ಮಧ್ಯಪ್ರದೇಶ ರಾಜ್ಯಪಾಲ ಲಾಲ್ಜಿ ಟಂಡನ್ ನಿಧನ
ಜೂ.11ರಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ನಾಯಕ
Team Udayavani, Jul 22, 2020, 6:05 AM IST
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಮಂಗಳವಾರ ಲಕ್ನೋದಲ್ಲಿ ಲಾಲ್ಜಿ ಟಂಡನ್ಗೆ ಅಂತಿಮ ನಮನ ಸಲ್ಲಿಸಿದರು.
ಲಕ್ನೋ: ಮಧ್ಯ ಪ್ರದೇಶ ರಾಜ್ಯಪಾಲ, ಬಿಜೆಪಿ ಹಿರಿಯ ನಾಯಕ ಲಾಲ್ಜಿ ಟಂಡನ್ (85) ನಿಧನ ಹೊಂದಿದರು.
ಉಸಿರಾಟ ಸಮಸ್ಯೆ ಸೇರಿದಂತೆ ವಿವಿಧ ಕಾಯಿಲೆ ಗಳಿಂದ ಬಳಲುತ್ತಿದ್ದ ಅವರು ಜೂನ್ 11ರಂದು ಲಕ್ನೋದ ಮೇದಾಂತ ಆಸ್ಪತ್ರೆಗೆ ದಾಖಲಾಗಿದ್ದರು.
ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಬೆಳಗ್ಗೆ 5.35ಕ್ಕೆ ನಿಧನ ಹೊಂದಿದರು.
ಬಿಹಾರದಲ್ಲಿ 2018ರ ಆಗಸ್ಟ್ನಿಂದ 2019ರ ಜುಲೈವರೆಗೆ ರಾಜ್ಯಪಾಲರಾಗಿ ಕಾರ್ಯನಿರ್ವಹಿಸಿ ದ್ದರು. ಬಳಿಕ 2019ರಲ್ಲಿ ಮಧ್ಯಪ್ರದೇಶ ರಾಜ್ಯಪಾಲರಾದರು.
ಉತ್ತರ ಪ್ರದೇಶದಲ್ಲಿ 1999-2003ರ ಅವಧಿಯಲ್ಲಿ ವಿವಿಧ ಖಾತೆಗಳನ್ನು ನಿರ್ವಹಿಸಿದ್ದರು ಅವರ ಪುತ್ರ ಅಶುತೋಷ್ ಟಂಡನ್ ಪ್ರಸ್ತುತ ಉತ್ತರ ಪ್ರದೇಶದಲ್ಲಿ ಸಚಿವರಾಗಿದ್ದಾರೆ. ಲಾಲ್ಜಿ ಟಂಡನ್ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ ಕಾರಣ ಉತ್ತರಪ್ರದೇಶ ರಾಜ್ಯ ಪಾಲರಾಗಿರುವ ಆನಂದಿ ಬೆನ್ ಪಟೇಲ್ ಮಧ್ಯಪ್ರದೇಶ ಗವರ್ನರ್ ಆಗಿ ಹೆಚ್ಚುವರಿ ಹೊಣೆ ಹೊತ್ತಿದ್ದರು.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಮಾರ್ಗದರ್ಶನದಲ್ಲಿ ರಾಜಕೀಯ ಏಳಿಗೆ ಕಂಡಿದ್ದ ಟಂಡನ್ 2009ರಲ್ಲಿ ಲಕ್ನೋ ಲೋಕಸಭಾ ಕ್ಷೇತ್ರದಲ್ಲಿ ಸಂಸದರಾಗಿದ್ದರು. ಆರ್ಎಸ್ಎಸ್ ಜೊತೆ ನಿಕಟ ಸಂಪರ್ಕ ಹೊಂದಿದ್ದ ಅವರು ಮೃದು ಹಿಂದುತ್ವ ಧೋರಣೆ ಹೊಂದಿದ್ದರು. ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿದ್ದರು. ಎಲ್ಲ ಪಕ್ಷಗಳ ನಾಯಕರೊಂದಿಗೆ ಉತ್ತಮ ಒಡನಾಟ ಹೊಂದಿದ್ದರು.
ಬಿಎಸ್ಪಿ ನೇತಾರೆ ಮಾಯಾವತಿ ಅವರು ಪ್ರತೀವರ್ಷ ಟಂಡನ್ಗೆ ರಾಖೀ ಕಟ್ಟುತ್ತಿದ್ದರು. 1970ರಲ್ಲಿ ಕಾರ್ಪೊರೇಟರ್ ಆಗಿ ರಾಜಕೀಯ ಜೀವನ ಆರಂಭಿಸಿದ್ದರು. ಲಕ್ನೋದಲ್ಲಿ ಟಂಡನ್ ಅಂತ್ಯ ಕ್ರಿಯೆ ನೆರವೇರಿತು.
ಮೋದಿ ಸಂತಾಪ: ಟಂಡನ್ ನಿಧನಕ್ಕೆ ಟ್ವೀಟ್ ಮೂಲಕ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಸಮಾಜಮುಖಿ ಕಾರ್ಯಗಳ ಮೂಲಕ ಶ್ರೀ ಲಾಲ್ಜಿ ಟಂಡನ್ ನೆನಪಿನಲ್ಲಿ ಉಳಿಯುತ್ತಾರೆ. ಉತ್ತರ ಪ್ರದೇಶದಲ್ಲಿ ಬಿಜೆಪಿ ಸಂಘಟಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು.
ಅತ್ಯುತ್ತಮ ಆಡಳಿತಗಾರರಾಗಿದ್ದರು. ಅವರ ನಿಧನದಿಂದ ದುಃಖಿತನಾಗಿದ್ದೇನೆ ಎಂದು ತಿಳಿಸಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಮಾಜಿ ಸಿಎಂ ಮಾಯಾವತಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತಿತರ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ