ರಾಜಸ್ಥಾನ ಸಿಎಂ ಹುದ್ದೆ: ಬಿಜೆಪಿಯಿಂದ ಸುಳ್ಳು ಸುದ್ದಿ;ಗೆಹ್ಲೋಟ್
Team Udayavani, Dec 14, 2018, 12:33 PM IST
ಜೈಪುರ: ರಾಜಸ್ಥಾನದಲ್ಲಿ ಮುಖ್ಯಮಂತ್ರಿ ಆಯ್ಕೆ ವಿಚಾರದಲ್ಲಿ ಪಕ್ಷ ತಡ ಮಾಡುತ್ತಿಲ್ಲ. ಬಿಜೆಪಿ ಈ ಬಗ್ಗೆ ಸುಳ್ಳು ಸುದ್ದಿಗಳನ್ನು ಹರಡುತ್ತಿದೆ ಎಂದು ಮಾಜಿ ಸಿಎಂ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್ ಹೇಳಿಕೆ ನೀಡಿದ್ದಾರೆ.
ಎಎನ್ಐನೊಂದಿಗೆ ಮಾತನಾಡಿದ ಗೆಹ್ಲೋಟ್ ‘ಬಿಜೆಪಿ ಮುಖ್ಯಮಂತ್ರಿ ಆಯ್ಕೆ ಮಾಡಲು ಉತ್ತರ ಪ್ರದೇಶದಲ್ಲಿ 7 ದಿನಗಳು ಮತ್ತು ಮಹಾರಾಷ್ಟ್ರದಲ್ಲಿ 9 ದಿನಗಳನ್ನು ತೆಗೆದುಕೊಂಡಿತ್ತು. ಆಯ್ಕೆ ಮಾಡಲು ಸ್ವಲ್ಪ ಸಮಯ ತಗಲುತ್ತದೆ. ವೀಕ್ಷಕರು ರಾಜ್ಯಗಳಿಗೆ ಆಗಮಿಸಿ ನಿರ್ಧಾರ ಕೈಗೊಳ್ಳುತ್ತಾರೆ ಇದಕ್ಕೆ ಸಮಯಾವಕಾಶ ಬೇಕಾಗುತ್ತದೆ’ ಎಂದರು.
ಅಶೋಕ್ ಗೆಹ್ಲೋಟ್ ಅವರು ಮುಖ್ಯಮಂತ್ರಿ ಹುದ್ದೆಯ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಆದರೆ ರಾಹುಲ್ ಗಾಂಧಿ ಆಪ್ತವಲಯದಲ್ಲಿ ಕಾಣಿಸಿಕೊಂಡಿರುವ ಯುವ ನಾಯಕ ಸಚಿನ್ ಪೈಲಟ್ ಅವರ ಹೆಸರು ಬಲವಾಗಿ ಕೇಳಿ ಬರುತ್ತಿದ್ದು ಬೆಂಬಲಿಗರು ಈಗಾಗಲೇ ಬೀದಿಗಳಿದು ಹೋರಾಟ ನಡೆಸುತ್ತಿದ್ದಾರೆ.