ಯೋಗಿಯನ್ನು ಬಿಜೆಪಿ ಮನೆಗೆ ಕಳುಹಿಸಿದೆ..: ವ್ಯಂಗ್ಯವಾಡಿದ ಅಖಿಲೇಶ್ ಯಾದವ್


Team Udayavani, Jan 15, 2022, 4:02 PM IST

akhilesh yadav vs yogi adityanath

ಲಕ್ನೋ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ರಂಗೇರುತ್ತಿದೆ. ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಅಂತಿಮಗೊಳಿಸುತ್ತಿದೆ, ಪ್ರಚಾರವೂ ಆರಂಭವಾಗಿದೆ. ಈ ನಡುವೆ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರ ವ್ಯಂಗ್ಯವಾಡಿದ್ದಾರೆ.

ಯೋಗಿ ಆದಿತ್ಯನಾಥ್ ಅವರು ಈ ಚುನಾವಣೆಯಲ್ಲಿ ತಮ್ಮ ಭದ್ರಕೋಟೆ ಗೋರಖಪುರದಿಂದಲೇ ಸ್ಪರ್ಧೆ ಮಾಡುತ್ತಾರೆ ಎಂದು ಬಿಜೆಪಿ ಹೇಳಿದೆ. ಇದರ ಬೆನ್ನಲ್ಲೇ ಹೇಳಿಕೆ ನೀಡಿರುವ ಅಖಿಲೇಶ್, “ಮೊದಲು ಅವರು ‘ಅಯೋಧ್ಯೆಯಿಂದ ಸ್ಪರ್ಧೆ ಮಾಡುತ್ತಾರೆ ಅಥವಾ ‘ಅವರು ಮಥುರಾದಿಂದ ಕಣಕ್ಕಿಳಿಯುತ್ತಾರೆ’ ಅಥವಾ ‘ಅವರು ಪ್ರಯಾಗ್‌ ರಾಜ್‌ ನಿಂದ ಚುನಾವಣೆ ಸ್ಪರ್ಧಿಸುತ್ತಾರೆ’ ಎಂದು ಹೇಳುತ್ತಿದ್ದರು, ಆದರೆ ಈಗ ನೋಡಿ ಬಿಜೆಪಿ ಅವರನ್ನು ಈಗಾಗಲೇ ಗೋರಖ್‌ ಪುರಕ್ಕೆ ಕಳುಹಿಸಿದೆ. ಯೋಗಿ ಅಲ್ಲೇ ಉಳಿಯಬೇಕು. ಅಲ್ಲಿಂದ ಬರುವ ಅವಶ್ಯಕತೆ ಇಲ್ಲ” ಎಂದು ವ್ಯಂಗ್ಯವಾಡಿದರು.

ಅಲ್ಲದೆ ಈ ಬಾರಿ ನಮ್ಮ ಪಕ್ಷವು ಗೋರಖಪುರ ಜಿಲ್ಲೆಯ ಎಲ್ಲಾ ವಿಧಾನಸಭಾ ಸ್ಥಾನಗಳನ್ನು ಗೆಲ್ಲುತ್ತದೆ. ಸ್ವಂತ ನಗರದಲ್ಲಿ ಮೆಟ್ರೊ ಓಡಿಸಲು, ಒಳಚರಂಡಿ ನಿರ್ಮಿಸಲು ಯೋಗಿಗೆ ಸಾಧ್ಯವಾಗಲಿಲ್ಲ. ಈ ಬಾರಿ ಗೋರಖಪುರದ ಜನರು ಅವರಿಗೆ ತಕ್ಕ ಪಾಠ ಕಲಿಸುತ್ತಾರೆ. ಇಂದು ಬಿಜೆಪಿಯು ಅವರನ್ನು ಮನೆಗೆ ಕಳುಹಿಸಿದೆ. ಮುಂದೆ ಜನರು ಅವರನ್ನು ಮನೆಯಲ್ಲೇ ಉಳಿದುಕೊಳ್ಳುವಂತೆ ಮಾಡಲಿದ್ದಾರೆ’ ಎಂದು ಅಖಿಲೇಶ್ ಹೇಳಿದರು.

ಇದನ್ನೂ ಓದಿ:ಕೇರಳ ಸಿಎಂ ಪಿಣರಾಯಿ ವಿಜಯನ್ ವೈದ್ಯಕೀಯ ಚಿಕಿತ್ಸೆಗಾಗಿ ಅಮೆರಿಕಕ್ಕೆ

ಉತ್ತರ ಪ್ರದೇಶ ವಿಧಾನಸಭೆ ಚುನಾವನೆ ಘೋಷಣೆಯಾದ ಬಳಿಕ ಹಲವು ಬಿಜೆಪಿ ಶಾಸಕರು ಪಕ್ಷ ತೊರೆದು ಸಮಾಜವಾದಿ ಪಾರ್ಟಿ ಸೇರಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಯೋಗಿಯ ಬಿಜೆಪಿಗೆ ಅಖಿಲೇಶ್ ಪ್ರಬಲ ಪ್ರತಿಸ್ಪರ್ಧಿಯಾಗಿದ್ದಾರೆ.

403 ಸದಸ್ಯ ಬಲವನ್ನು ಹೊಂದಿರುವ ಉತ್ತರ ಪ್ರದೇಶ ವಿಧಾನ ಸಭೆಗೆ ಫೆಬ್ರವರಿ 10 ರಿಂದ ಮಾರ್ಚ್ 7ರ ವರೆಗೆ ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10ರಂದು ಮತ ಎಣಿಕೆ ನಡೆಯಲಿದೆ.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.