ಪ್ರವಾದಿ ಮೊಹಮ್ಮದ್ ಕುರಿತು ಅವಹೇಳನಾಕಾರಿ ಹೇಳಿಕೆ : ತೆಲಂಗಾಣ ಬಿಜೆಪಿ ಶಾಸಕ ರಾಜಾಸಿಂಗ್ ಬಂಧನ
Team Udayavani, Aug 23, 2022, 12:19 PM IST
ಹೈದರಾಬಾದ್ : ಪ್ರವಾದಿ ಮೊಹಮ್ಮದ್ ಕುರಿತ ಅವಹೇಳನಾಕಾರಿ ಹೇಳಿಕೆ ನೀಡಿರುವ ಆರೋಪದ ಮೇಲೆ ತೆಲಂಗಾಣದ ಬಿಜೆಪಿ ಶಾಸಕ ರಾಜಾ ಸಿಂಗ್ ಅವರನ್ನು ಮಂಗಳವಾರ ಪೊಲೀಸರು ಬಂಧಿಸಿದ್ದಾರೆ.
ಬಿಜೆಪಿ ಶಾಸಕ ರಾಜಾ ಸಿಂಗ್ ಪ್ರವಾದಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವ ವೀಡಿಯೊ ವೈರಲ್ ಆಗುತ್ತಿದ್ದಂತೆ ಸೋಮವಾರ ತಡರಾತ್ರಿ ನಗರ ಪೊಲೀಸ್ ಆಯುಕ್ತರ ಕಚೇರಿ ಮುಂಭಾಗ ಜಮಾಯಿಸಿದ್ದ ಪ್ರತಿಭಟನಾಕಾರರು, ಬಿಜೆಪಿ ಶಾಸಕ ರಾಜಾಸಿಂಗ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಠಾಣೆಯ ಮುಂಭಾಗ ಹಾಗೂ ನಗರದ ಹಲವೆಡೆ ಬೃಹತ್ ಪ್ರತಿಭಟನೆ ನಡೆಸಿದರು ಈ ವೇಳೆ ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.
ಪ್ರತಿಭಟನೆ ಗಂಭೀರ ಸ್ವರೂಪ ಪಡೆಯುತ್ತಿದ್ದಂತೆ ರಾಜಾ ಸಿಂಗ್ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಐಪಿಸಿ ಸೆಕ್ಷನ್ 505, 153 ಎ, 295ರ ಅಡಿಯಲ್ಲಿ ಪ್ರಕರಣ ದಾಖಲಿಸಿ ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ : ಬಿಗ್ ಬಾಸ್ ಮಾಜಿ ಸ್ಪರ್ಧಿ, ಬಿಜೆಪಿ ನಾಯಕಿ, ಟಿಕ್ ಟಾಕ್ ಸ್ಟಾರ್ ಸೋನಾಲಿ ಪೋಗಾಟ್ ಇನ್ನಿಲ್ಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ
Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್
Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ
CSIR: ಪ್ರತೀ ಸೋಮವಾರ ಇಸ್ತ್ರಿ ಹಾಕದ ವಸ್ತ್ರ ಧರಿಸಲು ಅವಕಾಶ!
West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ