ಜಮ್ಮು-ಕಾಶ್ಮೀರ: ಬಂಡುಕೋರ ಪಿಡಿಪಿ, ಪಕ್ಷೇತರರೊಂದಿಗೆ ಬಿಜೆಪಿ ಸರಕಾರ?
Team Udayavani, Jul 6, 2018, 4:04 PM IST
ಹೊಸದಿಲ್ಲಿ : ರಾಜಕಾರಣದಲ್ಲಿ “ಅಸಂಭವ’ ಎಂಬ ಪದವೇ ಇಲ್ಲ. ಅಂತೆಯೇ ಪಿಡಿಪಿ ಮೈತ್ರಿ ಕೂಟದಿಂದ ಹೊರಬಂದಿರುವ ಭಾರತೀಯ ಜನತಾ ಪಕ್ಷ ಇದೀಗ ಜಮ್ಮು ಕಾಶ್ಮೀರದಲ್ಲಿ ಬಂಡುಕೋರ ಪಿಡಿಪಿ ಸದಸ್ಯರು ಮತ್ತು ಪಕ್ಷೇತರರ ನೆರವಿನಲ್ಲಿ ಹೊಸದಾಗಿ ಸರಕಾರ ಮಾಡುವ ಸಾಧ್ಯತೆ ಇದೆ ಎಂದು ತಾಜಾ ವರದಿಗಳು ತಿಳಿಸಿವೆ.
ಈ ನಿಟ್ಟಿನಲ್ಲಿ ಬಿಜೆಪಿ ಈಗಾಗಲೇ ಬಂಡುಕೋರ ಪಿಡಿಪಿ ಸದಸ್ಯರನ್ನು ಮತ್ತು ಪಕ್ಷೇತರರನ್ನು ಸಂಪರ್ಕಿಸುವ ಕೆಲಸದಲ್ಲಿ ನಿರತವಾಗಿದೆ; ಅಮರನಾಥ ಯಾತ್ರೆ ಮುಗಿದೊಡನೆಯೇ ಬಿಜೆಪಿ ಜಮ್ಮು ಕಾಶ್ಮೀರದಲ್ಲಿ ಹೊಸ ಸರಕಾರ ರಚಿಸುವ ಯತ್ನ ನಡೆಸಲಿದೆ ಎಂದು ಮೂಲಗಳು ತಿಳಿಸಿವೆ.
ಇದೇ ರೀತಿ ಹಾಲಿ ರಾಜ್ಯಪಾಲ ಎನ್ ಎನ್ ವೋರಾ ಅವರನ್ನು ಬದಲಾಯಿಸಿ ಅವರ ಸ್ಥಾನಕ್ಕೆ ರಾಜ್ಯದ ಕೆಲವು ಪ್ರಮುಖ ವ್ಯಕ್ತಿಗಳನ್ನು ಪರಿಗಣಿಸುವ ಸಾಧ್ಯತೆಯೂ ಇದೆ ಎನ್ನಲಾಗಿದೆ.
ಕಳೆದ ಜೂನ್ ತಿಂಗಳಲ್ಲಿ ಬಿಜೆಪಿ ಮೈತ್ರಿಕೂಟದಿಂದ ಹೊರ ನಡೆದ ಪರಿಣಾಮ ಪಿಡಿಪಿ ಮುಖ್ಯಮಂತ್ರಿ ಮೆಹಬೂಬ ಮುಪ್ತಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು.
87 ಸದಸ್ಯ ಬಲದ ಜಮ್ಮು ಕಾಶ್ಮೀರದ ವಿಧಾನಸಭೆಯಲ್ಲಿ ಮೆಹಬೂಬ ಅವರ ಪಿಡಿಪಿಗೆ 28 ಸ್ಥಾನವಿದೆ; ಬಿಜೆಪಿಗೆ 25 ಸ್ಥಾನವಿದೆ.
“ಮೂರು ವರ್ಷಗಳ ಹಿಂದೆ ನಾವು ಪಿಡಿಪಿ ಜತೆಗೆ ಸೇರಿಕೊಂಡು ಮೈತ್ರಿ ಸರಕಾರ ರಚಿಸಿದ್ದೆವು; ಆದರೆ ಪಿಡಿಪಿ ಜತೆ ಮುಂದುವರಿಯುವುದು ಅಸಾಧ್ಯವೆಂದು ತಿಳಿದು ನಾವು ಮೈತ್ರಿಕೂಟದಿಂದ ಹೊರಬರಲು ನಿರ್ಧರಿಸಿದೆವು’ ಎಂದು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ ಮಾಧವ ಹೇಳಿದ್ದರು . ಅಂತೆಯೇ ರಾಜ್ಯದ ಆಡಳಿತೆಯನ್ನು ರಾಜ್ಯಪಾಲರ ಕೈಗೆ ಒಪ್ಪಿಸುವ ಕಾಲ ಈಗ ಒದಗಿ ಬಂದಿದೆ ಎಂದವರು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು