![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಮುಫ್ತಿ ಸಂಪುಟಕ್ಕೆ ಬಿಜೆಪಿ ಸಚಿವರ ರಾಜೀನಾಮೆ?
Team Udayavani, Apr 18, 2018, 8:45 AM IST
![Mufti-18-4.jpg](https://www.udayavani.com/wp-content/uploads/2018/04/18/Mufti-18-4.jpg)
ಹೊಸದಿಲ್ಲಿ: ಮಹತ್ವದ ಬೆಳವಣಿಗೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಮೈತ್ರಿ ಸರಕಾರಕ್ಕೆ ರಾಜೀನಾಮೆ ನೀಡಲು ಬಿಜೆಪಿ ತನ್ನ 9 ಮಂದಿ ಸಚಿವರಿಗೆ ಸೂಚಿಸಿದೆ. ಆದರೆ ಪಿಡಿಪಿ ಸರಕಾರಕ್ಕೆ ಬೆಂಬಲ ಮುಂದುವರಿಯಲಿದೆ. ಮೂಲಗಳ ಪ್ರಕಾರ ಹೊಸ ಮುಖಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ಈ ಕ್ರಮ ಎಂದು ಹೇಳಲಾಗುತ್ತಿದೆ. ಕಥುವಾ ಪ್ರಕರಣದ ಆರೋಪಿಗಳ ಪರ ಆಯೋಜಿಸಲಾಗಿದ್ದ ರ್ಯಾಲಿಯಲ್ಲಿ ಬಿಜೆಪಿಯ ಇಬ್ಬರು ಸಚಿವರು ತ್ಯಾಗಪತ್ರ ನೀಡಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
ಸಿಬಿಐಗೆ ವಹಿಸಿ: ಇದೇ ವೇಳೆ, ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ಆರೋಪಿಗಳ ಪರ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಸಚಿವ ಸ್ಥಾನ ಕಳೆದುಕೊಂಡ ಬಿಜೆಪಿ ನಾಯಕ ಲಾಲ್ ಸಿಂಗ್ ಮಂಗಳವಾರ ಕಣಿವೆ ರಾಜ್ಯದಲ್ಲಿ ರ್ಯಾಲಿ ನಡೆಸಿ, ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಆಗ್ರಹಿಸಿದ್ದಾರೆ.
ಮತ್ತೂಂದು ಹೀನ ಕೃತ್ಯ: ಕಥುವಾ, ಉನ್ನಾವ್ ಪ್ರಕರಣಗಳು ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿರುವ ನಡುವೆಯೇ, ಉತ್ತರಪ್ರದೇಶದ ಇಟಾವ್ನಲ್ಲಿ ಮತ್ತೂಂದು ಹೀನ ಕೃತ್ಯ ವರದಿಯಾಗಿದೆ. ಮದುವೆ ಸಮಾರಂಭವೊಂದಕ್ಕೆ ಬಂದಿದ್ದ 7 ವರ್ಷದ ಬಾಲಕಿಯನ್ನು 19 ವರ್ಷದ ಯುವಕನೊಬ್ಬ ಅಪಹರಿಸಿ, ಅತ್ಯಾಚಾರಗೈದು, ಕೊಲೆ ಮಾಡಿದ್ದಾನೆ.
ಪತ್ರಕರ್ತೆ ವಿರುದ್ಧ ಕೇಸು
ಕಥುವಾ ಪ್ರಕರಣ ಖಂಡಿಸಿ ವ್ಯಂಗ್ಯಚಿತ್ರವೊಂದನ್ನು ಬರೆದು, ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದ ಹೈದರಾಬಾದ್ನ ಪತ್ರಕರ್ತೆ ವಿರುದ್ಧ ಮಂಗಳವಾರ ಕೇಸು ದಾಖಲಿಸಲಾಗಿದೆ. ಪತ್ರಕರ್ತೆ ಸ್ವಾತಿ ವದ್ಲಾಮುಡಿ ಅವರು ಶ್ರೀರಾಮನ ಭಕ್ತರಿಗೆ ಅವಮಾನವಾಗುವಂಥ ಕಾರ್ಟೂನ್ ಬರೆದಿದ್ದು, ಇದರಿಂದ ದೇಶದ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ ಎಂದು ಹಿಂದೂ ಸಂಘಟನೆಯೊಂದರ ಅಧ್ಯಕ್ಷ ಮತ್ತು ವಕೀಲರಾದ ಕಾಶಿಮ್ಶೆಟ್ಟಿ ಕರುಣ ಸಾಗರ್ ದೂರು ದಾಖಲಿಸಿದ್ದಾರೆ. ಸ್ವಾತಿ ತಮ್ಮ ಫೇಸ್ಬುಕ್ ವಾಲ್ನಲ್ಲಿ ‘ಸದ್ಯ ನನ್ನನ್ನು ರಾವಣ ಅಪಹರಿಸಿದ. ನಿಮ್ಮ ಭಕ್ತರು ಅಪಹರಿಸಲಿಲ್ಲ ಎನ್ನುವುದೇ ನೆಮ್ಮದಿಯ ಸಂಗತಿ’ ಎಂದು ಸೀತೆ ರಾಮನಿಗೆ ಹೇಳುವಂಥ ಕಾರ್ಟೂನ್ ಹಾಕಿಕೊಂಡಿದ್ದರು. ಇದು ವೈರಲ್ ಆಗಿತ್ತು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.