ಉತ್ತರ ಪ್ರದೇಶ: ಸೋಲಿನ ಯೋಗ


Team Udayavani, Mar 15, 2018, 6:00 AM IST

24.jpg

ಹೊಸದಿಲ್ಲಿ: ಉತ್ತರ ಪ್ರದೇಶದ ಎರಡು ಹೈವೋಲ್ಟೆಜ್‌ ಕ್ಷೇತ್ರ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಮತ್ತು ಉಪ 
ಮುಖ್ಯ ಮಂತ್ರಿ ಕೇಶವ್‌ ಪ್ರಸಾದ ಮೌರ್ಯ ಕ್ಷೇತ್ರಗಳಾದ ಗೋರಖ್‌ಪುರ ಮತ್ತು ಫ‌ೂಲ್ಪುರದಲ್ಲಿ ಬಿಜೆಪಿ ಮುಖಭಂಗ ಅನುಭವಿಸಿದೆ.

ಯೋಗಿ ಆದಿತ್ಯನಾಥ್‌ ಮತ್ತು ಕೇಶವ ಪ್ರಸಾದ್‌ ಮೌರ್ಯ ಅವರು ಸಿಎಂ ಮತ್ತು ಡಿಸಿಎಂ ಸ್ಥಾನಕ್ಕೇರಿದ ಬಳಿಕ ಲೋಕ ಸಭೆ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದರಿಂದ ಈ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿತ್ತು. ಈ ಎರಡೂ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಸಮಾಜವಾದಿ, ಬಹುಜನ ಸಮಾಜವಾದಿ ಪಕ್ಷಗಳು ಮೈತ್ರಿ ಮಾಡಿಕೊಂಡ ತಂತ್ರಗಾರಿಕೆ ಕೆಲಸ ಮಾಡಿದ್ದು, ಅಖೀಲೇಶ್‌ ಅಭ್ಯರ್ಥಿಗಳೇ ಗೆದ್ದಿದ್ದಾರೆ. ಆದರೆ, ಈ ಸೋಲು ಬಿಜೆಪಿ ಪಾಲಿಗೆ ಭರಿಸಲಾಗದ ಪೆಟ್ಟು ನೀಡಿದೆ. ಇನ್ನು 1989ರಿಂದಲೂ ಗೋರಖ್ಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳೇ ಗೆಲ್ಲುತ್ತಾ ಬಂದಿದ್ದು ಭದ್ರ ಕೋಟೆಯಂತಿತ್ತು. ಫ‌ೂಲ್ಪು ರ ಕ್ಷೇತ್ರ ಕಳೆದ ಬಾರಿ ಯಷ್ಟೇ ಬಿಜೆಪಿ ಮುಡಿಗೆ ಬಂದಿತ್ತು.  ಈ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನ ಎರಡೂ ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದಾರೆ.

ಹಾವು ಮತ್ತು ಮುಂಗುಸಿ ಒಟ್ಟಾಗಿದ್ದರಿಂದ ಬಿಜೆಪಿ ಈ ಸ್ಥಾನವನ್ನು ಕಳೆದುಕೊಂಡಿತು ಎಂದು ಎಸ್‌ಪಿ ಹಾಗೂ ಬಿಎಸ್‌ಪಿಯನ್ನು ಉಲ್ಲೇಖೀಸಿ ಉ.ಪ್ರ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹೇಳಿದ್ದಾರೆ. ಜತೆಗೆ ಪಕ್ಷದ ಅತಿ ಯಾದ ಆತ್ಮ 
ವಿಶ್ವಾಸವೂ ಸೋಲಿಗೆ ಕಾರಣವಾಗಿದೆ ಎಂದು ಹೇಳಿದ್ದಾರೆ. 

2019ರಲ್ಲೂ ಇದೇ ಒಪ್ಪಂದ?: 
ಗೆಲುವು ಖಚಿತವಾಗುತ್ತಿದ್ದಂತೆಯೇ, ಅಖೀಲೇಶ್‌ ಯಾದವ್‌ ಸುದ್ದಿಗೋಷ್ಠಿಯಲ್ಲಿ ಮಾಯಾವತಿಗೆ ಧನ್ಯವಾದ ತಿಳಿಸಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲೂ ಈ ಮೈತ್ರಿ ಮುಂದುವರಿಯುವ ಸಾಧ್ಯತೆಗಳಿವೆ.

ಬಿಹಾರದಲ್ಲಿ ಆರ್‌ಜೆಡಿ ಮೇಲುಗೈ
ಇದೇ ವೇಳೆ ಬಿಹಾರದಲ್ಲಿ ಆರ್‌ಜೆಡಿ ಮೇಲುಗೈ ಸಾಧಿಸಿದೆ. ಅರಾರಿಯಾ ಮತ್ತು ಜೆಹಾನಾಬಾದ್‌ ಲೋಕ ಸಭಾ ಕ್ಷೇತ್ರಗಳಲ್ಲಿ ಆರ್‌ಜೆಡಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಇನ್ನು ಬಭುವಾ ಕ್ಷೇತ್ರದಲ್ಲಿ ಬಿಜೆ ಪಿಯ ರಿಂಕಿ ರಾಣಿ ಪಾಂಡೆ ಗೆದ್ದಿದ್ದಾರೆ. ಗಮನಾರ್ಹ ಅಂಶವೆಂದರೆ ಆಯಾಯ ಕ್ಷೇತ್ರಗಳಲ್ಲಿ ಆರ್‌ಜೆಡಿ ಮತ್ತು ಬಿಜೆಪಿ ಗೆದ್ದಿದ್ದರೂ, ಸರ್ಕಾರಕ್ಕೆ ಹಿನ್ನಡೆ ಎಂದೇ ವ್ಯಾಖ್ಯಾನಿಸಲಾಗುತ್ತಿದೆ.

ನಮ್ಮ ಅತಿಯಾದ ಆತ್ಮವಿಶ್ವಾಸ ಮತ್ತು ಎದುರಾಳಿಗಳ ಒಳ ಮೈತ್ರಿಯನ್ನು ನಾವು ಸರಿಯಾಗಿ ವಿಶ್ಲೇಷಣೆ ನಡೆಸದೇ ಇರುವುದು ನಮ್ಮ ಸೋಲಿಗೆ ಕಾರಣವಾಯಿತು.
-ಯೋಗಿ ಆದಿತ್ಯನಾಥ್‌, ಉ.ಪ್ರ. ಸಿಎಂ

ಬಿಜೆಪಿ ಬಗ್ಗೆ ಜನರು ಕೋಪ ಗೊಂಡಿದ್ದಾರೆ ಎಂಬುದು ಈ ಫ‌ಲಿತಾಂಶಗಳಿಂದ ಸ್ಪಷ್ಟವಾಗಿ ಗೊತ್ತಾಗುತ್ತದೆ.ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ನ ಶಕ್ತಿ ವೃದ್ಧಿಗೆ ಪ್ರಯತ್ನ ನಡೆಸುತ್ತೇವೆ. 
ರಾಹುಲ್‌ ಗಾಂಧಿ, ಕಾಂಗ್ರೆಸ್‌ ಅಧ್ಯಕ್ಷ

ಟಾಪ್ ನ್ಯೂಸ್

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.