ರಾಜೀವ್ ಗಾಂಧಿ ಹತ್ಯೆಗೆ ಬಿಜೆಪಿಯೇ ಕಾರಣ: ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್
Team Udayavani, May 9, 2019, 11:14 AM IST
ಹೊಸದಿಲ್ಲಿ : ‘ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹತ್ಯೆಗೆ ಬಿಜೆಪಿಯೇ ಕಾರಣ’ ಎಂದು ಹಿರಿಯ ಕಾಂಗ್ರೆಸ್ ನಾಯಕ ಮತ್ತು ರಾಜ್ಯಸಭಾ ಸದಸ್ಯರಾಗಿರುವ ಅಹ್ಮದ್ ಪಟೇಲ್ ಆರೋಪಿಸಿದ್ದಾರೆ.
“ಬಿಜೆಪಿ ಬೆಂಬಲಿತ ವಿ ಪಿ ಸಿಂಗ್ ಸರಕಾರ ರಾಜೀವ್ ಗಾಂಧಿಗೆ ಅಗತ್ಯವಿದ್ದ ಹೆಚ್ಚುವರಿ ಭದ್ರತೆಯನ್ನು ಕೊಡಲು ನಿರಾಕರಿಸಿತು. ರಾಜೀವ್ ಗಾಂಧಿ ಅವರ ಹತ್ಯೆಯಾಗಬಹುದೆಂಬ ಬಗ್ಗೆ ಗುಪ್ತಚರ ಮಾಹಿತಿ ಇದ್ದಾಗ್ಯೂ, ಪದೇ ಪದೇ ಹೆಚ್ಚುವರಿ ಭದ್ರತೆಗೆ ಕೋರಿಕೆ ಸಲ್ಲಿಸಿದ ಹೊರತಾಗಿಯೂ, ರಾಜೀವ್ ಗೆ ಕೇವಲ ಒಬ್ಬ ಪಿಎಸ್ಓ ನನ್ನು ಕೊಡಲಾಯಿತು’ ಎಂದು ಪಟೇಲ್ ಹೇಳಿದ್ದಾರೆ.
“ಬಿಜೆಪಿಯ ದ್ವೇಷದ ಫಲವಾಗಿಯೇ ರಾಜೀವ್ ಜೀವ ಕಳೆದುಕೊಂಡರು. ಇವತ್ತು ಅವರು ತಮ್ಮ ವಿರುದ್ಧದ ಭ್ರಷ್ಟಾಚಾರಗಳ ನಿರಾಧಾರ ಆರೋಪಗಳಿಗೆ ಉತ್ತರಿಸಲು ನಮ್ಮೊಂದಿಗೆ ಇಲ್ಲ’ ಎಂದು ಅಹ್ಮದ್ ಪಟೇಲ್ ಟ್ವೀಟ್ ಮಾಡಿದ್ದಾರೆ.
ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರು ಭ್ರಷ್ಟಾಚಾರಿ ನಂಬರ್ 1 ಆಗಿಯೇ ತಮ್ಮ ಜೀವಿತವನ್ನು ಮುಗಿಸಿದರು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜೀವ್ ಹೆಸರನ್ನು ಚುನಾವಣಾ ಪ್ರಚಾರದ ನಡುವೆ ಎಳೆದು ತಂದಿರುವುದು ದುರದೃಷ್ಟಕರ; ಓರ್ವ ಪ್ರಧಾನಿಯ ಘನತೆಗೆ ಅದು ತಕ್ಕುದಲ್ಲ ಎಂದು ಪಟೇಲ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ