ಮರಣ ದಂಡನೆಗೆ ಅರ್ಹ:ರೈಲಿನಲ್ಲಿ ಬಿಜೆಪಿ ನಾಯಕನಿಂದ 10ರ ಬಾಲೆಯ ರೇಪ್
Team Udayavani, Apr 23, 2018, 3:51 PM IST
ತಿರುವನಂತಪುರ : ತಿರುವನಂತಪುರ – ಚೆನ್ನೈ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣದ ವೇಳೆ ನಿದ್ರಿಸಿಕೊಂಡಿದ್ದ 10 ವರ್ಷ ಪ್ರಾಯದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಭಾರತೀಯ ಜನತಾ ಪಕ್ಷದ ನಾಯಕ ಕೆ ಪಿ ಪ್ರೇಮ್ ಅನಂತ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರೇಮ್ ಅನಂತ್ 2006ರಲ್ಲಿ ತಮಿಳು ನಾಡಿನ ಆರ್ ಕೆ ನಗರ ಕ್ಷೇತ್ರದಿಂದ ಸ್ಪರ್ಧಿಸಿ ವಿಧಾನಸಭೆಗೆ ಆಯ್ಕೆಯಾಗಿದ್ದ.
ತನ್ನ ಮನೆಯವರ ಜತೆಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಬಾಲಕಿಯು ನಿದ್ರಿಸಿಕೊಂಡಿದ್ದಾಗ ಪ್ರೇಮ್ ಅನಂತ್ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ. ತನ್ನ ಮೇಲಾದ ಲೈಂಗಿಕ ದಾಳಿಯಿಂದ ಎಚ್ಚರಗೊಂಡ ಬಾಲಕಿಯು ಸಹಾಯಕ್ಕಾಗಿ ಕೂಗಿಕೊಂಡಾಗ ಆಕೆಯ ಮನೆಯವರು ಒಡನೆಯೇ ಎಚ್ಚರವಾಗಿ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದರು.
12 ವರ್ಷದೊಳಗಿನ ಹುಡುಗಿಯರ ಮೇಲೆ ಲೈಂಗಿಕ ಅತ್ಯಾಚಾರ, ದೌರ್ಜನ್ಯ ಎಸಗುವ ಅಪರಾಧಿಗಳಿಗೆ ಮರಣ ದಂಡನೆಯನ್ನು ವಿಧಿಸುವ ಸುಗ್ರಿವಾಜ್ಞೆಗೆ ರಾಷ್ಟ್ರಪತಿವರು ಸಹಿ ಹಾಕಿದ ದಿನವೇ ಬಿಜೆಪಿ ನಾಯಕನಿಂದ ಈ ನಾಚಿಕೆಗೇಡಿನ ಅತ್ಯಾಚಾರ ಕೃತ್ಯ ನಡೆದಿದೆ. ಅಂತೆಯೇ ಆತನ ಈ ಕೃತ್ಯ ಮರಣ ದಂಡನೆ ಶಿಕ್ಷೆಗೆ ಅರ್ಹವಾದುದೆಂದು ಜನರು ಆಡಿಕೊಂಡಿದ್ದಾರೆ.
ಈರೋಡ್ ರೈಲ್ವೆ ಪೊಲೀಸರು ಆರೋಪಿ ಪ್ರೇಮ್ ಅನಂತ್ ವಿರುದ್ಧ ಪೋಕ್ಸೋ ಕಾಯಿದೆಯಡಿ ಕೇಸು ದಾಖಲಿಸಿಕೊಂಡು ಆತನನ್ನು ನ್ಯಾಯಾಂಗ ಕಸ್ಟಡಿಗೆ ಒಪ್ಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!