ದೆಹಲಿ ಮದ್ಯ ಹಗರಣ ಪ್ರಕರಣದಲ್ಲಿ ಹೆಸರು; ಕೆಸಿಆರ್ ಪುತ್ರಿ ಕವಿತಾ ಆಕ್ರೋಶ

ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಪ್ರಧಾನಿ ಮೋದಿಗಿಂತ ಮುಂದೆ ಇಡಿ ಆಗಮಿಸುತ್ತದೆ

Team Udayavani, Dec 1, 2022, 4:22 PM IST

1-asddasdsd

ಹೈದರಾಬಾದ್: ದೆಹಲಿ ಮದ್ಯ ಹಗರಣ ಪ್ರಕರಣದಲ್ಲಿ ಹೆಸರಿಸಲಾಗಿರುವ ತೆಲಂಗಾಣ ಶಾಸಕಿ ಕೆ.ಕವಿತಾ ಅವರು, ಜಾರಿ ನಿರ್ದೇಶನಾಲಯದಂತಹ ಕೇಂದ್ರೀಯ ಸಂಸ್ಥೆಗಳು ಪ್ರಧಾನಿ ನರೇಂದ್ರ ಮೋದಿಯವರಿಗಿಂತ ಸಾಕಷ್ಟು ಮುಂಚಿತವಾಗಿಯೇ ಚುನಾವಣೆಯ ರಾಜ್ಯಗಳಿಗೆ ಆಗಮಿಸುತ್ತವೆ ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

“8 ವರ್ಷಗಳ ಹಿಂದೆ ಪ್ರಧಾನಿ ಮೋದಿ ಸರಕಾರ ಬಂದಿತು, ಈ 8 ವರ್ಷಗಳಲ್ಲಿ 9 ರಾಜ್ಯಗಳಲ್ಲಿ ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸರಕಾರಗಳು ಉರುಳಿದವು, ಆದರೆ ಬಿಜೆಪಿ ವಾಮ ಮಾರ್ಗಗಳಲ್ಲಿ ಸರಕಾರಗಳನ್ನು ರಚಿಸಿತು. ಚುನಾವಣೆ ನಡೆಯುವ ರಾಜ್ಯಗಳಲ್ಲಿ ಪ್ರಧಾನಿ ಮೋದಿಯವರಿಗಿಂತ ಮೊದಲು ಇಡಿ ಬರುತ್ತದೆ ಎಂಬುದು ದೇಶದ ಪ್ರತಿ ಮಗುವಿಗೆ ತಿಳಿದಿದೆ. ಇದು ತೆಲಂಗಾಣದಲ್ಲಿ ನಡೆದಿದೆ ಎಂದು ಟಿಆರ್‌ಎಸ್ ಶಾಸಕಿ ಕೆ. ಕವಿತಾ ಎಎನ್‌ಐಗೆ ಹೇಳಿಕೆ ನೀಡಿದ್ದಾರೆ.

ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ಅವರ ಪುತ್ರಿ ಮಾತನಾಡಿ, ಮುಂದಿನ ವರ್ಷ ಚುನಾವಣೆ ನಡೆಯಲಿರುವ ತೆಲಂಗಾಣದಲ್ಲೂ ಅದೇ ಆಗುತ್ತಿದೆ. ರಾಜ್ಯದಲ್ಲಿ ಪ್ರಧಾನಿ ಮೋದಿಯವರಿಗಿಂತ ಮೊದಲು ಇಡಿ ಬಂದಿದೆ. ನಾವು ಅವರನ್ನು ಸ್ವಾಗತಿಸಿದ್ದೇವೆ ಮತ್ತು ಅವರೊಂದಿಗೆ ಸಹಕರಿಸುತ್ತೇವೆ. ಬಿಜೆಪಿಯವರು ಚೀಪ್ ಟ್ರಿಕ್ಸ್ ಆಡುತ್ತಿದ್ದಾರೆ ಎಂದು ಕಿಡಿ ಕಾರಿದರು.

ನಾವು ಮತ್ತು ನಮ್ಮ ಪಕ್ಷದ ನಾಯಕರು ಕೇಂದ್ರೀಯ ಸಂಸ್ಥೆಗಳಾದ ಜಾರಿ ನಿರ್ದೇಶನಾಲಯ ಮತ್ತು ಸಿಬಿಐನ ಯಾವುದೇ ತನಿಖೆಯನ್ನು ಎದುರಿಸಲು ಸಿದ್ಧ ಎಂದು ಟಿಆರ್‌ಎಸ್ ಎಂಎಲ್‌ಸಿ ಕವಿತಾ ಹೇಳಿದರು.

ದೆಹಲಿ ಮದ್ಯ ಹಗರಣ ಪ್ರಕರಣದ ಆರೋಪಿ ಅಮಿತ್ ಅರೋರಾ ಅವರ ಮೇಲೆ ಜಾರಿ ನಿರ್ದೇಶನಾಲಯದ ರಿಮಾಂಡ್ ವರದಿಯಲ್ಲಿ ತನ್ನ ಹೆಸರನ್ನು ಉಲ್ಲೇಖಿಸಲಾಗಿದೆ ಎಂಬ ವರದಿಗಳ ಕುರಿತು ಅವರು ಪ್ರತಿಕ್ರಿಯೆ ನೀಡಿದ್ದಾರೆ.

“ಕವಿತಾ ಕಲ್ವಕತ್ಲಾ” ಎಂಬ ವ್ಯಕ್ತಿ ಎರಡು ಫೋನ್‌ಗಳನ್ನು ಬಳಸಿದ್ದಾರೆ ಮತ್ತು ಅವರ IMEI 10 ಬಾರಿ ಬದಲಾಗಿದೆ ಎಂದು ಕೇಂದ್ರೀಯ ಸಂಸ್ಥೆ ತನ್ನ ರಿಮಾಂಡ್ ವರದಿಯಲ್ಲಿ ತಿಳಿಸಿದೆ. ಇಡಿ ಕ್ರಮವು ತೆಲಂಗಾಣದಲ್ಲಿ ಪ್ರತಿಭಟನೆಗೆ ಕಾರಣವಾಗಿದ್ದು, ಹೆಚ್ಚಿನ ಸಂಖ್ಯೆಯ ಟಿಆರ್‌ಎಸ್ ಕಾರ್ಯಕರ್ತರು ಕವಿತಾ ಅವರ ನಿವಾಸದಲ್ಲಿ ಜಮಾಯಿಸಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.