ಬಿಜೆಪಿ ಆಹ್ವಾನಕ್ಕೆ ನೇರವಾಗಿ “ನೋ’ ಎನ್ನದ ರಜನಿ!
Team Udayavani, May 18, 2017, 1:53 PM IST
ಚೆನ್ನೈ: ರಾಜಕೀಯಕ್ಕೆ ಅಥವಾ ಬಿಜೆಪಿಗೆ ಸೇರುವುದಿದ್ದರೆ ಸ್ವಾಗತ ಎಂಬ ಬಿಜೆಪಿಯ ಮನವಿಗೆ ಸೂಪರ್ಸ್ಟಾರ್ ರಜನಿಕಾಂತ್ “ನೋ’ ಎಂದಿಲ್ಲ. ನೇರವಾಗಿ “ಇಲ್ಲ, ಬರುವುದಿಲ್ಲ’ ಎಂದು ಹೇಳದೆ ಅಡ್ಡ ಗೋಡೆ ಮೇಲೆ ದೀಪ ಇಟ್ಟಂತೆ ಮಾತನಾಡಿರುವ ರಜನಿ ಅವರು, ತಮ್ಮ ಮುಂದಿನ ಹೆಜ್ಜೆಗಳ ಬಗ್ಗೆ ಇನ್ನೂ ಕುತೂಹಲ ಉಳಿಯುವಂತೆ ನೋಡಿಕೊಂಡಿದ್ದಾರೆ.
ಬಿಜೆಪಿ ನಾಯಕ ಪೊನ್ ರಾಧಾಕೃಷ್ಣನ್ ಅವರ ಆಹ್ವಾನಕ್ಕೆ ಸಂಬಂಧಿಸಿ ಬುಧವಾರ ಪ್ರತಿಕ್ರಿಯಿಸಿರುವ ರಜನಿಕಾಂತ್, “ನಾನು ಹೇಳಬೇಕಿರುವುದನ್ನು ನೇರವಾಗಿ ಹೇಳಿದ್ದೇನೆ. ಇನ್ನು ಹೇಳಲಿಕ್ಕೆ ಏನೂ ಬಾಕಿ ಉಳಿದಿಲ್ಲ. ದೇವರ ಇಚ್ಛೆಯಂತೆ ನಡೆದುಕೊಳ್ಳುತ್ತೇನೆ’ ಎಂದಿದ್ದಾರೆ.
ಕಳೆದ ವರ್ಷ ರಜನಿ ಹೊಸ ಪಕ್ಷ ಕಟ್ಟುತ್ತಾರೆ. ಅದಕ್ಕೆ ಬಿಜೆಪಿ ಬೆಂಬಲ ಕೊಡುತ್ತದೆ ಎಂಬ ಊಹಾಪೋಹಗಳು ರಾಜಕೀಯ ವಲಯದಲ್ಲಿ ಹರಿದಾಡಿತ್ತು. ಈಗಲೂ ಅವರು ಬಿಜೆಪಿ ಮನವಿಯ ಬಗ್ಗೆ ಯಾವುದೇ ನೇರ ಉತ್ತರ ಕೊಟ್ಟಿಲ್ಲ. ಆದರೆ, ದೇವರಿಚ್ಛಿಸಿದರೆ ನಾಳೆಯೇ ರಾಜಕೀಯ ಸೇರುತ್ತೇನೆ ಎಂದು ಹೇಳುವ ಮೂಲಕ ಸೋಮವಾರವಷ್ಟೇ ರಜನಿ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದ್ದರು. ರಜನಿ ರಾಜಕೀಯಕ್ಕೆ ಬರುವುದಾದರೆ ಬಿಜೆಪಿ ಮುಕ್ತ ಮನಸ್ಸಿನಿಂದ ಸ್ವಾಗತಿಸುತ್ತದೆ ಎಂದು ಪೊನ್ ಆಹ್ವಾನ ಕೊಟ್ಟಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhupal: ʼಭೂಪೇಂದ್ರ ಜೋಗಿʼ ರೀಲ್ಸ್ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ
Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು
ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು
Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ
Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!
MUST WATCH
ಹೊಸ ಸೇರ್ಪಡೆ
Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ
Bhupal: ʼಭೂಪೇಂದ್ರ ಜೋಗಿʼ ರೀಲ್ಸ್ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ
Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು
ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು
Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ