ಮುಂಬೈ: ಬಿಜೆಪಿ ನಾಯಕ ಸೇರಿ ಐವರನ್ನು ಗುಂಡಿಕ್ಕಿ ಹತ್ಯೆ
Team Udayavani, Oct 7, 2019, 8:30 AM IST
ಮುಂಬೈ: ಸ್ಥಳಿಯ ಭಾರತೀಯ ಜನತಾ ಪಾರ್ಟಿ ನಾಯಕ ಮತ್ತು ನಾಲ್ವರು ಕುಟುಂಬ ಸದಸ್ಯರನ್ನು ಗುಂಡಿಕ್ಕಿ ಕೊಂದ ಘಟನೆ ಮಹರಾಷ್ಟ್ರದ ಜಲಗಾಂವ್ ಜಿಲ್ಲೆಯಲ್ಲಿ ರವಿವಾರ ತಡರಾತ್ರಿ ನಡೆದಿದೆ.
ಬಿಜೆಪಿ ಕಾರ್ಪೋರೇಟರ್ ರವೀಂದ್ರ ಖಾರಟ್ ಮತ್ತು ಅವರ ಕುಟುಂಬ ಸದಸ್ಯರನ್ನು ಅವರ ಮನೆಯಲ್ಲಿಯೇ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಈ ಸಂಬಂಧ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಬಿಜೆಪಿ ನಾಯಕ ರವೀಂದ್ರ ಖಾರಟ್, ಸಹೋದರ ಸುನೀಲ್ ಖಾರಟ್, ಮಕ್ಕಳಾದ ರೋಹಿತ್ ಮತ್ತು ಪ್ರೇಮ್ ಸಾಗರ್ ಮತ್ತು ಗೆಳೆಯ ಸಮಿತ್ ಫಡ್ರೆ ಹತ್ಯೆಯಾದವರು.
ಇಬ್ಬರು ಸ್ಥಳದಲ್ಲೇ ಮೃತರಾದರೆ ಮತ್ತೆ ಮೂವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ