ಬಿಜೆಪಿ-ಜೆಡಿಯುಗೆ ಸಮಪಾಲು
Team Udayavani, Oct 27, 2018, 6:00 AM IST
ಹೊಸದಿಲ್ಲಿ: ಬಿಹಾರದಲ್ಲಿ ಬಹುಚರ್ಚಿತ ಬಿಜೆಪಿ ಹಾಗೂ ಜೆಡಿಯು ಮಧ್ಯದ ಸೀಟು ಹಂಚಿಕೆ ಮಾತುಕತೆ ಕೊನೆಗೂ ಅಂತಿಮ ಹಂತ ತಲುಪಿದೆ. ಎರಡೂ ಪಕ್ಷಗಳು ಸಮಾನ ಸಂಖ್ಯೆಯ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿವೆ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಷಾ ಹೇಳಿದ್ದಾರೆ.
ಅಲ್ಲದೆ ಎನ್ಡಿಎ ಮೈತ್ರಿ ಪಕ್ಷಗಳಾದ ಲೋಕ ಜನಶಕ್ತಿ ಪಕ್ಷ ಮತ್ತು ರಾಷ್ಟ್ರೀಯ ಲೋಕ ಸಮತಾ ಪಕ್ಷಕ್ಕೆ ಕೂಡ ಉತ್ತಮ ಪ್ರತಿನಿಧಿತ್ವ ನೀಡಲಾಗುತ್ತದೆ. ಮುಂದಿನ 3-4 ದಿನಗಳಲ್ಲಿ ವಿವರ ನೀಡಲಾಗುತ್ತದೆ ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ಮತ್ತು ಅಮಿತ್ ಷಾ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಮೂಲಗಳ ಪ್ರಕಾರ ಬಿಜೆಪಿ ಮತ್ತು ಜೆಡಿಯು ತಲಾ 16ರಲ್ಲಿ ಸ್ಪರ್ಧಿಸಲಿವೆ. ಎಲ್ಜೆಪಿ 6 ಮತ್ತು ಆರ್ಎಲ್ಎಸ್ಪಿ 2 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ. ಒಂದೆಡೆ ಬಿಜೆಪಿ ಹಾಗೂ ಜೆಡಿಯು ಸೀಟು ಹಂಚಿಕೆ ಅಂತಿಮ ಹಂತ ತಲುಪುತ್ತಿದ್ದಂತೆಯೇ, ಆರ್ಜೆಡಿ ನಾಯಕ ತೇಜಸ್ವಿ ಯಾದವ್ರನ್ನು ಆರ್ಎಲ್ಎಸ್ಪಿ ಮುಖಂಡ ಉಪೇಂದ್ರ ಖುಶ್ವಾಹ ಭೇಟಿ ಮಾಡಿದ್ದಾರೆ.
ಕಾಂಗ್ರೆಸ್ಗೆ ಬಿಕ್ಕಟ್ಟು: ಮಧ್ಯ ಪ್ರದೇಶದಲ್ಲಿ ಜೈಆದಿವಾಸಿ ಯುವ ಶಕ್ತಿ ಪಕ್ಷದ ಜೊತೆಗೆ ಕಾಂಗ್ರೆಸ್ ಮಾತುಕತೆ ಬಿಕ್ಕಟ್ಟಿಗೆ ಕಾರಣವಾಗಿದೆ. ಎರಡೂ ಪಕ್ಷಗಳೂ ಕುಕ್ಷಿ ಕ್ಷೇತ್ರದಿಂದ ಸ್ಪರ್ಧಿಸಲು ಬಯಸುತ್ತಿವೆ. ಹಾಲಿ ಕುಕ್ಷಿಯಲ್ಲಿ ಕಾಂಗ್ರೆಸ್ ಶಾಸಕರಿದ್ದು, ಜೆಎವೈಎಸ್ ತನ್ನ ಪ್ರಭಾವವನ್ನು ಹೆಚ್ಚಿಸಿಕೊಂಡಿದೆ. ಜೆಎವೈಎಸ್ ಮುಖಂಡ ಹರಿಲಾಲ್ ಈ ಕ್ಷೇತ್ರದ ಟಿಕೆಟ್ಗೆ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.
ಪ್ರಚಾರಕ್ಕೆ ಸಮ್ಮತಿ ಇರಲಿಲ್ಲ
2017ರ ಉತ್ತರ ಪ್ರದೇಶ ಚುನಾವಣೆಯ ವೇಳೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಪ್ರಚಾರ ನಡೆಸಲು
ಕಾಂಗ್ರೆಸ್ ಹೈಕಮಾಂಡ್ ನಿರಾಕರಿಸಿತ್ತು ಎಂದು ಚುನಾವಣಾ ತಂತ್ರಗಾರಿಕೆ ನಿಪುಣ ಪ್ರಶಾಂತ್ ಕಿಶೋರ್ ಹೇಳಿದ್ದಾರೆ. “ರಿಪಬ್ಲಿಕ್ ಟಿವಿ’ ಜತೆಗೆ ಮಾತನಾಡಿದ ಅವರು, 2017ರಲ್ಲಿ ಕಾಂಗ್ರೆಸ್ ಚುನಾವಣೆ ಪ್ರಚಾರ ಉಸ್ತುವಾರಿ ಹೊತ್ತಿದ್ದ ಪ್ರಶಾಂತ್, ಪ್ರಿಯಾಂಕಾ ಕೂಡ ಪ್ರಚಾರ ಮಾಡಬೇಕು ಎಂದು ಪ್ರಸ್ತಾವನೆ ಸಲ್ಲಿಸಿದ್ದರು. ಆದರೆ ಕಾಂಗ್ರೆಸ್ ಹೈಕಮಾಂಡ್ ಇದಕ್ಕೆ ಒಪ್ಪಿರಲಿಲ್ಲ ಎಂದಿದ್ದಾರೆ. ಪ್ರಶಾಂತ್ ಕಿಶೋರ್ ಸದ್ಯ ಜೆಡಿಯು ಉಪಾಧ್ಯಕ್ಷರಾಗಿದ್ದು, ಕಾಂಗ್ರೆಸ್ ವಲಯದಲ್ಲಿ ಈ ಹೇಳಿಕೆ ಕಸಿವಿಸಿ ಉಂಟು ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ