಟ್ ವಿವಾದಕ್ಕೆ ಕಾರಣವಾಗಿದೆ. ಮಾತ್ರವಲ್ಲ ಅವರ ವಿರುದ್ಧ ಮುಸ್ಲಿಂ ವ್ಯಕ್ತಿಯೊಬ್ಬರು ಕೇಸು ದಾಖಲಿಸಿದ್ದಾರೆ. ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ಮಾಡಿದ ಆರೋಪವನ್ನು ಹೊರಿಸಲಾಗಿದೆ.
ವಿವಾದ ಉಂಟಾಗುತ್ತಿದ್ದಂತೆ ತಮ್ಮ ಟ್ವೀಟ್ ಅನ್ನು ತಪ್ಪಾಗಿ ತಿಳಿದುಕೊಳ್ಳಲಾಗಿದೆ ಎಂದು ಸ್ಪಷ್ಟನೆ ನೀಡಿ ಮತ್ತೂಂದು ಟ್ವೀಟ್ ಮಾಡಿದ್ದರು. ಕೃಷ್ಣ ಗೋಪಿಕೆಯರನ್ನು ಛೇಡಿಸುತ್ತಾ ಬೆಳೆದ ಎನ್ನುವುದನ್ನು ಕೇಳುತ್ತಾ ಬಂದಿದ್ದೇವೆ ಎಂದಿದ್ದರು ಭೂಷಣ್. ಆ್ಯಂಟಿ ರೋಮಿಯೋ ಸ್ಕ್ವಾಡ್ ಶೇಕ್ಸ್ಪಿಯರ್ಗೆ ಭಾರತೀಯರ ಕೊಡುಗೆ. ಇಂಗ್ಲೆಂಡ್ನಲ್ಲಿ ಈವ್ ಟೀಸಿಂಗ್ ವಿರುದ್ಧ ಹೋರಾಡಲು ಆ್ಯಂಟಿ ಕೃಷ್ಣ ಸ್ಕ್ವಾಡ್ ರಚಿಸಿದರೆ ಆಶ್ಚರ್ಯವಿಲ್ಲ’ ಎಂಬ ಮಾಜಿ ಆಪ್ ನಾಯಕರೊಬ್ಬರ ಟ್ವೀಟ್ಗೆ ಭೂಷಣ್ ಪ್ರತಿಕ್ರಿಯಿಸಿದ್ದು ವಿವಾದಕ್ಕೆ ಕಾರಣ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ